Mysore
22
overcast clouds

Social Media

ಮಂಗಳವಾರ, 04 ಆಗಸ್ಟ್ 2026
Light
Dark

ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳಿಗೆ ಗ್ರೀನ್ ಸಿಗ್ನಲ್‌ ವಿಚಾರ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು.!

ಬೆಂಗಳೂರು: ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳಿಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಹೈಕೋರ್ಟ್‌ ಏಕಸದಸ್ಯ ಪೀಠ ಬೈಕ್‌ ಟ್ಯಾಕ್ಸಿಗೆ ನಿಷೇಧ ಹೇರಿತ್ತು. ಆದರೆ ವಿಭಾಗೀಯ ಪೀಠ ನಿಷೇಧವನ್ನು ತೆರವುಗೊಳಿಸಿದೆ. ಆದೇಶ ನೋಡಿಕೊಂಡು ಮುಂದಿನ ನಿರ್ಧಾರದ ಬಗ್ಗೆ ಚರ್ಚೆ ಮಾಡುತ್ತೇವೆ. ರಿಟ್‌ ಅರ್ಜಿಗೂ ಅವಕಾಶ ಇದೆ. ಕಾನೂನು ಸಲಹೆ ಪಡೆದುಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

 

 

Tags:
error: Content is protected !!