ಬೆಂಗಳೂರು : ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ತ್ವರಿಗತಿಯಲ್ಲಿ ಹಣ ಸಂದಾಯ ಮಾಡಬೇಕು. ತಾಂತ್ರಿಕ ಕಾರಣಗಳಿಂದ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳ ಖಾತೆಗೆ ಶೀಘ್ರ ಹಣ ಸಂದಾಯವಾಗುವಂತೆ ಇಲಾಖೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಸೂಚಿಸಿದ್ದಾರೆ.
ವಿಧಾನಸೌಧದ ತಮ್ಮ ಕಚೇರಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕೆಂದು ತಿಳಿಸಿದರು.
ಇಲಾಖೆಯ ಉಪ ನಿದೇಶಕರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಇ-ಗವರ್ನೆನ್ಸ್ ಇಲಾಖೆಯ ಸಹಕಾರದೊಂದಿಗೆ ಆಗಿರುವ ಕೆಲವೊಂದು ತಾಂತ್ರಿಕ ನೂನ್ಯತೆಗಳನ್ನು ಪರಿಪಡಿಸಬೇಕು. ಅಂಗನವಾಡಿ ಕಾರ್ಯಕರ್ತೆಯರ ಸಹಕಾರದೊಂದಿಗೆ ಮನೆ ಮನೆಗೆ ತೆರಳಿ ನೋಂದಣಿಯಲ್ಲಿ ಆಗಿರುವ ಸಮಸ್ಯೆಗಳನ್ನು ಇತ್ಯರ್ಥಪಡಿಸಬೇಕೆಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚಿಸಿದರು.
ಆಗಸ್ಟ್ ತಿಂಗಳಿನಲ್ಲಿ ಶೇಕಡ 88 ರಷ್ಟು ಮಂದಿಗೆ ಹಣ ಸಂದಾಯವಾಗಿದ್ದು, ಸೆಪ್ಟೆಂಬರ್ ತಿಂಗಳ ಹಣ ಹಂತ ಹಂತವಾಗಿ ಸಂದಾಯವಾಗುತ್ತಿದೆ. ಅಕ್ಟೋಬರ್ ತಿಂಗಳ ಹಣ ಶೇಕಡ 100ರಷ್ಟು ಫಲಾನುಭವಿಗಳಿಗೆ ಸಂದಾಯವಾಗುವಂತೆ ಮಾಡಬೇಕು ಎಂದು ಸಚಿವರು ಹೇಳಿದರು.
ಈ ವೇಳೆ ಇಲಾಖೆ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ನಿರ್ದೇಶಕಿ ಎಂ.ಎಸ್.ಅರ್ಚನಾ, ಸಚಿವರ ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್ ಸೇರಿದಂತೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…