ಮಂಗಳೂರು: ಮಹಿಳೆಯನ್ನು ಆರ್ಥಿಕವಾಗಿ ಸಶಕ್ತಗೊಳಿಸಲು ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಯೋಜನೆಯನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಳ್ಳುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದ್ದಾರೆ.
ಶನಿವಾರ(ಜು.13) ಮಂಗಳೂರು ನಗರದ ಉರ್ವಸ್ಟೋರ್ ಬಳಿಯಿರುವ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ನವೀಕೃತ ಕಟ್ಟಡ ‘ಸಾಹಿತ್ಯ ಸದನ’ ವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಿದೆ. ಹಾಗಾಗಿ ಗೃಹಲಕ್ಷ್ಮಿ ಸೇರಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳು ನಿತ್ಯ ನಿರಂತರವಾಗಿ ಮುಂದುವರೆಯಲಿವೆ ಎಂದರು.
ರಾಜ್ಯದ ಪ್ರತಿ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬುದು ಸರ್ಕಾರದ ಆಶಯವಾಗಿದೆ. ಮನೆಗೆಲಸ ಮಾಡುವ ಪೋಷಕರ ಜತೆಗೆ ಐಎಎಸ್ ಅಧಿಕಾರಿಗಳಿಗೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕೆಂಬ ಆಕಾಂಕ್ಷೆ ಇರುತ್ತದೆ. ಹಾಗಾಗಿ, ಎಲ್ಲಾ ಮಕ್ಕಳಿಗೂ ಗುಣಮಟ್ಟದ ಶಿಕ್ಷಣದ ಜೊತೆಗೆ ಪೌಷ್ಠಿಕ ಆಹಾರ ನೀಡುವುದರೊಂದಿಗೆ ಅಂಗನವಾಡಿಗಳನ್ನು ಗೌರ್ನಮೆಂಟ್ ಮೊಂಟೆಸರಿಗಳಾಗಿ ಪರಿವರ್ತಿಸಲಾಗುವುದು ಎಂದು ಅವರು ಹೇಳಿದರು.
ಮಹಿಳೆ ಎಂದರೆ ಸಂಘರ್ಷ. ಮಹಿಳೆಯರು ತಮ್ಮ ಅಸ್ತಿತ್ವಕ್ಕೆ ಹೋರಾಟ ಮಾಡುವುದು ಸ್ವಾತಂತ್ರ ಬಂದು 76 ವರ್ಷಗಳ ನಂತರವೂ ಮುಂದುವರಿದಿದೆ. ಇದು ಆತಂಕಕಾರಿ ಬೆಳವಣಿಗೆ ಎಂದು ಸಚಿವೆ ಹೇಳಿದರು.
ಸಮಾಜದಲ್ಲಿ ಇಂದು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ, ಬಾಲಗರ್ಭಿಣಿ, ದೌರ್ಜನ್ಯ ಹೀಗೆ ನಿರಂತರ ಶೋಷಣೆ ನಡೆಯುವುದನ್ನು ಕಾಣುತ್ತಿದ್ದೇವೆ. ಆದರೂ, ಮಹಿಳೆ ಮಾನಸಿಕ ಸದೃಢತೆ ಹೊಂದಿರುವವಳು. ಇದರಿಂದಾಗಿಯೇ ಒಲಿಂಪಿಕ್ಸ್ ಕ್ರೀಡೆ, ಶಿಕ್ಷಣ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲೂ ಮಹಿಳೆ ಮುಂದೆ ಇದ್ದಾಳೆ. ಹೀಗಿದ್ದರೂ ರಾಜಕೀಯದಲ್ಲಿ ಮಹಿಳೆಯರ ಹಾಜರಾತಿಗೆ ಇನ್ನೂ ಒತ್ತು ನೀಡಬೇಕಾದ ಪ್ರಸಂಗ ಸಮಾಜದಲ್ಲಿದೆ. ಆ ನಿಟ್ಟಿನಲ್ಲಿ ಕರಾವಳಿ ಲೇಖಕಿಯರ ಮತ್ತು ರಾಜಕೀಯ ಸಂಘದಂತಹ ಮಹಿಳಾಪರ ಸಂಘ- ಸಂಸ್ಥೆಗಳ ಕಾರ್ಯಾಚರಣೆಗಳು ಪೂರಕವಾಗಿವೆ ಎಂದು ಸಚಿವರು ಹೇಳಿದರು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…