ರಾಜ್ಯ

ರಾಜ್ಯದಲ್ಲಿ ನ್ಯಾನೋ ಟೆಕ್ನಾಲಜಿ ಸಂಶೋಧನೆಗೆ ಹೆಚ್ಚಿನ ಒತ್ತು: ಸಚಿವ ಎನ್.ಎಸ್ ಬೋಸರಾಜು

ಬೆಂಗಳೂರು: ಕರ್ನಾಟಕವನ್ನು ನ್ಯಾನೋ ಟೆಕ್ನಾಲಜಿಯ ಕ್ಷೇತ್ರದ ಪ್ರಮುಖ ಸಂಶೋಧನಾ ರಾಜ್ಯ ವನ್ನಾಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಕರ್ನಾಟಕ ರಿಸರ್ಚ್ ಫೌಂಡೇಶನ್ ಹಾಗೂ ಇ-ಕೆಆರ್‌ಡಿಐಪಿ (e-KRDIP ಕರ್ನಾಟಕ ಆರ್‌&ಡಿ ಇನ್ನೋವೇಷನ್‌ ಫ್ಲಾಟ್‌ಫಾರಂ Karnataka R&D Innovation Platform e-KRDIP) ಮೂಲಕ ನ್ಯಾನೋ ಸಂಶೋಧನೆಗೆ ಒತ್ತು ನೀಡಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್ ಬೋಸರಾಜು ತಿಳಿಸಿದರು.

ಇಂದು ನಗರದ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ಬೆಂಗಳೂರು ಇಂಡಿಯಾ ನ್ಯಾನೋ 2024 ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು.

ಬೆಂಗಳೂರು ನಗರ ವಿಶ್ವದ ಪ್ರಮುಖ ಕರ್ನಾಟಕ ರಾಜ್ಯ ಕೈಗಾರಿಕಾ ಸ್ನೇಹಿ ರಾಜ್ಯಗಳಲ್ಲಿ ಪ್ರಮಖವಾಗಿದೆ. ಸ್ಟಾರ್ಟ್‌ ಅಪ್‌ಗಳ ಪ್ರೋತ್ಸಾಹಕ್ಕೆ, ಹೊಸ ಉದ್ಯಮಗಳ ಸ್ಥಾಪನೆಗೂ ರಾಜ್ಯ ಸರಕಾರ ಉತ್ತಮ ಸಹಕಾರ ನೀಡುತ್ತಿದೆ. ರಾಜ್ಯ ಸರಕಾರದ ಕ್ರಾಂತಿಕಾರಿ ಯೋಜನೆಗಳ ಪರಿಣಾಮದಿಂದ ವಿಶ್ವದ ಪ್ರಮುಖ ಸಂಸ್ಥೆಗಳು ಕರ್ನಾಟಕ ರಾಜ್ಯದಲ್ಲಿ ತಮ್ಮ ಘಟಕಗಳನ್ನು ಪ್ರಾರಂಭಿಸಿವೆ. ರಾಜ್ಯದಲ್ಲಿ ಸಂಶೋಧನೆಗೆ ಉತ್ತಮ ಪರಿಸರವಿದ್ದು, ಉತ್ತಮ ಮಾನವ ಸಂಪನ್ಮೂಲ ಕೂಡಾ ಲಭ್ಯವಿದೆ.

ರಾಜ್ಯದಲ್ಲಿ ಸ್ಟಾರ್ಟ್‌ ಅಪ್‌ಗಳು ಮತ್ತು ಉದ್ದಿಮೆಗಳು ನೂತನ ಉತ್ಪನ್ನಗಳ ಸಂಶೋಧನೆಗೆ ಮತ್ತು ಉತ್ಪಾದನೆಗೆ ಪೂರಕ ವಾತಾವರಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸಂಶೋಧನಾ ಫೌಂಡೇಶನ್‌ ಸ್ಥಾಪಿಸಲಾಗಿದೆ. ರಾಜ್ಯವನ್ನು ಸಂಶೋಧನಾ ಹಬ್‌ ಆಗಿಸುವ ನಿಟ್ಟಿನಲ್ಲಿ ಇದೊಂದು ಕ್ರಾಂತಿಕಾರಿ ಹೆಜ್ಜೆಯಾಗಿದೆ. ಹೊಸ ಸಂಶೋಧನೆಗಳು ಫಲ ಜನ ಸಾಮಾನ್ಯರಿಗೆ, ಸ್ಟಾರ್ಟ್‌ ಅಪ್‌ಗಳಿಗೆ, ಉದ್ದಿಮೆಗಳಿಗೆ ತಲುಪಿಸುವ ನಿಟ್ಟಿನಲ್ಲಿ ಇ-ಕೆಆರ್‌ಡಿಐಪಿ (ಕರ್ನಾಟಕ ಆರ್‌&ಡಿ ಇನ್ನೋವೇಷನ್‌ ಫ್ಲಾಟ್‌ಫಾರಂ Karnataka R&D Innovation Platform e-KRDIP) ಯನ್ನು ಕೂಡಾ ಸ್ಥಾಪಿಸಲಾಗುತ್ತಿದೆ. ಈ ಎರಡು ಸಂಸ್ಥೆಗಳ ಮೂಲಕ ನ್ಯಾನೋ ಟೆಕ್ನಾಲಜಿ ಸಂಶೋಧನೆ ಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

ಬೆಂಗಳೂರು ಇಂಡಿಯಾ ನ್ಯಾನೋ 2024 ಮಹತ್ವದ ಸಮಾವೇಶ ವಾಗಿದ್ದು ಆಗಸ್ಟ್ 1 ರಿಂದ 3 ರ ವರೆಗೆ ನಡೆಯಲಿದೆ. ಈ ಬಾರಿ ನ್ಯಾನೋ ಟೆಕ್ನಾಲಜಿ ಫಾರ್ ಸಸ್ಟೆನಬಲ್ ಕ್ಲೈಮೇಟ್, ಎನರ್ಜಿ ಮತ್ತು ಹೆಲ್ತ್ ಕೇರ್ ಥೀಮ್ ಅಡಿಯಲ್ಲಿ ನಡೆಯಲಿದ್ದು. ಈಗಾಗಲೇ ನಮ್ಮ ಇಲಾಖೆಯ ಅಡಿಯಲ್ಲಿ ಸಂಶೋಧನೆ ಗೆ ಅಗತ್ಯ ಅನುದಾನ ನೀಡಲಾಗುತ್ತಿದೆ. ಈ ಕ್ಷೇತ್ರದಲ್ಲಿ ಇನ್ನು ಹೆಚ್ಚಿನ ಸಂಶೋಧನೆ ಅಗತ್ಯವಿದ್ದು ಈ ಬಗ್ಗೆ ಅಗತ್ಯ ಕಾರ್ಯಕ್ರಮಗಳಿಗೆ ಸರಕಾರದ ಮಟ್ಟದಲ್ಲಿ ಚಿಂತನೆ ನಡೆಸಲಾಗಿದೆ ಎಂದರು.

ಕಾರ್ಯಕ್ರಮ ದಲ್ಲಿ ಇಲಾಖೆಯ ಕಾರ್ಯದರ್ಶಿ ಗಳಾದ ಏಕ್ ರೂಪ ಕೌರ್, ಕೆಸ್ಟೆಪ್ಸ್ ವ್ಯವಸ್ಥಾಪಕ ನಿರ್ದೇಶಕರಾದ ಪವನ್ ಕುಮಾರ್ ಮಾಲಪಟಿ, ನ್ಯಾನೋ ಟೆಕ್ನಾಲಜಿ ವಿಷನ್ ಗ್ರೂಪ್ ನ ಚೇರ್ಮನ್ ಪ್ರೊ. ನವಕಾಂತ್ ಭಟ್, ಬೆಂಗಳೂರು ಇಂಡಿಯಾ ನ್ಯಾನೋ 2024 ಕಾರ್ಯಕ್ರಮ ದ ಉಸ್ತುವಾರಿ ಪ್ರೊ. ಪಿ ಎಸ್ ಅನಿಲ್ ಕುಮಾರ್ ಉಪಸ್ಥಿತರಿದ್ದರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ : ತ್ವರಿತ ಸೇವೆಗೆ ಕ್ರಮ

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…

17 mins ago

‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ

ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…

59 mins ago

ರಂಗನತಿಟ್ಟು ಬಳಿ NH-275 ಹೆದ್ದಾರಿ : ವನ್ಯಜೀವಿ ಸುರಕ್ಷತೆಗೆ ನಿರ್ದೇಶನ

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…

1 hour ago

ಕಿಡಿಗೇಡಿಗಳಿಂದ ಬೆಂಕಿ : ಐದಾರು ಎಕರೆ ಭೂ ಪ್ರದೇಶಕ್ಕೆ ಹಾನಿ

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…

1 hour ago

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಶ್ರೀ  ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…

2 hours ago

ಭಾರತ-ಯುಎಸ್ ವ್ಯಾಪಾರ ಒಪ್ಪಂದ ಅಧಿಕೃತ ; ಶೇ.18ಕ್ಕೆ ಸುಂಕ ಇಳಿಕೆ

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…

2 hours ago