ಮಂಗಳೂರು: ಮಹಿಳೆಯನ್ನು ಆರ್ಥಿಕವಾಗಿ ಸಶಕ್ತಗೊಳಿಸಲು ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಯೋಜನೆಯನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಳ್ಳುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದ್ದಾರೆ.
ಶನಿವಾರ(ಜು.13) ಮಂಗಳೂರು ನಗರದ ಉರ್ವಸ್ಟೋರ್ ಬಳಿಯಿರುವ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ನವೀಕೃತ ಕಟ್ಟಡ ‘ಸಾಹಿತ್ಯ ಸದನ’ ವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಿದೆ. ಹಾಗಾಗಿ ಗೃಹಲಕ್ಷ್ಮಿ ಸೇರಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳು ನಿತ್ಯ ನಿರಂತರವಾಗಿ ಮುಂದುವರೆಯಲಿವೆ ಎಂದರು.
ರಾಜ್ಯದ ಪ್ರತಿ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬುದು ಸರ್ಕಾರದ ಆಶಯವಾಗಿದೆ. ಮನೆಗೆಲಸ ಮಾಡುವ ಪೋಷಕರ ಜತೆಗೆ ಐಎಎಸ್ ಅಧಿಕಾರಿಗಳಿಗೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕೆಂಬ ಆಕಾಂಕ್ಷೆ ಇರುತ್ತದೆ. ಹಾಗಾಗಿ, ಎಲ್ಲಾ ಮಕ್ಕಳಿಗೂ ಗುಣಮಟ್ಟದ ಶಿಕ್ಷಣದ ಜೊತೆಗೆ ಪೌಷ್ಠಿಕ ಆಹಾರ ನೀಡುವುದರೊಂದಿಗೆ ಅಂಗನವಾಡಿಗಳನ್ನು ಗೌರ್ನಮೆಂಟ್ ಮೊಂಟೆಸರಿಗಳಾಗಿ ಪರಿವರ್ತಿಸಲಾಗುವುದು ಎಂದು ಅವರು ಹೇಳಿದರು.
ಮಹಿಳೆ ಎಂದರೆ ಸಂಘರ್ಷ. ಮಹಿಳೆಯರು ತಮ್ಮ ಅಸ್ತಿತ್ವಕ್ಕೆ ಹೋರಾಟ ಮಾಡುವುದು ಸ್ವಾತಂತ್ರ ಬಂದು 76 ವರ್ಷಗಳ ನಂತರವೂ ಮುಂದುವರಿದಿದೆ. ಇದು ಆತಂಕಕಾರಿ ಬೆಳವಣಿಗೆ ಎಂದು ಸಚಿವೆ ಹೇಳಿದರು.
ಸಮಾಜದಲ್ಲಿ ಇಂದು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ, ಬಾಲಗರ್ಭಿಣಿ, ದೌರ್ಜನ್ಯ ಹೀಗೆ ನಿರಂತರ ಶೋಷಣೆ ನಡೆಯುವುದನ್ನು ಕಾಣುತ್ತಿದ್ದೇವೆ. ಆದರೂ, ಮಹಿಳೆ ಮಾನಸಿಕ ಸದೃಢತೆ ಹೊಂದಿರುವವಳು. ಇದರಿಂದಾಗಿಯೇ ಒಲಿಂಪಿಕ್ಸ್ ಕ್ರೀಡೆ, ಶಿಕ್ಷಣ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲೂ ಮಹಿಳೆ ಮುಂದೆ ಇದ್ದಾಳೆ. ಹೀಗಿದ್ದರೂ ರಾಜಕೀಯದಲ್ಲಿ ಮಹಿಳೆಯರ ಹಾಜರಾತಿಗೆ ಇನ್ನೂ ಒತ್ತು ನೀಡಬೇಕಾದ ಪ್ರಸಂಗ ಸಮಾಜದಲ್ಲಿದೆ. ಆ ನಿಟ್ಟಿನಲ್ಲಿ ಕರಾವಳಿ ಲೇಖಕಿಯರ ಮತ್ತು ರಾಜಕೀಯ ಸಂಘದಂತಹ ಮಹಿಳಾಪರ ಸಂಘ- ಸಂಸ್ಥೆಗಳ ಕಾರ್ಯಾಚರಣೆಗಳು ಪೂರಕವಾಗಿವೆ ಎಂದು ಸಚಿವರು ಹೇಳಿದರು.
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…