ರಾಜ್ಯ

ಗೃಹಲಕ್ಷ್ಮೀಯರೇ ರೀಲ್ಸ್ ಮಾಡಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಬಹುಮಾನ ಗೆಲ್ಲಿ

ಬೆಂಗಳೂರು: ರಾಜ್ಯದ ಕುಟುಂಬದ ಯಜಮಾನಿಯರಿಗೆ ಸಂತಸದ ಸುದ್ಧಿ; ‘ಗೃಹಲಕ್ಷ್ಮೀ’ ಯೋಜನೆಯ ಫಲಾನುಭವಿಗಳಾದ ಯಜಮಾನಿಯರು ರೀಲ್ಸ್ ಮಾಡಿ ಬಹುಮಾನ ಗೆಲ್ಲಲು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅತ್ಯುತ್ತಮ ಅವಕಾಶ ಕಲ್ಪಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯು ಜಾರಿಗೆ ಬಂದು ಇಲ್ಲಿಗೆ ಒಂದು ವರ್ಷವಾಗಿದೆ. ಈ ಸಂದರ್ಭದಲ್ಲಿ ಕುಟುಂಬದ ಎಲ್ಲ ಯಜಮಾನಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಭಾಶಯ ಮತ್ತು ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಯಜಮಾನಿಯರಿಗೆ ಒಂದು ಬಹುಮಾನವನ್ನೂ ಘೋಷಿಸಿದ್ದಾರೆ.

ಇಲ್ಲಿಯವರೆಗೆ ಗೃಹಲಕ್ಷ್ಮೀ ಫಲಾನುಭವಿಗಳಾದ ತಮ್ಮ ಜೀವನದಲ್ಲಿ ಏನೆಲ್ಲ ಬದಲಾವಣೆಯನ್ನು ಈ ಒಂದು ವರ್ಷದಲ್ಲಿ ತಂದಿದೆ ಎನ್ನುವುದನ್ನು ಯಜಮಾನಿಯರು ಹಂಚಿಕೊಳ್ಳಲು ಸಚಿವರು ಕೋರಿದ್ದಾರೆ.

ರೀಲ್ಸ್ ಮಾಡಿ ಸಾಮಾಜಿಕ ಜಾಲ ಜಾಲತಾಣಗಳಾದ ಯುಟ್ಯೂಬ್, ಫೇಸ್ ಬುಕ್, ಇನ್ ಸ್ಟಾಗ್ರಾಮ್ ಗಳಲ್ಲಿ ಶೇರ್ ಮಾಡುವ ಮೂಲಕ ಅದನ್ನು ಹಂಚಿಕೊಳ್ಳುವಂತೆ ಕೋರಿದ್ದಾರೆ.

ಯಾವ ಯಜಮಾನಿಯರು ಮಾಡಿದ ರೀಲ್ಸ್ ಗೆ ಹೆಚ್ಚು ವಿವರ್ಸ್ ಬಂದಿದೆಯೋ ಅಂತಹ ಯಜಮಾನಿಯರಿಗೆ ಒಂದು ಬಹುಮಾನ ಘೋಷಿಸಿದ್ದಾರೆ. ಇಲ್ಲಿಂದ ಒಂದು ತಿಂಗಳು ಅಂದರೆ ಸೆಪ್ಪಂಬರ್ 30ನೇ ತಾರೀಖಿನವರೆಗೆ ಯಜಮಾನಿಯರು ತಮ್ಮ ರೀಲ್ಸ್ ಗಳನ್ನು ಯುಟ್ಯೂಬ್, ಫೇಸ್ ಬುಕ್, ಇನ್ ಸ್ಟಾಗ್ರಾಮ್ ಗಳಲ್ಲಿ ಹಂಚಿಕೊಳ್ಳಬೇಕಿದೆ. ಜಾಸ್ತಿ ವಿವರ್ಸ್ ಸಿಕ್ಕಿದ ಯಜಮಾನಿಯರಿಗೆ ಸಚಿವರು ವೈಯಕ್ತಿಕವಾಗಿ ಒಂದು ಬಹುಮಾನವನ್ನು ನೀಡಲಿದ್ದಾರೆ.

ಮೊದಲ 50 ಯಜಮಾನಿಯರ ರೀಲ್ಸ್ ಹಾದಿಯನ್ನು ಎದುರು ನೋಡುತ್ತಿದ್ದೇನೆ; ಈ ಒಂದು ಗೃಹಲಕ್ಷ್ಮೀ ಯೋಜನೆಯಿಂದ ಜೀವನದಲ್ಲಿ ಆದ ಬದಲಾವಣೆಯನ್ನು ನಮ್ಮೆಲ್ಲ ಕರ್ನಾಟಕದ ಜನರ ಮುಂದೆ ಹಂಚಿಕೊಳ್ಳಬೇಕೆಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗೃಹಲಕ್ಷ್ಮೀ ಯೋಜನೆಯ ಎಲ್ಲ ಯಜಮಾನಿಯರಲ್ಲಿ ಮನವಿ ಮಾಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸರ್ಕಾರ ನಡೆಸಲು ಆಗದಿದ್ದರೆ ವಿಸರ್ಜಿಸಿ ಚುನಾವಣೆಗೆ ಬನ್ನಿ : ಕಾಂಗ್ರೆಸ್‌ಗೆ ವಿಜಯೇಂದ್ರ ಸವಾಲು

ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…

5 hours ago

ಪಾದಯಾತ್ರೆ ಮಧ್ಯೆ ದಲಿತ ಮುಖಂಡರ ಜೊತೆ ಸಭೆ ನಡೆಸಿದ ಬಿ.ವೈ. ವಿಜಯೇಂದ್ರ

ಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…

6 hours ago

ಕೆ.ಆರ್.ಪೇಟೆ | ಕುಡಿಯುವ ನೀರಿನ ಸಮಸ್ಯೆ ಪರಿಶೀಲಿಸಿದ ಜಿಲ್ಲಾಧಿಕಾರಿ ಮತ್ತು ಸಿಇಒ

ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…

6 hours ago

ಮೈಸೂರು | ಮಾನಸಗಂಗೋತ್ರಿಯಲ್ಲಿ ಜಾನಪದ ಝೇಂಕಾರ

ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…

7 hours ago

ಬುಟಕಟ್ಟು ಕುಟುಂಬಗಳಿಗೆ ಶೀಘ್ರದಲ್ಲೇ ಪೌಷ್ಟಿಕ ಆಹಾರದ ಕಿಟ್ ವಿತರಣೆ

ಎಂಎಲ್‌ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…

7 hours ago

ಅಕ್ರಮ ದಾಸ್ತಾನುಗಳ ಮೇಲೆ ಜಂಟಿ ದಾಳಿ ಮಾಡಿ : ಸಚಿವ ರಿಜ್ವಾನ್‌ ಅರ್ಷದ್‌

ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…

8 hours ago