ರಾಜ್ಯ

ವರಮಹಾಲಕ್ಷ್ಮಿ ಹಬ್ಬಕ್ಕೆ ಗೃಹಲಕ್ಷ್ಮಿ ಹಣ

ಮೈಸೂರು: ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮಿ ಹಣಕ್ಕಾಗಿ ಎದುರು ನೋಡುತ್ತಿರುವ ರಾಜ್ಯದ ಮಹಿಳೆಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ.

ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಜೂನ್‌ಹಾಗೂ ಜುಲೈ ತಿಂಗಳ ಹಣ ಶೀಘ್ರದಲ್ಲೇ ಖಾತೆಗೆ ಜಮಾ ಆಗಲಿದೆ ಎಂದು ಸರ್ಕಾರ ಮಾಹಿತಿ ನೀಡಿದೆ. ಇದರಿಂದ ವರಮಹಾಲಕ್ಷ್ಮಿ ಹಬ್ಬದ ತಯಾರಿಯಲ್ಲಿರುವ ಮಹಿಳೆಯರು ಮತ್ತಷ್ಟು ಸಂತೋಷಗೊಂಡಿದ್ದಾರೆ.

ಈಗಾಗಲೇ ಜೂನ್‌ತಿಂಗಳ ಹಣ ಬಿಡುಗಡೆ ಪ್ರಕ್ರಿಯೆ ಆರಂಭವಾಗಿದ್ದು, ಇಂದಿನಿಂದ(ಆ.7) ರಾಜ್ಯದ 26.65 ಲಕ್ಷ ಅರ್ಹ ಫಲಾನುಭವಿಗಳಿಗೆ ಹಣ ಬಿಡುಗಡೆಯಾಲಿದೆ. ವರಲಕ್ಷ್ಮಿ ಹಬ್ಬದ ವೇಳೆಗೆ ಬಹುತೇಕ ಎಲ್ಲಾ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ ಎನ್ನಲಾಗುತ್ತಿದೆ.

ಬೆಂಗಳೂರು, ಕೋಲಾರ, ಹಾವೇರಿ, ಕೊಪ್ಪಳ, ವಿಜಯಪುರ, ಗದಗ, ರಾಯಚೂರು, ಬೀದರ್‌, ಬೆಳಗಾವಿ, ಕಲಬುರ್ಗಿ, ಬಾಗಲಕೋಟೆ, ಚಿತ್ರದುರ್ಗ ಹಾಗೂ ಯಾದಗಿರಿ ಜಿಲ್ಲೆಗಳ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ. ಮೊದಲ ಹಂತದಲ್ಲಿ 533 ಕೋಟಿ ರೂಪಾಯಿ ಪಾವತಿಯಾಗಲಿದೆ. ಹೀಗಾಗಿ ಮಹಿಳೆಯರಿಗೆ ವರಮಹಾಲಕ್ಷ್ಮಿ ಹಬ್ಬ ಮತ್ತಷ್ಟು ಮೆರಗು ಪಡೆದುಕೊಳ್ಳಲಿದೆ.

ತಾಂತ್ರಿಕ ಕಾರಣದಿಂದ ಕಳೆದ ಎರಡು ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮೆ ಆಗಿರಲಿಲ್ಲ. ಎರಡು ತಿಂಗಳ ಹಣ ಇಂದೇ ಮನೆ ಒಡತಿಯರ ಬ್ಯಾಂಕ್ ಅಕೌಂಟ್ ಗೆ ಜಮಾ ಆಗಲಿದ್ದು, ಇದರ ಬಗ್ಗೆ ಗೊಂದಲ ಬೇಡ. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಮಂಡ್ಯದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕಾರ್‌ ಘೋಷಣೆ ಮಾಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

3 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

3 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

3 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

4 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

4 hours ago

ಭಾರತವನ್ನು ನರಕಕೂಪ ಎಂದು ಹೀಯಾಳಿಸಿದ ಡೊನಾಲ್ಡ್ ಟ್ರಂಪ್‌: ವಿದೇಶಾಂಗ ಇಲಾಖೆ ಕಿಡಿ

ನವದೆಹಲಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಭಾರತವನ್ನು ನರಕಕೂಪ ಎಂದು ಉಲ್ಲೇಖಿಸಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ…

5 hours ago