ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣ ಸಂದಾಯ
ಬೆಂಗಳೂರು: ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ, ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಯಜಮಾನಿಯರ ಖಾತೆಗೆ ಹಾಕಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚುನಾವಣೆ ನಡೆಯುವ ಕ್ಷೇತ್ರಗಳಿಗೆ ಮಾತ್ರ ಗೃಹಲಕ್ಷ್ಮೀ ಹಣ ಹಾಕಲಾಗುತ್ತದೆ ಎಂಬುದು ಶುದ್ಧ ಸುಳ್ಳು. ಇದು ಆಧಾರರಹಿತ ಆರೋಪ ಎಂದರು.
ಜಿಎಸ್ಟಿ, ಜಿಎಸ್ಟಿಯೇತರ, ಆದಾಯ ತೆರಿಗೆ… ಹೀಗೆ ಫಲಾನುಭವಿಗಳನ್ನು ವಿಂಗಡಿಸಲಾಗಿದೆ. ಈಗಾಗಲೇ ನವೆಂಬರ್, ಡಿಸೆಂಬರ್ ತಿಂಗಳ ಬಿಲ್ ಆಗಿದ್ದು, ಈ ವಾರದೊಳಗೆ ಎಲ್ಲಾ ಫಲಾನುಭವಿಗಳಿಗೂ ಹಣ ಸಂದಾಯವಾಗಲಿದೆ ಎಂದು ತಿಳಿಸಿದರು.
ಇದು ಚುನಾವಣೆಗೋಸ್ಕರ ಮಾಡಿರುವ ಯೋಜನೆಗಳಲ್ಲ. ಚುನಾವಣೆ ಮುಗಿದ ಬಳಿಕವೂ ಯೋಜನೆಗಳು ಮುಂದುವರಿದಿವೆ. ಗೃಹಲಕ್ಷ್ಮೀ ಯೋಜನೆ ನಿರಂತರವಾಗಿ ಮುಂದುವರಿಯಲಿದೆ. ಕಾಂಗ್ರೆಸ್ ಸರ್ಕಾರ ಇರುವವರೆಗೂ ಗೃಹಲಕ್ಷ್ಮೀ ಯೋಜನೆ ಇರಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ ಹಾಜರಿದ್ದರು.
ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…
ಎಸ್ಸಿಪಿ-ಟಿಎಸ್ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…
ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…
ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…
ಎಂಎಲ್ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…
ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…