ರಾಜ್ಯ

ಗ್ರೇಟರ್‌ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

ಬೆಳಗಾವಿ: ವಿಧಾನಸಭೆಯಲ್ಲಿ ಇಂದು ಗ್ರೇಟರ್‌ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕ ಮಂಡನೆ ಆಗಿದೆ.

ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್‌ ಅವರು ವಿಧಾನಸಭೆಯಲ್ಲಿ 2024ನೇ ಸಾಲಿನ ಗ್ರೇಟರ್‌ ಬೆಂಗಳೂರು ಆಡಳಿತ ವಿಧೇಯಕ ಮಂಡಿಸಿದರು.

ಬಳಿಕ ಮಾತನಾಡಿದ ಅವರು, ರಾಜ್ಯಸಭೆ ಸದಸ್ತೆ ಸುಧಾಮೂರ್ತಿ, ಚಿಕ್ಕಬಳ್ಳಾಪುರ ಸಂಸದ ಸುಧಾಕರ್‌ ಅವರ ಕ್ಷೇತ್ರದ ಕೆಲವು ಭಾಗ ಪಾಲಿಕೆ ವ್ಯಾಪ್ತಿಗೆ ಬರುತ್ತಿವೆ. ಜೊತೆಗೆ ಜಿಬಿಎ ಸದಸ್ಯರ ಪಟ್ಟಿಯಲ್ಲಿ ಪಾಲಿಕೆ ವ್ಯಾಪ್ತಿಯ ನಿವಾಸಿಯಾಗಿರುವ ಜನಪ್ರತಿನಿಧಿಗಳ ಹೆಸರು ಬಿಟ್ಟು ಹೋಗಿದ್ದು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ಪರಿಷತ್‌ ಸದಸ್ಯರನ್ನು ಜಿಬಿಎ ಸದಸ್ಯರನ್ನಾಗಿ ಸೇರಿಸಲು ಈ ತಿದ್ದುಪಡಿ ತರಲಾಗಿದೆ. ಸಿಎಂ ಅವರೇ ಜಿಬಿಎ ಮುಖ್ಯಸ್ಥರಾಗಿರುವ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಗಳು ಹಾಗೂ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರ ಹೆಸರು ಸೇರಿಸಲಾಗಿದೆ. ಇನ್ನು ಹಣಕಾಸು ಇಲಾಖೆ ಕಾರ್ಯದರ್ಶಿಗಳನ್ನು ಈ ಸದಸ್ಯರ ಸಮಿತಿಯಲ್ಲಿ ಸೇರಿಸಲು ನಿರ್ಧರಿಸಲಾಗಿದೆ. ಇತ್ತೀಚೆಗೆ ನಡೆದ ಜಿಬಿಎ ಮೊದಲ ಸಭೆಯಲ್ಲಿ ನಾವು ಈ ವಿಚಾರವನ್ನು ಗಮನಿಸಿದೆವು. ವಿರೋಧ ಪಕ್ಷದ ಸದಸ್ಯರು ತಮ್ಮ ರಾಜಕೀಯ ನಿಲುವಿನಿಂದಾಗಿ ಈ ಸಭೆಯಲ್ಲಿ ಭಾಗವಹಿಸಿರಲಿಲ್ಲ. ಹೀಗಾಗಿ ನಾವು ಈ ತಿದ್ದುಪಡಿ ತಂದು ಇವರುಗಳನ್ನು ಜಿಬಿಎ ಸದಸ್ಯರನ್ನಾಗಿ ಸೇರಿಸಲಾಗುತ್ತಿದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

6 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

8 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

9 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

10 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

12 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

12 hours ago