ಕೊಪ್ಪಳ: ರಾಮಾಯಣ ಮಹಾಕಾವ್ಯದಲ್ಲಿ ಉಲ್ಲೇಖಿಸಿರುವ ಪ್ರಕಾರ ಅಂಜನಾದ್ರಿ ಬೆಟ್ಟವನ್ನು ಹನುಮಂತರ ಜನ್ಮಸ್ಥಳವೆಂದು ಪರಿಗಣಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಬೆಟ್ಟದ ಮೇಲಿರುವ ಆಂಜನೇಯದ ದರ್ಶನ ಪಡೆಯಲು ಲಕ್ಷಾಂತರ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಾರೆ.
ಆದರೆ ಆಂಜನೇಯನ ದರ್ಶನ ಪಡೆಯಬೇಕಾದರೆ ಬೆಟ್ಟದಲ್ಲಿರುವ 575 ಮೆಟ್ಟಿಲುಗಳನ್ನು ಹತ್ತಲೇಬೇಕು. ಆದರೆ ವೃದ್ಧರು, ಅನಾರೋಗ್ಯ ಪೀಡಿತರು ಬೆಟ್ಟ ಹತ್ತಿ ದರ್ಶನ ಪಡೆಯಲು ತುಂಬಾ ಕಷ್ಟಕರವಾಗಿದೆ.
ಹೀಗಾಗಿ ಬೆಟ್ಟಕ್ಕೆ ರೂಪ್ವೇ ನಿರ್ಮಿಸುವಂತೆ ಹಲವು ವರ್ಷಗಳಿಂದ ಒತ್ತಾಯ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಆ ಬೇಡಿಕೆ ಈಡೇರುವ ಕಾಲ ಸನಿಹಿತವಾಗಿದ್ದು, ರೋಪ್ವೇ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದೆ.
ಮೊದಲ ಹಂತದಲ್ಲಿ ಒಂದು ರೂಪ್ವೇ ನಿರ್ಮಾಣಕ್ಕೆ ಸಿದ್ಧತೆ ನಡೆದಿದ್ದು, ಮೂರು ಕಿಲೋ ಮೀಟರ್ ರೋಪ್ವೇಯನ್ನು 120 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಹಣ ಮಂಜೂರು ಮಾಡಿದೆ.
ಇದರಿಂದ ಒಂದು ಗಂಟೆಯಲ್ಲಿ 800 ಜನರನ್ನು ಅಂಜನಾದ್ರಿ ಬೆಟ್ಟದ ಮೇಲೆ ತಲುಪಿಸಬಹುದಾಗಿದೆ.
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಭಾರೀ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ…
ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಾಶ್ಮೀರಕ್ಕೆ ತೆರಳಿರುವ ಸಚಿವ ಸಂತೋಷ್ ಲಾಡ್ ಮೃತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ.…
ಡಾ.ಎನ್.ಬಿ ಶ್ರೀಧರ ಇತ್ತೀಚೆಗೆ ಹೊಸ ಹುಡುಗ ಹುಡುಗಿಯರಲ್ಲಿ ಜಾಸ್ತಿಯಾದ ‘ಜೊತೆಯಾಗಿ ಬದುಕುವುದು (ಲಿವಿಂಗ್ ಟುಗೆದರ್), ಅವಶ್ಯವಿದ್ದರೆ ಮದುವೆ ಯಾಗುವುದು, ಇಲ್ಲದಿದ್ದರೆ…
- ಸೌಮ್ಯಕೋಠಿ, ಮೈಸೂರು ಸಾಮಾನ್ಯವಾಗಿ 60 ವರ್ಷವಾಯಿತು, ನಿವೃತ್ತಿ ಯಾಯಿತು ಎಂದರೆ ಜೀವನವೇ ಮುಗಿದು ಹೋಯಿತು ಎನ್ನುವಂತಹ ಮನಸ್ಥಿತಿ ಮೊದಲಿತ್ತು.…
ಮಂಡ್ಯ : ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭೀಕರ ಹಿಂದೂಗಳ ಹತ್ಯೆಗೆ ಬಿಜೆಪಿಯೇ ಕಾರಣ ಎಂದು ಶ್ರೀರಂಗಪಟ್ಟಣದಲ್ಲಿ ಶಾಸಕ ರಮೇಶ್…
ಬೆಂಗಳೂರು : ಪ್ರಸ್ತುತ ದೇಶದಲ್ಲಿ ಹೆಚ್ಚುತ್ತಿರುವ ಆನ್ಲೈನ್ ಹಣಕಾಸು ವಂಚನೆಗಳನ್ನು ತಡೆಯಲು ರಾಜ್ಯದಲ್ಲಿ ಸೈಬರ್ ಅಪರಾಧ (Cyber Crime) ಸಹಾಯವಾಣಿ-1930…