ಕೊಪ್ಪಳ: ರಾಮಾಯಣ ಮಹಾಕಾವ್ಯದಲ್ಲಿ ಉಲ್ಲೇಖಿಸಿರುವ ಪ್ರಕಾರ ಅಂಜನಾದ್ರಿ ಬೆಟ್ಟವನ್ನು ಹನುಮಂತರ ಜನ್ಮಸ್ಥಳವೆಂದು ಪರಿಗಣಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಬೆಟ್ಟದ ಮೇಲಿರುವ ಆಂಜನೇಯದ ದರ್ಶನ ಪಡೆಯಲು ಲಕ್ಷಾಂತರ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಾರೆ.
ಆದರೆ ಆಂಜನೇಯನ ದರ್ಶನ ಪಡೆಯಬೇಕಾದರೆ ಬೆಟ್ಟದಲ್ಲಿರುವ 575 ಮೆಟ್ಟಿಲುಗಳನ್ನು ಹತ್ತಲೇಬೇಕು. ಆದರೆ ವೃದ್ಧರು, ಅನಾರೋಗ್ಯ ಪೀಡಿತರು ಬೆಟ್ಟ ಹತ್ತಿ ದರ್ಶನ ಪಡೆಯಲು ತುಂಬಾ ಕಷ್ಟಕರವಾಗಿದೆ.
ಹೀಗಾಗಿ ಬೆಟ್ಟಕ್ಕೆ ರೂಪ್ವೇ ನಿರ್ಮಿಸುವಂತೆ ಹಲವು ವರ್ಷಗಳಿಂದ ಒತ್ತಾಯ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಆ ಬೇಡಿಕೆ ಈಡೇರುವ ಕಾಲ ಸನಿಹಿತವಾಗಿದ್ದು, ರೋಪ್ವೇ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದೆ.
ಮೊದಲ ಹಂತದಲ್ಲಿ ಒಂದು ರೂಪ್ವೇ ನಿರ್ಮಾಣಕ್ಕೆ ಸಿದ್ಧತೆ ನಡೆದಿದ್ದು, ಮೂರು ಕಿಲೋ ಮೀಟರ್ ರೋಪ್ವೇಯನ್ನು 120 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಹಣ ಮಂಜೂರು ಮಾಡಿದೆ.
ಇದರಿಂದ ಒಂದು ಗಂಟೆಯಲ್ಲಿ 800 ಜನರನ್ನು ಅಂಜನಾದ್ರಿ ಬೆಟ್ಟದ ಮೇಲೆ ತಲುಪಿಸಬಹುದಾಗಿದೆ.
ಬೆಳಗಾವಿ : ಸರ್ಕಾರ ರಾಜ್ಯದಲ್ಲಿ 2022ರಲ್ಲಿ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇರುವುದಾಗಿ ಸರ್ವೋಚ್ಛ ನ್ಯಾಯಾಲಯಕ್ಕೆ…
ಬೆಂಗಳೂರು : ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ ವಿದ್ಯುತ್ ಪ್ರಸರಣ…
ಬೆಳಗಾವಿ : ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ…
ಬೆಳಗಾವಿ : ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…
ಭಾರತೀಯ ಜಲಪ್ರದೇಶದಲ್ಲಿ ಅಕ್ರಮ ಮೀನುಗಾರಿಕೆಗಾಗಿ ಭಾರತೀಯ ಕೋಸ್ಟ್ ಗಾರ್ಡ್ ಪಾಕಿಸ್ತಾನಿ ದೋಣಿಯನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು…
ಮೈಸೂರು : ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಪ್ರತಿ ಮಗುವಿಗೆ…