ರಾಜ್ಯ

ಗೃಹಲಕ್ಷ್ಮೀಯರೇ ರೀಲ್ಸ್ ಮಾಡಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಬಹುಮಾನ ಗೆಲ್ಲಿ

ಬೆಂಗಳೂರು: ರಾಜ್ಯದ ಕುಟುಂಬದ ಯಜಮಾನಿಯರಿಗೆ ಸಂತಸದ ಸುದ್ಧಿ; ‘ಗೃಹಲಕ್ಷ್ಮೀ’ ಯೋಜನೆಯ ಫಲಾನುಭವಿಗಳಾದ ಯಜಮಾನಿಯರು ರೀಲ್ಸ್ ಮಾಡಿ ಬಹುಮಾನ ಗೆಲ್ಲಲು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅತ್ಯುತ್ತಮ ಅವಕಾಶ ಕಲ್ಪಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯು ಜಾರಿಗೆ ಬಂದು ಇಲ್ಲಿಗೆ ಒಂದು ವರ್ಷವಾಗಿದೆ. ಈ ಸಂದರ್ಭದಲ್ಲಿ ಕುಟುಂಬದ ಎಲ್ಲ ಯಜಮಾನಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಭಾಶಯ ಮತ್ತು ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಯಜಮಾನಿಯರಿಗೆ ಒಂದು ಬಹುಮಾನವನ್ನೂ ಘೋಷಿಸಿದ್ದಾರೆ.

ಇಲ್ಲಿಯವರೆಗೆ ಗೃಹಲಕ್ಷ್ಮೀ ಫಲಾನುಭವಿಗಳಾದ ತಮ್ಮ ಜೀವನದಲ್ಲಿ ಏನೆಲ್ಲ ಬದಲಾವಣೆಯನ್ನು ಈ ಒಂದು ವರ್ಷದಲ್ಲಿ ತಂದಿದೆ ಎನ್ನುವುದನ್ನು ಯಜಮಾನಿಯರು ಹಂಚಿಕೊಳ್ಳಲು ಸಚಿವರು ಕೋರಿದ್ದಾರೆ.

ರೀಲ್ಸ್ ಮಾಡಿ ಸಾಮಾಜಿಕ ಜಾಲ ಜಾಲತಾಣಗಳಾದ ಯುಟ್ಯೂಬ್, ಫೇಸ್ ಬುಕ್, ಇನ್ ಸ್ಟಾಗ್ರಾಮ್ ಗಳಲ್ಲಿ ಶೇರ್ ಮಾಡುವ ಮೂಲಕ ಅದನ್ನು ಹಂಚಿಕೊಳ್ಳುವಂತೆ ಕೋರಿದ್ದಾರೆ.

ಯಾವ ಯಜಮಾನಿಯರು ಮಾಡಿದ ರೀಲ್ಸ್ ಗೆ ಹೆಚ್ಚು ವಿವರ್ಸ್ ಬಂದಿದೆಯೋ ಅಂತಹ ಯಜಮಾನಿಯರಿಗೆ ಒಂದು ಬಹುಮಾನ ಘೋಷಿಸಿದ್ದಾರೆ. ಇಲ್ಲಿಂದ ಒಂದು ತಿಂಗಳು ಅಂದರೆ ಸೆಪ್ಪಂಬರ್ 30ನೇ ತಾರೀಖಿನವರೆಗೆ ಯಜಮಾನಿಯರು ತಮ್ಮ ರೀಲ್ಸ್ ಗಳನ್ನು ಯುಟ್ಯೂಬ್, ಫೇಸ್ ಬುಕ್, ಇನ್ ಸ್ಟಾಗ್ರಾಮ್ ಗಳಲ್ಲಿ ಹಂಚಿಕೊಳ್ಳಬೇಕಿದೆ. ಜಾಸ್ತಿ ವಿವರ್ಸ್ ಸಿಕ್ಕಿದ ಯಜಮಾನಿಯರಿಗೆ ಸಚಿವರು ವೈಯಕ್ತಿಕವಾಗಿ ಒಂದು ಬಹುಮಾನವನ್ನು ನೀಡಲಿದ್ದಾರೆ.

ಮೊದಲ 50 ಯಜಮಾನಿಯರ ರೀಲ್ಸ್ ಹಾದಿಯನ್ನು ಎದುರು ನೋಡುತ್ತಿದ್ದೇನೆ; ಈ ಒಂದು ಗೃಹಲಕ್ಷ್ಮೀ ಯೋಜನೆಯಿಂದ ಜೀವನದಲ್ಲಿ ಆದ ಬದಲಾವಣೆಯನ್ನು ನಮ್ಮೆಲ್ಲ ಕರ್ನಾಟಕದ ಜನರ ಮುಂದೆ ಹಂಚಿಕೊಳ್ಳಬೇಕೆಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗೃಹಲಕ್ಷ್ಮೀ ಯೋಜನೆಯ ಎಲ್ಲ ಯಜಮಾನಿಯರಲ್ಲಿ ಮನವಿ ಮಾಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

3 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

5 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

6 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago