ರಾಜ್ಯ

ಗೃಹಲಕ್ಷ್ಮಿಗೆ ಮತ್ತೆ ತಾಂತ್ರಿಕ ಸಮಸ್ಯೆ ; ಬಾಕಿ ಹಣ ಬಿಡುಗಡೆ ವಿಳಂಬ?

ಬೆಂಗಳೂರು : ಬೆಳಗಾವಿ ಚಳಿಗಾಲದ ಅಧಿವೇಶನದ ಕಲಾಪದಲ್ಲಿ ರಾಜ್ಯ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದ್ದ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಬಿಡುಗಡೆಗೆ ಮತ್ತೆ ತಾಂತ್ರಿಕ ಸಮಸ್ಯೆ ಎದುರಾಗಿದೆ.

ಮುಂದಿನ ವಾರದಿಂದ ಬಾಕಿ ಹಣವನ್ನು ಬಿಡುಗಡೆ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದರೂ ಆಡಳಿತಾತಕ ಸಮಸ್ಯೆ ಎದುರಾಗಿರುವುದರಿಂದ ಮತ್ತೆ ವಿಳಂಬವಾಗುವ ಸಾಧ್ಯತೆ ಇದೆ.

ನಾವು ಪ್ರತಿ ತಿಂಗಳ ಹಣವನ್ನು ಫಲಾನುಭವಿಗಳ ಖಾತೆಗೆ ಹಾಕಿದ್ದೇವೆ. ಈಗಾಗಲೇ 23 ಕಂತುಗಳ ಹಣ ಬಿಡುಗಡೆಯಾಗಿದೆ ಎಂದು ಹೆಬ್ಬಾಳ್ಕರ್ ಹೇಳಿದ್ದರೂ, ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಬಾಕಿ ಹಣ ಬಿಡುಗಡೆಗೆ ಒಂದಿಲ್ಲೊಂದು ವಿಘ್ನಗಳು ಎದುರಾಗುತ್ತಲೇ ಇವೆ.

ಈ ಎರಡು ಬಾಕಿ ಕಂತುಗಳು ಹಿಂದಿನ ಹಣಕಾಸು ವರ್ಷಕ್ಕೆ ಸೇರಿವೆ. ಪ್ರಸ್ತುತ ಹಣಕಾಸು ವರ್ಷವು ಈಗ ಕೊನೆಯ ತ್ರೈಮಾಸಿಕವನ್ನು ತಲುಪಿದೆ ಮತ್ತು ಸರ್ಕಾರದ ಕಂದಾಯ ಖಾತೆಯ ಹಣವು ಬಹುತೇಕ ವ್ಯಯವಾಗಿದೆ.
ಹಿಂದಿನ ವರ್ಷದ ಬಾಕಿಯನ್ನು ಪ್ರಸಕ್ತ ಸಾಲಿನಲ್ಲಿ ಪಾವತಿಸಲು ಹೊಸದಾಗಿ ನಿಧಿಯನ್ನು ಒದಗಿಸುವುದು ಕಷ್ಟಕರವಾಗಿದೆ. ಚಳಿಗಾಲದ ಅಧಿವೇಶನದಲ್ಲಿ ಎರಡು ಪೂರಕ ಬಜೆಟ್‍ಗಳನ್ನು ಮಂಡಿಸಲಾಗಿದ್ದರೂ, ಈ ಬಾಕಿ ಪಾವತಿಗಳನ್ನು ಅವುಗಳಲ್ಲಿ ಸೇರಿಸಲು ಸಾಧ್ಯವಾಗಿಲ್ಲ.

ಇದನ್ನೂ ಓದಿ:-ದುರಂಧರ್‌ ಸಕ್ಸಸ್ | ‌ದಿಢೀರ್‌ ಸಂಭಾವನೆ ಏರಿಕೆ ; ದೃಶ್ಯಂ-3 ಚಿತ್ರದಿಂದ ಹೊರಬಂದ ಅಕ್ಷಯ್‌ ಖನ್ನಾ

ಈ ಹಣವು ಹಿಂದಿನ ವರ್ಷದ ಬಜೆಟ್ ವ್ಯಾಪ್ತಿಗೆ ಬರುವುದರಿಂದ, ಈಗ ಇದನ್ನು ಬಿಡುಗಡೆ ಮಾಡಲು ಹಣಕಾಸು ಇಲಾಖೆಯು ವಿಶೇಷ ಮಾರ್ಗಗಳನ್ನು ಹುಡುಕಬೇಕಿದೆ. ಫಲಾನುಭವಿಗಳಿಗೆ ಬಾಕಿ ಹಣ ತಲುಪಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭರವಸೆ ನೀಡಿದ್ದು, ತಾಂತ್ರಿಕ ಅಡೆತಡೆಗಳನ್ನು ನಿವಾರಿಸಲು ಸರ್ಕಾರ ಪ್ರಯತ್ನಿಸುತ್ತಿದೆ.

ವಿಳಂಬಕ್ಕೆ ಕಾರಣವೇನು?
ಗೃಹಲಕ್ಷಿ ಯೋಜನೆಯಡಿ ಪ್ರತಿ ತಿಂಗಳು 2,000 ರೂ.ಗಳನ್ನು 1.2 ಕೋಟಿ ಫಲಾನುಭವಿಗಳಿಗೆ ನೀಡಲಾಗುತ್ತಿದೆ. ಆದರೆ ಕಳೆದ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಅಂದಾಜು 5,500 ಕೋಟಿ ರೂ. ಮೊತ್ತದ ಕಂತುಗಳು ತಾಂತ್ರಿಕ ಕಾರಣಗಳಿಂದಾಗಿ ಪಾವತಿಯಾಗಿಲ್ಲ ಎಂದು ಸರ್ಕಾರ ಒಪ್ಪಿಕೊಂಡಿದೆ.

ಫೆಬ್ರವರಿ ತಿಂಗಳಿನಲ್ಲಿ ಹಣ ಪಾವತಿ ಜವಾಬ್ದಾರಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲೂಕು ಪಂಚಾಯತ್‍ಗಳ ನೇರ ನಗದು ವರ್ಗಾವಣೆ ವ್ಯವಸ್ಥೆಗೆ ವರ್ಗಾಯಿಸಲಾಗಿತ್ತು. ಈ ಸಂದರ್ಭದಲ್ಲಿ ಹಳೆಯ ಕಂತುಗಳು ಪ್ರಕ್ರಿಯೆಗೊಳ್ಳದೆ ಬಾಕಿ ಉಳಿದಿವೆ. ಪ್ರಸ್ತುತ ಹಣಕಾಸು ವರ್ಷದ ಅಂತಿಮ ಹಂತದಲ್ಲಿರುವುದರಿಂದ ಮತ್ತು ಕಂದಾಯ ಖಾತೆಯಲ್ಲಿ ಹಣದ ಕೊರತೆ ಇರುವುದರಿಂದ ಈ ಬಾಕಿ ಮೊತ್ತವನ್ನು ಪಾವತಿಸುವುದು ಸವಾಲಾಗಿದೆ.

ಬಾಕಿ ಉಳಿದ ಕಂತುಗಳು ಎಷ್ಟು?
ಆಡಳಿತಾತ್ಮಕ ಕಾರಣಗಳಿಂದಾಗಿ 2023-24ನೇ ಸಾಲಿನ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಪಾವತಿಗಳು ವಿಳಂಬವಾಗಿವೆ. ಈ ಬಾಕಿ ಮೊತ್ತದ ಒಟ್ಟು ಮೌಲ್ಯ ಅಂದಾಜು 5,500 ಕೋಟಿ ರೂ.ಆಗಿದ್ದು, ಇತ್ತಿ?ಚೆಗೆ ನಡೆದ ಚಳಿಗಾಲದ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಈ ವಿಷಯ ಪ್ರಸ್ತಾಪಿಸುವವರೆಗೆ ಈ ಲೋಪವು ಸರ್ಕಾರದ ಗಮನಕ್ಕೆ ಬಂದಿರಲಿಲ್ಲ.

ಇದಕ್ಕೆ ಉತ್ತರಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷಿ ಹೆಬ್ಬಾಳ್ಕರ್, ನಾವು ಈಗಾಗಲೇ ಏಪ್ರಿಲ್ ತಿಂಗಳಲ್ಲೇ ಈ ಬಗ್ಗೆ ಹಣಕಾಸು ಇಲಾಖೆಗೆ ಪತ್ರ ಬರೆದಿದ್ದೇವೆ. ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತ ತಕ್ಷಣ ಬಾಕಿ ಕಂತುಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದ್ದರು.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

2 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

2 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

2 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

2 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

3 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

3 hours ago