ರಾಜ್ಯ

ಗೃಹಲಕ್ಷ್ಮಿ ಹಣ ಶೀಘ್ರ ಸಂದಾಯ : ಸಚಿವೆ ಹೆಬ್ಬಾಳಕರ್‌

ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಎರಡು ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಕುರಿತಂತೆ ಈಗಾಗಲೇ ಮುಖ್ಯಮಂತ್ರಿಗಳ ಬಳಿ ಮಾತನಾಡಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ಸದನದಲ್ಲಿ ಉತ್ತರ ಕೊಟ್ಟಿದ್ದಾರೆ ಎಂದರು.

ಅನರ್ಹ ರೇಷನ್‌ ಕಾರ್ಡ್ ರದ್ದಾಗಿರುವ ಕಾರಣ ಕೆಲವರಿಗೆ ಹಣ ಸಂದಾಯವಾಗಿಲ್ಲ. ಆಹಾರ ಇಲಾಖೆಯಿಂದ ಹೊಸ ಡೇಟಾ ಬಂದ ತಕ್ಷಣ ಅವರಿಗೂ ದುಡ್ಡು ರಿಲೀಸ್ ಆಗಲಿದೆ. ರೇಷನ್ ಕಾರ್ಡ್ ಆಧರಿಸಿ ನಾವು ಗೃಹಲಕ್ಷ್ಮಿ ‌ಫಲಾನುಭವಿಗಳಿಗೆ ದುಡ್ಡು ಹಾಕುತ್ತಿದ್ದೇವೆ. ಕೆಲ ರೇಷನ್ ಕಾರ್ಡ್ ರದ್ದಾದಾಗ ದುಡ್ಡು ಹೋಲ್ಡ್ ಆಗಿರಬಹುದು. ಆದರೆ ಅವರು ತೆರಿಗೆ ಪಾವತಿದಾರರಲ್ಲದಿದ್ದಲ್ಲಿ ಹಣ ಸಿಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಗೃಹಲಕ್ಷ್ಮೀ ಸಹಕಾರ ಸಂಘಕ್ಕೆ ಸದಸ್ಯರಾದವರು ಪ್ರತಿ ತಿಂಗಳು 200 ರೂಪಾಯಿ ಹಣ ಕಟ್ಟಿಕೊಂಡು ಹೋಗಬೇಕು, 6 ತಿಂಗಳು ಆದ ಬಳಿಕ ಸಾಲ ಸೌಲಭ್ಯ ಪಡೆಯಲು ಅರ್ಹರಾಗುತ್ತಾರೆ. ನನ್ನ ಅಧ್ಯಕ್ಷತೆಯಲ್ಲಿ ಒಂದು ಸಮಿತಿ ಇದ್ದು, ಹೆಚ್ಚು ಕಂಡೀಷನ್‌ಗಳನ್ನು ಹಾಕದೇ ಅರ್ಹರನ್ನು ಗುರುತಿಸಿ ಸಾಲ ನೀಡಲಾಗುವುದು. ಜೊತೆಗೆ ಆರೋಗ್ಯ ವಿಮೆಯನ್ನು ನೀಡುವ ಯೋಚನೆ ಇದೆ ಎಂದು ಸಚಿವರು ಹೇಳಿದರು.

ನಮ್ಮ ಇಲಾಖೆ ಹಾಗೂ ಗೃಹ ಇಲಾಖೆ ಸಹಯೋಗದಲ್ಲಿ ಅಕ್ಕ ಪಡೆ ಆರಂಭಿಸಲಾಗಿದೆ. ಬಹಳಷ್ಟು ಮಹಾತ್ವಾಕಾಂಕ್ಷಿ ಇಟ್ಟುಕೊಂಡು ಅಕ್ಕಪಡೆ ಆರಂಭಿಸಲಾಗಿದೆ. ಈಗಾಗಲೇ ಸಿಬ್ಬಂದಿ ನೇಮಿಸಿದ್ದು, ಅವರಿಗೆ ತರಬೇತಿ ನೀಡಲಾಗುತ್ತಿದೆ. ಬಸ್‌ ಸ್ಟಾಪ್‌, ದೇವಸ್ಥಾನ, ಮಾಲ್‌ಗಳಲ್ಲಿ, ಪಾರ್ಕ್‌ಗಳಲ್ಲಿ ಅಕ್ಕ ಪಡೆ ಗಸ್ತು ತಿರುಗಲಿದೆ ಎಂದು ಸಚಿವರು ಹೇಳಿದರು.

ಅಕ್ಕಪಡೆ ಸ್ಕೂಲ್‌, ಕಾಲೇಜುಗಳಿಗೂ ಹೋಗಿ ಜಾಗೃತಿ ಮೂಡಿಸುವ ಕೆಲಸ ಮಾಡಲಿದ್ದು, ದೂರು ಕೊಡಲು ಅಂಜುವ ಹೆಣ್ಣುಮಕ್ಕಳ ಹೆಸರನ್ನು ಗೌಪ್ಯವಾಗಿ ಇಡಲಾಗುವುದು. ಅಕ್ಕಪಡೆ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘವಾಗಿ ಚರ್ಚೆ ನಡೆಸಲಾಗಿದೆ, ಸಾಮಾಜಿಕ ಜಾಲತಾಣಗಳಲ್ಲಿ ವಂಚನೆಗೊಳಗಾದ ಮಹಿಳೆಯರು, ಕೌಟುಂಬಿಕ ಸಮಸ್ಯೆ ಎದುರಿಸುತ್ತಿರುವ ಹೆಣ್ಣುಮಕ್ಕಳು ಸಹ ದೂರು ನೀಡಬಹುದು ಎಂದು ಹೇಳಿದರು.

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಯಾರೇ ತಪ್ಪು ಮಾಡಿರಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂಬುದೇ ನನ್ನ ಕೋರಿಕೆ ಎಂದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಂಪಾದನೆ ಎಂಬ ಧರ್ಮ ಸಂಕಟಕ್ಕೆ ಸಿಲುಕಿ…

ದೇವನೂರ ಮಹಾದೇವ ‘ಹಾಡುಪಾಡು ರಾಮು’ ಎಂದೇ ಖ್ಯಾತರಾಗಿದ್ದ ಟಿ.ಎಸ್.ರಾಮಸ್ವಾಮಿಯವರು ನೆಲಗನ್ನಡಕ್ಕೆ ಅನುವಾದಿಸಿರುವ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿಯ ಲೋಕಾರ್ಪಣೆ ಶನಿವಾರ ಸಂಜೆ…

2 hours ago

ಪ್ರವಾಸಿಗರಿಗೆ ಮುಕ್ತವಾದ ಮಾಂದಲ್‌ಪಟ್ಟಿ

ನವೀನ್ ಡಿಸೋಜ ೪ ತಿಂಗಳಿನಿಂದ ಬಂದ್ ಆಗಿದ್ದ ಮುಗಿಲುಪೇಟೆ ಖ್ಯಾತಿಯ ಪ್ರವಾಸಿ ತಾಣ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ…

2 hours ago

ಯತೀಂದ್ರಗೆ ನಗರಾಭಿವೃದ್ಧಿ; ಮೈಸೂರಿಗೆ ಯೋಜನೆಗಳ ಸಮೃದ್ಧಿ?

ಕೆ.ಬಿ.ರಮೇಶನಾಯಕ ಮೈಸೂರು: ತವರಿನವರೇ ಮುಖ್ಯಮಂತ್ರಿಯಾಗಿದ್ದಾಗ ಹತ್ತಾರು ಯೋಜನೆಗಳು ಮಂಜೂರಾಗಿದ್ದರೆ, ಈಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ…

2 hours ago

ಬೀದಿ ದೀಪಗಳ ನಿರ್ವಹಣೆ ಕೊರತೆ; ಸಾರ್ವಜನಿಕರ ವ್ಯಥೆ

ಕೆ.ಪಿ.ಮದನ್ ಮೈಸೂರು: ಹಲವೆಡೆ ಬೀದಿ ನಾಯಿಗಳು ಸಾರ್ವಜನಿಕರಿಗೆ ತೊಂದರೆ ಕೊಡುತ್ತಿರುವ ವರದಿಗಳು ಪ್ರಕಟವಾಗುತ್ತಿವೆ. ಇತ್ತ ನಗರದ ಆಸುಪಾಸಿನಲ್ಲಿರುವ ಕೆಲ ಬಡಾವಣೆಗಳ…

2 hours ago

ಶಿಕ್ಷಕರ ಜೇಬಿಗೆ ಹೊರೆಯಾದ ಬಿಸಿಯೂಟ

ಎಸ್.ಎಸ್.ಭಟ್ ಬೇಳೆ, ಎಣ್ಣೆಗೆ ಶಿಕ್ಷಣ ಇಲಾಖೆ ವಿಧಿಸಿರುವ ದರವೇ ಶಿಕ್ಷಕರಿಗೆ ಹೊರೆ ನಂಜನಗೂಡು: ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ನೀಡಲಾಗುತ್ತಿರುವ ಬಿಸಿಯೂಟ…

2 hours ago