ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ ‘ಗೃಹಲಕ್ಷ್ಮೀ’ ಯೋಜನೆಯ ಹಣವನ್ನು ಕೂಡಿಟ್ಟು, ಬೆಳಗಾವಿ ಜಿಲ್ಲೆಯಲ್ಲಿ ತಾಯಿಯೊಬ್ಬಳು ತನ್ನ ಮಗನಿಗೆ ಬೈಕ್ ಕೊಡಿಸುವ ಮೂಲಕ ದಸರಾ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ.
ಗೋಕಾಕ್ ತಾಲ್ಲೂಕಿನ ಕೌಜಲಗಿ ಗ್ರಾಮದ ಬಾಗವ್ವಾ ನೀಲಪ್ಪ ಸಣ್ಣಕ್ಕಿ ಎಂಬ ಮಹಿಳೆ, ತನ್ನ ಮಗ ರಮೇಶ ನೀಲಪ್ಪ ಸಣ್ಣಕ್ಕಿಗೆ ದ್ವಿಚಕ್ರ ವಾಹನ ಕೊಡಿಸಿದ್ದಾರೆ. ಶುಕ್ರವಾರ ಆಯುಧ ಪೂಜೆ ದಿನದಂದು ಶೋ ರೂಮಿನಿಂದ ಬೈಕ್ ಖರೀದಿಸಿ, ಪೂಜೆ ಮಾಡಿ ಸಂಭ್ರಮಿಸಿದ್ದಾರೆ.
ಗೃಹಲಕ್ಷ್ಮೀ ಯೋಜನೆಯ ಹಣ ಇಂದು ರಾಜ್ಯದ ಲಕ್ಷಾಂತರ ಮಹಿಳೆಯರ ಜೀವನದಲ್ಲಿ ಹೊಸ ಸಂಚಲನ ಮೂಡಿಸಿದ್ದು, ನಾನಾ ರೀತಿಯಲ್ಲಿ ಬದುಕು ಕಟ್ಟಿಕೊಳ್ಳಲು ನೆರವಾಗಿದೆ. ಅದರಂತೆ ಕೌಜಲಗಿಯ ಬಾಗವ್ವಾ ನೀಲಪ್ಪ ಸಣ್ಣಕ್ಕಿಅವರು ತನ್ನ ಮಗನಿಗೆ ಬೈಕ್ ಕೊಡಿಸುವ ದುಡಿಮೆಗೆ ಹೋಗಲು ನೆರವಾಗಿದ್ದಾರೆ.
ಗೃಹಲಕ್ಷ್ಮೀ ಹಣದಿಂದ ಬೈಕ್ ಕೊಡಿಸಿದ ತಮ್ಮ ತವರು ಜಿಲ್ಲೆ ಕೌಜಲಗಿಯ ತಾಯಿ -ಮಗನಿಗೆ ಸಚಿವೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಭ ಹಾರೈಸಿದ್ದಾರೆ.
ಕುಟುಂಬದ ಮನೆಯೊಡತಿಯರಿಗೆ ಪ್ರತಿ ತಿಂಗಳ ‘ಗೃಹಲಕ್ಷಿ’ ಯೋಜನೆಯ ಹಣ ಇಂದು ಲಕ್ಷಾಂತರ ಮಹಿಳೆಯರ ಜೀವನದಲ್ಲಿ ಹೊಸ ಸಂಚಲನ ಮೂಡಿಸಿದೆ. ಗೃಹಲಕ್ಷ್ಮೀ ಹಣವು ಮಹಿಳೆಯರಿಗೆ ವಿವಿಧ ರೀತಿಯಲ್ಲಿ ಬದುಕು ಕಟ್ಟಿಕೊಳ್ಳಲು ನೆರವಾಗಿರುವುದು ಸಚಿವರಲ್ಲಿ ಹರ್ಷ ತರಿಸಿದೆ.
ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…