ರಾಜ್ಯ

ಗೃಹಲಕ್ಮಿ | ವಿಪಕ್ಷಗಳಿಗೆ ಅತ್ತೆ-ಸೊಸೆ ಉತ್ತರ ನೀಡಿದ್ದಾರೆ; ಲಕ್ಷ್ಮಿ ಹೆಬ್ಬಾಳಕರ

ಬೆಳಗಾವಿ : ಗೃಹಲಕ್ಷ್ಮಿ ಯೋಜನೆಯ ಹಣ ನೀಡುವ ಮೂಲಕ ಸರ್ಕಾರ ಅತ್ತೆ-ಸೊಸೆ ನಡುವೆ ಜಗಳ ತಂದಿಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದ ವಿಪಕ್ಷಗಳಿಗೆ ಗದಗದ ಅತ್ತೆ-ಸೊಸೆ ಗೃಹಲಕ್ಷ್ಮಿ ಹಣ ಕೂಡಿಟ್ಟು ಬೋರ್ ವೆಲ್ ಕೊರೆಸಿ ಉತ್ತರ ನೀಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ. ‌

ಭಾನುವಾರ ತಮ್ಮ ಗೃಹ ಕಚೇರಿಯಲ್ಲಿ ಮಾತನಾಡಿದ ಅವರು, ಗದಗದ ಅತ್ತೆ, ಸೊಸೆ ಎಲ್ಲರಿಗೂ ಮಾದರಿ ಆಗಿದ್ದಾರೆ ಎಂದರು‌.‌

ಗದಗ ಜಿಲ್ಲೆಯ ಗಜೇಂದ್ರಗಡದ ಅತ್ತೆ, ಸೊಸೆ ಕಾರ್ಯ ನೋಡಿ ತುಂಬಾ ಖುಷಿ ಆಯಿತು. ಗೃಹಲಕ್ಷ್ಮಿ ಯೋಜನೆಯ ಹಣ ಅತ್ತೆಗೊ, ಸೊಸೆಗೊ ಎಂದು ಹೇಳುವ ಮೂಲಕ ವಿರೋಧ ಪಕ್ಷದವರು ಜಗಳ ಹಚ್ಚುವ ಕೆಲಸ ಮಾಡುತ್ತಿದ್ದರು.‌ ಈಗ ಅತ್ತೆ, ಸೊಸೆ ಇಬ್ಬರೂ ಕೂಡಿಟ್ಟ ಹಣದಿಂದ ಬೊರವೆಲ್ ಕೊರೆಸಿ, ಮಾದರಿಯಾಗಿದ್ದಾರೆ ಎಂದರು‌.

ಬೋರ್ ವೆಲ್ ನಿಂದ ನೀರು ಹರಿಸಿ, ವ್ಯವಸಾಯ ಮಾಡುತ್ತಿದ್ದಾರೆ. ಗದಗದ ಅತ್ತೆ, ಸೊಸೆ ನಿಜವಾಗಿಯೂ ಆದರ್ಶವಾದಿಗಳು ಆಗಿದ್ದಾರೆ. ಮಹಿಳೆಯರ ಆರ್ಥಿಕ ಸಬಲೀಕರಣ ಮಾಡುವ ಸಲುವಾಗಿ ಎರಡು ಸಾವಿರ ಹಣ ಕೊಡಲಾಗುತ್ತಿದೆ. ಈ ರೀತಿಯ ಹಣವನ್ನ ಕೂಡಿಟ್ಟು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಐತಿಹಾಸಿಕ ಗಾಂಧಿ ಭಾರತ ಕಾರ್ಯಕ್ರಮ
ಇದೇ 26,27 ರಂದು ಬೆಳಗಾವಿಯಲ್ಲಿ ನಡೆಯಲಿರುವ ಎಐಸಿಸಿ ಅಧಿವೇಶನ ಐತಿಹಾಸಿಕ ಕಾರ್ಯಕ್ರಮವಾಗಲಿದೆ. ಮಹಾತ್ಮಗಾಂಧಿ ಅವರ ಸಾರಥ್ಯದಲ್ಲಿ ನಡೆದ ಏಕೈಕ ಅಧಿವೇಶನ ಬೆಳಗಾವಿ ಅದಿವೇಶನ. ಇದು 100 ವರ್ಷ ಪೂರೈಸುತ್ತಿರುವ‌ ಹಿನ್ನೆಲೆಯಲ್ಲಿ ಇದೀಗ ಎರಡು ದಿನಗಳ ಕಾಲ ಅದ್ದೂರಿ ಕಾರ್ಯಕ್ರಮ ನಡೆಯಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ:  ರಷ್ಯಾ-ಭಾರತ ಇನ್ನೂ ಹತ್ತಿರ

ಭಾರತಕ್ಕೆ ಭೇಟಿ ನೀಡಿದ್ದ ರಷ್ಯಾ ದೇಶದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಅತ್ಯಂತ ಭವ್ಯ ರೀತಿಯಲ್ಲಿ ಸ್ವಾಗತ ನೀಡಿ, ಆ…

16 mins ago

ಓದುಗರ ಪತ್ರ: ಸೋಲಾರ್ ಕೃಷಿ ಪಂಪ್ ಸೆಟ್ ಸಬ್ಸಿಡಿ ಸದ್ಬಳಕೆಯಾಗಲಿ

ಪಿಎಂ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್‌ಗೆ ಶೇ.80 ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್…

26 mins ago

ಕಾಡುಪ್ರಾಣಿಗಳಿಗೆ ಪ್ರತಿನಿತ್ಯ ಒಂದು ಹಸು ಬಲಿ!

ಶನಿವಾರ, ಭಾನುವಾರ, ಸೋಮವಾರವೂ ಬಲಿ; ಹುಲಿ ದಾಳಿ ಎಂದು ಬಿಸಲವಾಡಿ, ಸಾಗಡೆ ಗ್ರಾಮಗಳ ರೈತರ ಆರೋ ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿ…

52 mins ago

ಇದ್ದೂ ಇಲ್ಲದಂತಿರುವ ಟರ್ಷಿಯರಿ ಕ್ಯಾನ್ಸರ್‌ ಕೇರ್‌

ರಾಜ್ಯ ಸರ್ಕಾರದಿಂದ ಅನುದಾನ ವಿಳಂಬ; ಚಿಕಿತ್ಸೆಗಾಗಿ ಬೆಂಗಳೂರು, ಮೈಸೂರಿನ ಆಸ್ಪತ್ರೆಗೆ ಅಲೆಯುತ್ತಿರುವ ರೋಗಿಗಳು ಮಂಡ್ಯ: ಕ್ಯಾನ್ಸರ್ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ…

1 hour ago

ಸಿಎಂಗೆ ವಿದ್ಯಾರ್ಥಿಗಳು ಪತ್ರ ಬರೆದ ಪ್ರಕರಣ: ಪಚ್ಚೆದೊಡ್ಡಿ ಸರ್ಕಾರಿ ಶಾಲೆಗೆ ಬಿಇಒ ಭೇಟಿ

ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…

4 hours ago

ಕೋಟೆ ಪುರಸಭೆ ಪೌರಕಾರ್ಮಿಕರು, ನೌಕರರಿಗೆ ೫ ತಿಂಗಳಿಂದ ಸಂಬಳವಿಲ್ಲ

ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…

4 hours ago