ರಾಜ್ಯ

ಗೃಹಲಕ್ಷ್ಮಿ ಸಂಘಗಳ ಮೂಲಕ ಮಹಿಳೆಯರಿಗೆ ಆರ್ಥಿಕ ಬಲ ತುಂಬಲು ಯೋಜನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೀದರ್ : ರಾಜ್ಯದಲ್ಲಿ 30 ರಿಂದ 40 ಲಕ್ಷ ಗೃಹಲಕ್ಷ್ಮಿ ಸಂಘಗಳನ್ನು ರಚಿಸುವ ಯೋಜನೆಯಿದ್ದು, ಈ ಮೂಲಕ ಯಜಮಾನಿಯರಿಗೆ ಆರ್ಥಿಕವಾಗಿ ಬಲ ತುಂಬಲು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೀದರ್ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ಕಲಬುರಗಿ ವಿಭಾಗ ಮಟ್ಟದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎರಡನೇ ದಿನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಮಾತನಾಡಿದರು. ‌

ಈ ವರ್ಷ ಅಂಗನವಾಡಿ ಆರಂಭವಾಗಿ 50 ವರ್ಷ ತುಂಬುತ್ತಿದ್ದು, ಅಕ್ಟೋಬರ್‌ನಲ್ಲಿ ಸುವರ್ಣ ಮಹೋತ್ಸವ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಗೃಹಲಕ್ಷ್ಮಿ ಸಂಘಗಳ ಘೋಷಣೆ ಮಾಡಿ ಇನ್ನಷ್ಟು ಬಲ ತುಂಬಲಾಗುವುದು. ಇಲಾಖೆಯಲ್ಲಿ ಸಾಕಷ್ಟು ಯೋಜನೆಗಳಿದ್ದು, ಜನರಿಗೆ ತಿಳಿವಳಿಕೆ ಮೂಡಿಸಲು ಇನ್ನೂ ಹೆಚ್ಚಿನ ಕ್ರಮ ಕೈಗೊಳ್ಳಬೇಕು. ನಮ್ಮ ಇಲಾಖೆ ಜನರಿಗೆ, ಜನರ ಬದುಕಿಗೆ ಹತ್ತಿರವಾದ ಇಲಾಖೆ, ಅಧಿಕಾರಿಗಳು ಹೆಚ್ಚು ಕಾಳಜಿಯಿಂದ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಬಾಲ್ಯ ವಿವಾಹ ತಡೆಯಲು ವಿಶೇಷ ಕ್ರಮ ಅಗತ್ಯ : ಬಾಲ್ಯ ವಿವಾಹವನ್ನು ತಡೆಯಲು ಅಧಿಕಾರಿಗಳು ವಿಶೇಷ ಕ್ರಮಕೈಗೊಳ್ಳಬೇಕು, ಸ್ವತಃ ಕರೆ ಮಾಡಿ ತನ್ನ ವಿವಾಹವನ್ನು ತಪ್ಪಿಸುವಂತೆ ಅಧಿಕಾರಿಗಳನ್ನು ಕೋರಿದ್ದ ಜಿಲ್ಲೆಯ ಬಾಲಕಿಯನ್ನು ಕರೆಸಿ ಸನ್ಮಾನಿಸಬೇಕು, ಜೊತೆಗೆ ಆರ್ಥಿಕ ಸಹಾಯ ಮಾಡಬೇಕು. ಇದರಿಂದ ಬೇರೆಯವರಿಗೂ‌ ಕೂಡ ಸಹಾಯವಾಗುತ್ತದೆ. ಎಲ್ಲಾ ಇಲಾಖೆಗಳು ಕೈಜೋಡಿಸಿದಾಗ ಅನಿಷ್ಟ ಪದ್ಧತಿಗಳನ್ನು ತಡೆಯಲು ಸಾಧ್ಯ. ಜಾಗೃತಿ ಮೂಡಿಸುವುದರ ಜೊತೆಗೆ ಕಠಿಣ ಕ್ರಮದ ಮೂಲಕ ಭಯ ಹುಟ್ಟಿಸಿದರೆ ಅನಿಷ್ಟ ಪದ್ಧತಿ ನಿಲ್ಲಲು ಸಾಧ್ಯ ಎಂದು ತಿಳಿಸಿದರು.

ಕೇಂದ್ರ ಹಾಗೂ ರಾಜ್ಯದಿಂದ ಕಾಲಕಾಲಕ್ಕೆ ನೀಡಲಾಗುವ ಗುರಿಯನ್ನು ತಲುಪಲೇಬೇಕು. ಇಲಾಖೆ ಯೋಜನೆ ಅನುಷ್ಠಾನದಲ್ಲಿ ಹಿಂದೆ ಬಿದ್ದಲ್ಲಿ ಅಧಿಕಾರಿ, ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು‌.

ಕಲಬುರಗಿ ವಿಭಾಗದಲ್ಲಿ ಗೃಹಲಕ್ಷ್ಮಿ ಯೋಜನೆಗೆ 10 ಸಾವಿರ ಕೋಟಿ ಈ ಭಾಗಕ್ಕೆ ಗೃಹ ಲಕ್ಷ್ಮೀ ಯೋಜನೆ ಮೂಲಕ 10 ಸಾವಿರ ಕೋಟಿ ರೂಪಾಯಿ ನೀಡಲಾಗಿದೆ. ಯಾರಿಗೂ ಯೋಜನೆ ಕೈ ತಪ್ಪದಂತೆ ಕ್ರಮ ಕೈಗೊಳ್ಳಬೇಕು. ಗೃಹ ಲಕ್ಷ್ಮೀ ಹಣದಿಂದ ಮಹಿಳೆಯರು ಸಾಕಷ್ಟು ಕಾರ್ಯಕ್ರಮ ಮಾಡುತ್ತಿದ್ದಾರೆ. ಅವುಗಳನ್ನು ಪ್ರಚಾರ ಮಾಡುವುದರಿಂದ ಇತರರಿಗೂ ಲಾಭವಾಗುತ್ತದೆ. ಗೃಹ ಲಕ್ಷ್ಮೀ ಸಂಘಗಳ ಮೂಲಕ ಇನ್ನೂ ಹೆಚ್ಚಿನ ಪ್ರಯೋಜನವಾಗುವಂತೆ ಹೇಗೆ ಮಾಡಬಹುದು ಎನ್ನುವ ಚಿಂತನೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಅಕ್ಕ ಪಡೆಗೆ ಸಚಿವರ ಶ್ಲಾಘನೆ: ಬೀದರ್ ಜಿಲ್ಲೆಯಲ್ಲಿ 10 ಜನ ಮಹಿಳಾ ಪೊಲೀಸ್ ತಂಡದಿಂದ ಅಕ್ಕ ಪಡೆ ರಚಿಸಿ ಶಾಲಾ- ಕಾಲೇಜು, ಗಾರ್ಡನ್, ಹಾಸ್ಟೆಲ್ ಮೊದಲಾದ ಕಡೆ ನಿರಂತರ ನಿಗಾ ವಹಿಸುವ ಮೂಲಕ ಹೆಣ್ಣು ಮಕ್ಕಳಿಗೆ ವಿಶೇಷ ರಕ್ಷಣೆ ನೀಡುತ್ತಿರುವ ಬಗ್ಗೆ ಮಾಹಿತಿ ಪಡೆದ ಸಚಿವರು, ಇದೇ ಯೋಜನೆಯನ್ನು ರಾಜ್ಯಾದ್ಯಂತ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅಂಗನವಾಡಿ ಕಟ್ಟಡಗಳ ದುರಸ್ತಿಗೆ ಆದ್ಯತೆ: ಅಂಗನವಾಡಿ ಕಟ್ಟಡಗಳ ದುರಸ್ತಿಗೆ ಹೆಚ್ಚಿನ ಆದ್ಯತೆ ನೀಡಬೇಕು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಅಂಗನವಾಡಿ ಕೇಂದ್ರಗಳಿಗೆ ಆಗಾಗ ಭೇಟಿ ನೀಡುತ್ತಿರಬೇಕು. ಎಲ್ಲಾ ಇಲಾಖೆಯ ಅಧಿಕಾರಿಗಳು ಸಾಮಾಜಿಕ ಜವಾಬ್ದಾರಿಯಿಂದ ಕೆಲಸ ಮಾಡಬೇಕು, ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಬೇಕು. ಆಗ ಮಾತ್ರ ಸರ್ಕಾರಕ್ಕೂ ಒಳ್ಳೆ ಹೆಸರು ಬರುತ್ತದೆ. ಸಮಾಜಕ್ಕೂ ಸಹಾಯವಾಗುತ್ತದೆ ಎಂದು ಮಾಹಿತಿ ಹಂಚಿಕೊಂಡರು.

ಯೋಜನೆಗಳ ಕುರಿತು ಜನರಿಗೆ ಅರಿವು: ಇಲಾಖೆಯಲ್ಲಿ ಸಾಕಷ್ಟು ಯೋಜನೆಗಳಿವೆ. ಅವುಗಳ ಕುರಿತು ಜನರಿಗೆ ಸರಿಯಾದ ಅರಿವಿಲ್ಲ. ಯೋಜನೆಗಳನ್ನು ಜನರಿಗೆ ತಲುಪಿಸಬೇಕು. ಮಹಿಳೆಯರಿಗೆ ಸಹಾಯ ಮಾಡಲು ಬೇಕಾದಷ್ಟು ಅವಕಾಶಗಳಿವೆ. ಈ ಮೂಲಕ ಹೆಚ್ಚು ಹೆಚ್ಚು ಜನರನ್ನು ತಲುಪಬೇಕು ಎಂದು ಕರೆ ನೀಡಿದರು.

ಈ ವೇಳೆ ಇಲಾಖೆಯ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಜಿಲ್ಲಾಧಿಕಾರಿ ಶಿಲ್ಪಾ‌ ಶರ್ಮ, ಜಿಲ್ಲಾ ಪಂಚಾಯತ್ ಸಿಇಒ ಗಿರೀಶ್ ಬಡೊಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಇಲಾಖೆಯ ನಿರ್ದೇಶಕ ರಾಘವೇಂದ್ರ, ಜಂಟಿ ಕಾರ್ಯದರ್ಶಿ ಹಾಗೂ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ , ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಸೇರಿದಂತೆ ಇಲಾಖೆಯ ಜಂಟಿ ನಿರ್ದೇಶಕರು, ಉಪ ನಿರ್ದೇಶಕರು, ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮೇ.13 ರಿಂದ 3 ದಿನಗಳ ಕಾಲ ಟ್ರಂಪ್‌ ಚೀನಾ ಪ್ರವಾಸ

ವಾಷಿಂಗ್ಟನ್:‌ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರ ಆಹ್ವಾನದ ಮೇರೆಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇ.13ರಿಂದ 15ರವರೆಗೆ ಚೀನಾಗೆ…

56 seconds ago

ʻಪ್ರೀತಿ ಎಲ್ಲಕ್ಕಿಂತ ಶಕ್ತಿಶಾಲಿʼ ವಿಜಯ್‌ ಮುಖ್ಯಮಂತ್ರಿ ಆದ ಬೆನ್ನಲ್ಲೇ ತ್ರಿಶಾ ಪೋಸ್ಟ್‌

ಚೆನ್ನೈ : ಜೋಸೆಫ್‌ ವಿಜಯ್ ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಅವರ ಆಪ್ತ ಸ್ನೇಹಿತೆ, ನಟಿ…

41 mins ago

ಚಿನ್ನ ಖರೀದಿ ನಿಲ್ಸಿ ; ಇಂಧನ ಕಡಿಮೆ ಬಳಸಿ : ಬೆಲೆ ಏರಿಕೆ ಮುನ್ಸೂಚನೆ ಕೊಟ್ರಾ ಪ್ರಧಾನಿ ಮೋದಿ?

ಹೈದರಾಬಾದ್‌ : ಅಮೆರಿಕ-ಇರಾನ್‌ ಸಂಘರ್ಷವು ಜಾಗತಿಕ ತೈಲ ಮಾರುಕಟ್ಟೆ ಹಾಗೂ ಅರ್ಥ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಜಾಗತಿಕ ತೈಲ…

2 hours ago

ದ ಗ್ರೇಟ್‌ ನಿಕೋಬಾರ್‌ ಯೋಜನೆ : ವಿಕಾಸವೋ? ವಿನಾಶವೋ?

ಶುಭಾ ಖಟಾವಕರ ಮ್ಹೆತ್ರಸ್‌ 72,000 ಕೋಟಿ ರೂ.ಗಳಿಂದ 90,000 ಕೋಟಿ ರೂ.ವೆಚ್ಚದ ಯೋಜನೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ…

3 hours ago

ಕಳೆದ ಚುನಾವಣೆ : ಇಬ್ಬರು ಪರಿಣಿತರ ವಿಶ್ಲೇಷಣೆ

ರಾಜಕಾರಣಿಗಳು ಕೊನೆಗೂ ಕೇಳಿಕೊಳ್ಳಬೇಕಿರುವುದು ನೀವು ಯಾರೋ ಒಬ್ಬರ ಬದುಕು ಚಂದವಾಗಲು ಕಾರಣವಾದಿರಾ ಎಂಬ ಪ್ರಶ್ನೆ ಮಾತ್ರವೇ. ಅದೊಂದೇ ಸತ್ಯ. ಉಳಿದದ್ದೆಲ್ಲ…

4 hours ago

ತಾಯಂದಿರ ದಿನ ವಿಶೇಷ | ನನ್ನ ಕರುಳ ಕುಡಿ ನನ್ನದೇ ಆಯ್ಕೆ

ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ      ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…

4 hours ago