ರಾಜ್ಯ

ಗೃಹಲಕ್ಷ್ಮಿಗೆ ಮತ್ತೆ ತಾಂತ್ರಿಕ ಸಮಸ್ಯೆ ; ಬಾಕಿ ಹಣ ಬಿಡುಗಡೆ ವಿಳಂಬ?

ಬೆಂಗಳೂರು : ಬೆಳಗಾವಿ ಚಳಿಗಾಲದ ಅಧಿವೇಶನದ ಕಲಾಪದಲ್ಲಿ ರಾಜ್ಯ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದ್ದ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಬಿಡುಗಡೆಗೆ ಮತ್ತೆ ತಾಂತ್ರಿಕ ಸಮಸ್ಯೆ ಎದುರಾಗಿದೆ.

ಮುಂದಿನ ವಾರದಿಂದ ಬಾಕಿ ಹಣವನ್ನು ಬಿಡುಗಡೆ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದರೂ ಆಡಳಿತಾತಕ ಸಮಸ್ಯೆ ಎದುರಾಗಿರುವುದರಿಂದ ಮತ್ತೆ ವಿಳಂಬವಾಗುವ ಸಾಧ್ಯತೆ ಇದೆ.

ನಾವು ಪ್ರತಿ ತಿಂಗಳ ಹಣವನ್ನು ಫಲಾನುಭವಿಗಳ ಖಾತೆಗೆ ಹಾಕಿದ್ದೇವೆ. ಈಗಾಗಲೇ 23 ಕಂತುಗಳ ಹಣ ಬಿಡುಗಡೆಯಾಗಿದೆ ಎಂದು ಹೆಬ್ಬಾಳ್ಕರ್ ಹೇಳಿದ್ದರೂ, ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಬಾಕಿ ಹಣ ಬಿಡುಗಡೆಗೆ ಒಂದಿಲ್ಲೊಂದು ವಿಘ್ನಗಳು ಎದುರಾಗುತ್ತಲೇ ಇವೆ.

ಈ ಎರಡು ಬಾಕಿ ಕಂತುಗಳು ಹಿಂದಿನ ಹಣಕಾಸು ವರ್ಷಕ್ಕೆ ಸೇರಿವೆ. ಪ್ರಸ್ತುತ ಹಣಕಾಸು ವರ್ಷವು ಈಗ ಕೊನೆಯ ತ್ರೈಮಾಸಿಕವನ್ನು ತಲುಪಿದೆ ಮತ್ತು ಸರ್ಕಾರದ ಕಂದಾಯ ಖಾತೆಯ ಹಣವು ಬಹುತೇಕ ವ್ಯಯವಾಗಿದೆ.
ಹಿಂದಿನ ವರ್ಷದ ಬಾಕಿಯನ್ನು ಪ್ರಸಕ್ತ ಸಾಲಿನಲ್ಲಿ ಪಾವತಿಸಲು ಹೊಸದಾಗಿ ನಿಧಿಯನ್ನು ಒದಗಿಸುವುದು ಕಷ್ಟಕರವಾಗಿದೆ. ಚಳಿಗಾಲದ ಅಧಿವೇಶನದಲ್ಲಿ ಎರಡು ಪೂರಕ ಬಜೆಟ್‍ಗಳನ್ನು ಮಂಡಿಸಲಾಗಿದ್ದರೂ, ಈ ಬಾಕಿ ಪಾವತಿಗಳನ್ನು ಅವುಗಳಲ್ಲಿ ಸೇರಿಸಲು ಸಾಧ್ಯವಾಗಿಲ್ಲ.

ಇದನ್ನೂ ಓದಿ:-ದುರಂಧರ್‌ ಸಕ್ಸಸ್ | ‌ದಿಢೀರ್‌ ಸಂಭಾವನೆ ಏರಿಕೆ ; ದೃಶ್ಯಂ-3 ಚಿತ್ರದಿಂದ ಹೊರಬಂದ ಅಕ್ಷಯ್‌ ಖನ್ನಾ

ಈ ಹಣವು ಹಿಂದಿನ ವರ್ಷದ ಬಜೆಟ್ ವ್ಯಾಪ್ತಿಗೆ ಬರುವುದರಿಂದ, ಈಗ ಇದನ್ನು ಬಿಡುಗಡೆ ಮಾಡಲು ಹಣಕಾಸು ಇಲಾಖೆಯು ವಿಶೇಷ ಮಾರ್ಗಗಳನ್ನು ಹುಡುಕಬೇಕಿದೆ. ಫಲಾನುಭವಿಗಳಿಗೆ ಬಾಕಿ ಹಣ ತಲುಪಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭರವಸೆ ನೀಡಿದ್ದು, ತಾಂತ್ರಿಕ ಅಡೆತಡೆಗಳನ್ನು ನಿವಾರಿಸಲು ಸರ್ಕಾರ ಪ್ರಯತ್ನಿಸುತ್ತಿದೆ.

ವಿಳಂಬಕ್ಕೆ ಕಾರಣವೇನು?
ಗೃಹಲಕ್ಷಿ ಯೋಜನೆಯಡಿ ಪ್ರತಿ ತಿಂಗಳು 2,000 ರೂ.ಗಳನ್ನು 1.2 ಕೋಟಿ ಫಲಾನುಭವಿಗಳಿಗೆ ನೀಡಲಾಗುತ್ತಿದೆ. ಆದರೆ ಕಳೆದ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಅಂದಾಜು 5,500 ಕೋಟಿ ರೂ. ಮೊತ್ತದ ಕಂತುಗಳು ತಾಂತ್ರಿಕ ಕಾರಣಗಳಿಂದಾಗಿ ಪಾವತಿಯಾಗಿಲ್ಲ ಎಂದು ಸರ್ಕಾರ ಒಪ್ಪಿಕೊಂಡಿದೆ.

ಫೆಬ್ರವರಿ ತಿಂಗಳಿನಲ್ಲಿ ಹಣ ಪಾವತಿ ಜವಾಬ್ದಾರಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲೂಕು ಪಂಚಾಯತ್‍ಗಳ ನೇರ ನಗದು ವರ್ಗಾವಣೆ ವ್ಯವಸ್ಥೆಗೆ ವರ್ಗಾಯಿಸಲಾಗಿತ್ತು. ಈ ಸಂದರ್ಭದಲ್ಲಿ ಹಳೆಯ ಕಂತುಗಳು ಪ್ರಕ್ರಿಯೆಗೊಳ್ಳದೆ ಬಾಕಿ ಉಳಿದಿವೆ. ಪ್ರಸ್ತುತ ಹಣಕಾಸು ವರ್ಷದ ಅಂತಿಮ ಹಂತದಲ್ಲಿರುವುದರಿಂದ ಮತ್ತು ಕಂದಾಯ ಖಾತೆಯಲ್ಲಿ ಹಣದ ಕೊರತೆ ಇರುವುದರಿಂದ ಈ ಬಾಕಿ ಮೊತ್ತವನ್ನು ಪಾವತಿಸುವುದು ಸವಾಲಾಗಿದೆ.

ಬಾಕಿ ಉಳಿದ ಕಂತುಗಳು ಎಷ್ಟು?
ಆಡಳಿತಾತ್ಮಕ ಕಾರಣಗಳಿಂದಾಗಿ 2023-24ನೇ ಸಾಲಿನ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಪಾವತಿಗಳು ವಿಳಂಬವಾಗಿವೆ. ಈ ಬಾಕಿ ಮೊತ್ತದ ಒಟ್ಟು ಮೌಲ್ಯ ಅಂದಾಜು 5,500 ಕೋಟಿ ರೂ.ಆಗಿದ್ದು, ಇತ್ತಿ?ಚೆಗೆ ನಡೆದ ಚಳಿಗಾಲದ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಈ ವಿಷಯ ಪ್ರಸ್ತಾಪಿಸುವವರೆಗೆ ಈ ಲೋಪವು ಸರ್ಕಾರದ ಗಮನಕ್ಕೆ ಬಂದಿರಲಿಲ್ಲ.

ಇದಕ್ಕೆ ಉತ್ತರಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷಿ ಹೆಬ್ಬಾಳ್ಕರ್, ನಾವು ಈಗಾಗಲೇ ಏಪ್ರಿಲ್ ತಿಂಗಳಲ್ಲೇ ಈ ಬಗ್ಗೆ ಹಣಕಾಸು ಇಲಾಖೆಗೆ ಪತ್ರ ಬರೆದಿದ್ದೇವೆ. ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತ ತಕ್ಷಣ ಬಾಕಿ ಕಂತುಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದ್ದರು.

ಆಂದೋಲನ ಡೆಸ್ಕ್

Recent Posts

ವೀರನಪುರ ಬಳಿ ಟಿಪ್ಪರ್ ಪಲ್ಟಿ: ಚಾಲಕ ಸಾವು

ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…

10 hours ago

ಮುಂದಿನ ದಿನಗಳಲ್ಲಿಯೂ ಬಂಜಾರ ಸಮುದಾಯದವರ ಜೊತೆಗೆ ಸದಾ ಬೆಂಬಲವಾಗಿರುತ್ತೇನೆ: ಬಿಜೆಪಿ ಒ.ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…

10 hours ago

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು-ಕಾಶ್ಮೀರ

ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…

14 hours ago

ಹನೂರಿನಲ್ಲಿ ವಿಜೃಂಭಣೆಯಿಂದ ನಡೆದ ಸೇವಾಲಾಲ್‌ ಜಯಂತಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…

14 hours ago

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ…

14 hours ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…

15 hours ago