ಮಂಗಳೂರು: ಮಹಿಳೆಯನ್ನು ಆರ್ಥಿಕವಾಗಿ ಸಶಕ್ತಗೊಳಿಸಲು ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಯೋಜನೆಯನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಳ್ಳುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದ್ದಾರೆ.
ಶನಿವಾರ(ಜು.13) ಮಂಗಳೂರು ನಗರದ ಉರ್ವಸ್ಟೋರ್ ಬಳಿಯಿರುವ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ನವೀಕೃತ ಕಟ್ಟಡ ‘ಸಾಹಿತ್ಯ ಸದನ’ ವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಿದೆ. ಹಾಗಾಗಿ ಗೃಹಲಕ್ಷ್ಮಿ ಸೇರಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳು ನಿತ್ಯ ನಿರಂತರವಾಗಿ ಮುಂದುವರೆಯಲಿವೆ ಎಂದರು.
ರಾಜ್ಯದ ಪ್ರತಿ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬುದು ಸರ್ಕಾರದ ಆಶಯವಾಗಿದೆ. ಮನೆಗೆಲಸ ಮಾಡುವ ಪೋಷಕರ ಜತೆಗೆ ಐಎಎಸ್ ಅಧಿಕಾರಿಗಳಿಗೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕೆಂಬ ಆಕಾಂಕ್ಷೆ ಇರುತ್ತದೆ. ಹಾಗಾಗಿ, ಎಲ್ಲಾ ಮಕ್ಕಳಿಗೂ ಗುಣಮಟ್ಟದ ಶಿಕ್ಷಣದ ಜೊತೆಗೆ ಪೌಷ್ಠಿಕ ಆಹಾರ ನೀಡುವುದರೊಂದಿಗೆ ಅಂಗನವಾಡಿಗಳನ್ನು ಗೌರ್ನಮೆಂಟ್ ಮೊಂಟೆಸರಿಗಳಾಗಿ ಪರಿವರ್ತಿಸಲಾಗುವುದು ಎಂದು ಅವರು ಹೇಳಿದರು.
ಮಹಿಳೆ ಎಂದರೆ ಸಂಘರ್ಷ. ಮಹಿಳೆಯರು ತಮ್ಮ ಅಸ್ತಿತ್ವಕ್ಕೆ ಹೋರಾಟ ಮಾಡುವುದು ಸ್ವಾತಂತ್ರ ಬಂದು 76 ವರ್ಷಗಳ ನಂತರವೂ ಮುಂದುವರಿದಿದೆ. ಇದು ಆತಂಕಕಾರಿ ಬೆಳವಣಿಗೆ ಎಂದು ಸಚಿವೆ ಹೇಳಿದರು.
ಸಮಾಜದಲ್ಲಿ ಇಂದು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ, ಬಾಲಗರ್ಭಿಣಿ, ದೌರ್ಜನ್ಯ ಹೀಗೆ ನಿರಂತರ ಶೋಷಣೆ ನಡೆಯುವುದನ್ನು ಕಾಣುತ್ತಿದ್ದೇವೆ. ಆದರೂ, ಮಹಿಳೆ ಮಾನಸಿಕ ಸದೃಢತೆ ಹೊಂದಿರುವವಳು. ಇದರಿಂದಾಗಿಯೇ ಒಲಿಂಪಿಕ್ಸ್ ಕ್ರೀಡೆ, ಶಿಕ್ಷಣ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲೂ ಮಹಿಳೆ ಮುಂದೆ ಇದ್ದಾಳೆ. ಹೀಗಿದ್ದರೂ ರಾಜಕೀಯದಲ್ಲಿ ಮಹಿಳೆಯರ ಹಾಜರಾತಿಗೆ ಇನ್ನೂ ಒತ್ತು ನೀಡಬೇಕಾದ ಪ್ರಸಂಗ ಸಮಾಜದಲ್ಲಿದೆ. ಆ ನಿಟ್ಟಿನಲ್ಲಿ ಕರಾವಳಿ ಲೇಖಕಿಯರ ಮತ್ತು ರಾಜಕೀಯ ಸಂಘದಂತಹ ಮಹಿಳಾಪರ ಸಂಘ- ಸಂಸ್ಥೆಗಳ ಕಾರ್ಯಾಚರಣೆಗಳು ಪೂರಕವಾಗಿವೆ ಎಂದು ಸಚಿವರು ಹೇಳಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…