ರಾಜ್ಯ

ರಾಜ್ಯದಲ್ಲಿ ನ್ಯಾನೋ ಟೆಕ್ನಾಲಜಿ ಸಂಶೋಧನೆಗೆ ಹೆಚ್ಚಿನ ಒತ್ತು: ಸಚಿವ ಎನ್.ಎಸ್ ಬೋಸರಾಜು

ಬೆಂಗಳೂರು: ಕರ್ನಾಟಕವನ್ನು ನ್ಯಾನೋ ಟೆಕ್ನಾಲಜಿಯ ಕ್ಷೇತ್ರದ ಪ್ರಮುಖ ಸಂಶೋಧನಾ ರಾಜ್ಯ ವನ್ನಾಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಕರ್ನಾಟಕ ರಿಸರ್ಚ್ ಫೌಂಡೇಶನ್ ಹಾಗೂ ಇ-ಕೆಆರ್‌ಡಿಐಪಿ (e-KRDIP ಕರ್ನಾಟಕ ಆರ್‌&ಡಿ ಇನ್ನೋವೇಷನ್‌ ಫ್ಲಾಟ್‌ಫಾರಂ Karnataka R&D Innovation Platform e-KRDIP) ಮೂಲಕ ನ್ಯಾನೋ ಸಂಶೋಧನೆಗೆ ಒತ್ತು ನೀಡಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್ ಬೋಸರಾಜು ತಿಳಿಸಿದರು.

ಇಂದು ನಗರದ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ಬೆಂಗಳೂರು ಇಂಡಿಯಾ ನ್ಯಾನೋ 2024 ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು.

ಬೆಂಗಳೂರು ನಗರ ವಿಶ್ವದ ಪ್ರಮುಖ ಕರ್ನಾಟಕ ರಾಜ್ಯ ಕೈಗಾರಿಕಾ ಸ್ನೇಹಿ ರಾಜ್ಯಗಳಲ್ಲಿ ಪ್ರಮಖವಾಗಿದೆ. ಸ್ಟಾರ್ಟ್‌ ಅಪ್‌ಗಳ ಪ್ರೋತ್ಸಾಹಕ್ಕೆ, ಹೊಸ ಉದ್ಯಮಗಳ ಸ್ಥಾಪನೆಗೂ ರಾಜ್ಯ ಸರಕಾರ ಉತ್ತಮ ಸಹಕಾರ ನೀಡುತ್ತಿದೆ. ರಾಜ್ಯ ಸರಕಾರದ ಕ್ರಾಂತಿಕಾರಿ ಯೋಜನೆಗಳ ಪರಿಣಾಮದಿಂದ ವಿಶ್ವದ ಪ್ರಮುಖ ಸಂಸ್ಥೆಗಳು ಕರ್ನಾಟಕ ರಾಜ್ಯದಲ್ಲಿ ತಮ್ಮ ಘಟಕಗಳನ್ನು ಪ್ರಾರಂಭಿಸಿವೆ. ರಾಜ್ಯದಲ್ಲಿ ಸಂಶೋಧನೆಗೆ ಉತ್ತಮ ಪರಿಸರವಿದ್ದು, ಉತ್ತಮ ಮಾನವ ಸಂಪನ್ಮೂಲ ಕೂಡಾ ಲಭ್ಯವಿದೆ.

ರಾಜ್ಯದಲ್ಲಿ ಸ್ಟಾರ್ಟ್‌ ಅಪ್‌ಗಳು ಮತ್ತು ಉದ್ದಿಮೆಗಳು ನೂತನ ಉತ್ಪನ್ನಗಳ ಸಂಶೋಧನೆಗೆ ಮತ್ತು ಉತ್ಪಾದನೆಗೆ ಪೂರಕ ವಾತಾವರಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸಂಶೋಧನಾ ಫೌಂಡೇಶನ್‌ ಸ್ಥಾಪಿಸಲಾಗಿದೆ. ರಾಜ್ಯವನ್ನು ಸಂಶೋಧನಾ ಹಬ್‌ ಆಗಿಸುವ ನಿಟ್ಟಿನಲ್ಲಿ ಇದೊಂದು ಕ್ರಾಂತಿಕಾರಿ ಹೆಜ್ಜೆಯಾಗಿದೆ. ಹೊಸ ಸಂಶೋಧನೆಗಳು ಫಲ ಜನ ಸಾಮಾನ್ಯರಿಗೆ, ಸ್ಟಾರ್ಟ್‌ ಅಪ್‌ಗಳಿಗೆ, ಉದ್ದಿಮೆಗಳಿಗೆ ತಲುಪಿಸುವ ನಿಟ್ಟಿನಲ್ಲಿ ಇ-ಕೆಆರ್‌ಡಿಐಪಿ (ಕರ್ನಾಟಕ ಆರ್‌&ಡಿ ಇನ್ನೋವೇಷನ್‌ ಫ್ಲಾಟ್‌ಫಾರಂ Karnataka R&D Innovation Platform e-KRDIP) ಯನ್ನು ಕೂಡಾ ಸ್ಥಾಪಿಸಲಾಗುತ್ತಿದೆ. ಈ ಎರಡು ಸಂಸ್ಥೆಗಳ ಮೂಲಕ ನ್ಯಾನೋ ಟೆಕ್ನಾಲಜಿ ಸಂಶೋಧನೆ ಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

ಬೆಂಗಳೂರು ಇಂಡಿಯಾ ನ್ಯಾನೋ 2024 ಮಹತ್ವದ ಸಮಾವೇಶ ವಾಗಿದ್ದು ಆಗಸ್ಟ್ 1 ರಿಂದ 3 ರ ವರೆಗೆ ನಡೆಯಲಿದೆ. ಈ ಬಾರಿ ನ್ಯಾನೋ ಟೆಕ್ನಾಲಜಿ ಫಾರ್ ಸಸ್ಟೆನಬಲ್ ಕ್ಲೈಮೇಟ್, ಎನರ್ಜಿ ಮತ್ತು ಹೆಲ್ತ್ ಕೇರ್ ಥೀಮ್ ಅಡಿಯಲ್ಲಿ ನಡೆಯಲಿದ್ದು. ಈಗಾಗಲೇ ನಮ್ಮ ಇಲಾಖೆಯ ಅಡಿಯಲ್ಲಿ ಸಂಶೋಧನೆ ಗೆ ಅಗತ್ಯ ಅನುದಾನ ನೀಡಲಾಗುತ್ತಿದೆ. ಈ ಕ್ಷೇತ್ರದಲ್ಲಿ ಇನ್ನು ಹೆಚ್ಚಿನ ಸಂಶೋಧನೆ ಅಗತ್ಯವಿದ್ದು ಈ ಬಗ್ಗೆ ಅಗತ್ಯ ಕಾರ್ಯಕ್ರಮಗಳಿಗೆ ಸರಕಾರದ ಮಟ್ಟದಲ್ಲಿ ಚಿಂತನೆ ನಡೆಸಲಾಗಿದೆ ಎಂದರು.

ಕಾರ್ಯಕ್ರಮ ದಲ್ಲಿ ಇಲಾಖೆಯ ಕಾರ್ಯದರ್ಶಿ ಗಳಾದ ಏಕ್ ರೂಪ ಕೌರ್, ಕೆಸ್ಟೆಪ್ಸ್ ವ್ಯವಸ್ಥಾಪಕ ನಿರ್ದೇಶಕರಾದ ಪವನ್ ಕುಮಾರ್ ಮಾಲಪಟಿ, ನ್ಯಾನೋ ಟೆಕ್ನಾಲಜಿ ವಿಷನ್ ಗ್ರೂಪ್ ನ ಚೇರ್ಮನ್ ಪ್ರೊ. ನವಕಾಂತ್ ಭಟ್, ಬೆಂಗಳೂರು ಇಂಡಿಯಾ ನ್ಯಾನೋ 2024 ಕಾರ್ಯಕ್ರಮ ದ ಉಸ್ತುವಾರಿ ಪ್ರೊ. ಪಿ ಎಸ್ ಅನಿಲ್ ಕುಮಾರ್ ಉಪಸ್ಥಿತರಿದ್ದರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

11 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

19 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

19 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

19 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

22 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

22 hours ago