ಮೈಸೂರು: ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮಿ ಹಣಕ್ಕಾಗಿ ಎದುರು ನೋಡುತ್ತಿರುವ ರಾಜ್ಯದ ಮಹಿಳೆಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ.
ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಜೂನ್ಹಾಗೂ ಜುಲೈ ತಿಂಗಳ ಹಣ ಶೀಘ್ರದಲ್ಲೇ ಖಾತೆಗೆ ಜಮಾ ಆಗಲಿದೆ ಎಂದು ಸರ್ಕಾರ ಮಾಹಿತಿ ನೀಡಿದೆ. ಇದರಿಂದ ವರಮಹಾಲಕ್ಷ್ಮಿ ಹಬ್ಬದ ತಯಾರಿಯಲ್ಲಿರುವ ಮಹಿಳೆಯರು ಮತ್ತಷ್ಟು ಸಂತೋಷಗೊಂಡಿದ್ದಾರೆ.
ಈಗಾಗಲೇ ಜೂನ್ತಿಂಗಳ ಹಣ ಬಿಡುಗಡೆ ಪ್ರಕ್ರಿಯೆ ಆರಂಭವಾಗಿದ್ದು, ಇಂದಿನಿಂದ(ಆ.7) ರಾಜ್ಯದ 26.65 ಲಕ್ಷ ಅರ್ಹ ಫಲಾನುಭವಿಗಳಿಗೆ ಹಣ ಬಿಡುಗಡೆಯಾಲಿದೆ. ವರಲಕ್ಷ್ಮಿ ಹಬ್ಬದ ವೇಳೆಗೆ ಬಹುತೇಕ ಎಲ್ಲಾ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ ಎನ್ನಲಾಗುತ್ತಿದೆ.
ಬೆಂಗಳೂರು, ಕೋಲಾರ, ಹಾವೇರಿ, ಕೊಪ್ಪಳ, ವಿಜಯಪುರ, ಗದಗ, ರಾಯಚೂರು, ಬೀದರ್, ಬೆಳಗಾವಿ, ಕಲಬುರ್ಗಿ, ಬಾಗಲಕೋಟೆ, ಚಿತ್ರದುರ್ಗ ಹಾಗೂ ಯಾದಗಿರಿ ಜಿಲ್ಲೆಗಳ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ. ಮೊದಲ ಹಂತದಲ್ಲಿ 533 ಕೋಟಿ ರೂಪಾಯಿ ಪಾವತಿಯಾಗಲಿದೆ. ಹೀಗಾಗಿ ಮಹಿಳೆಯರಿಗೆ ವರಮಹಾಲಕ್ಷ್ಮಿ ಹಬ್ಬ ಮತ್ತಷ್ಟು ಮೆರಗು ಪಡೆದುಕೊಳ್ಳಲಿದೆ.
ತಾಂತ್ರಿಕ ಕಾರಣದಿಂದ ಕಳೆದ ಎರಡು ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮೆ ಆಗಿರಲಿಲ್ಲ. ಎರಡು ತಿಂಗಳ ಹಣ ಇಂದೇ ಮನೆ ಒಡತಿಯರ ಬ್ಯಾಂಕ್ ಅಕೌಂಟ್ ಗೆ ಜಮಾ ಆಗಲಿದ್ದು, ಇದರ ಬಗ್ಗೆ ಗೊಂದಲ ಬೇಡ. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಮಂಡ್ಯದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕಾರ್ ಘೋಷಣೆ ಮಾಡಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…