ಕೊಪ್ಪಳ: ರಾಮಾಯಣ ಮಹಾಕಾವ್ಯದಲ್ಲಿ ಉಲ್ಲೇಖಿಸಿರುವ ಪ್ರಕಾರ ಅಂಜನಾದ್ರಿ ಬೆಟ್ಟವನ್ನು ಹನುಮಂತರ ಜನ್ಮಸ್ಥಳವೆಂದು ಪರಿಗಣಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಬೆಟ್ಟದ ಮೇಲಿರುವ ಆಂಜನೇಯದ ದರ್ಶನ ಪಡೆಯಲು ಲಕ್ಷಾಂತರ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಾರೆ.
ಆದರೆ ಆಂಜನೇಯನ ದರ್ಶನ ಪಡೆಯಬೇಕಾದರೆ ಬೆಟ್ಟದಲ್ಲಿರುವ 575 ಮೆಟ್ಟಿಲುಗಳನ್ನು ಹತ್ತಲೇಬೇಕು. ಆದರೆ ವೃದ್ಧರು, ಅನಾರೋಗ್ಯ ಪೀಡಿತರು ಬೆಟ್ಟ ಹತ್ತಿ ದರ್ಶನ ಪಡೆಯಲು ತುಂಬಾ ಕಷ್ಟಕರವಾಗಿದೆ.
ಹೀಗಾಗಿ ಬೆಟ್ಟಕ್ಕೆ ರೂಪ್ವೇ ನಿರ್ಮಿಸುವಂತೆ ಹಲವು ವರ್ಷಗಳಿಂದ ಒತ್ತಾಯ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಆ ಬೇಡಿಕೆ ಈಡೇರುವ ಕಾಲ ಸನಿಹಿತವಾಗಿದ್ದು, ರೋಪ್ವೇ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದೆ.
ಮೊದಲ ಹಂತದಲ್ಲಿ ಒಂದು ರೂಪ್ವೇ ನಿರ್ಮಾಣಕ್ಕೆ ಸಿದ್ಧತೆ ನಡೆದಿದ್ದು, ಮೂರು ಕಿಲೋ ಮೀಟರ್ ರೋಪ್ವೇಯನ್ನು 120 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಹಣ ಮಂಜೂರು ಮಾಡಿದೆ.
ಇದರಿಂದ ಒಂದು ಗಂಟೆಯಲ್ಲಿ 800 ಜನರನ್ನು ಅಂಜನಾದ್ರಿ ಬೆಟ್ಟದ ಮೇಲೆ ತಲುಪಿಸಬಹುದಾಗಿದೆ.
ನವದೆಹಲಿ: ರಾಷ್ಟ್ರ ರಾಜಧಾನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸತತ ಎರಡನೇ ದಿನವೂ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ…
ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ…
ಕಠ್ಮಂಡು: ನೇಪಾಳಕ್ಕೆ ಮತ್ತೆ ವಿನಾಶಕಾರಿ ಪ್ರವಾಹದ ಆತಂಕ ಎದುರಾಗಿದೆ. ದಾರ್ಚುಲಾ ಜಿಲ್ಲೆಯ ಅಪಿ ಹಿಮಾಲ್ ಗ್ರಾಮೀಣ ಪುರಸಭೆಯ ಭಟ್ಟಾರ್ ಪ್ರದೇಶದಲ್ಲಿ…
ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಮತ್ತು ರಾಜ್ಯ ಜಲಸಂಪನ್ಮೂಲ ಸಚಿವ ಎನ್.ಚಲುವರಾಯ ಸ್ವಾಮಿಯವರ ನಡುವಿನ ಆರೋಪ ಮತ್ತು ಪ್ರತ್ಯಾರೋಪಗಳು…
ಸರ್ಕಾರವು ೭೦ ವರ್ಷದೊಳಗಿನ ನಿವೃತ್ತ ಸರ್ಕಾರಿ ಪಿಂಚಣಿದಾರರಿಗೆ, ಕುಟುಂಬ ಪಿಂಚಣಿದಾರರಿಗೆ ಮತ್ತು ಅವರ ಅರ್ಹ ಅವಲಂಬಿತ ವಿಕಲಚೇತನ ಮಕ್ಕಳ ಆರೋಗ್ಯ…
ನಮ್ಮಲ್ಲಿ ಗುರುವಿಗೆ ಅಗ್ರಸ್ಥಾನ ಕೊಟ್ಟಿದ್ದೇವೆ. ಒಂದು ಅಕ್ಷರ ಕಲಿಸಿದವರನ್ನು ಗುರುವೆಂದು ಒಪ್ಪಿಕೊಂಡಿದ್ದೇವೆ. ಗುರುವು ನಮಗೆ ಒಳ್ಳೆಯ ಮಾರ್ಗ,ನಡತೆ ಹಾಗೂ ಜ್ಞಾನವನ್ನು…