ರಾಜ್ಯ

ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ಶೀಘ್ರ ಹಣ ಸಂದಾಯವಾಗಬೇಕು: ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು : ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ತ್ವರಿಗತಿಯಲ್ಲಿ ಹಣ ಸಂದಾಯ ಮಾಡಬೇಕು. ತಾಂತ್ರಿಕ ಕಾರಣಗಳಿಂದ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳ ಖಾತೆಗೆ ಶೀಘ್ರ ಹಣ ಸಂದಾಯವಾಗುವಂತೆ ಇಲಾಖೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಸೂಚಿಸಿದ್ದಾರೆ.

ವಿಧಾನಸೌಧದ ತಮ್ಮ ಕಚೇರಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕೆಂದು ತಿಳಿಸಿದರು.

ಇಲಾಖೆಯ ಉಪ ನಿದೇಶಕರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಇ-ಗವರ್ನೆನ್ಸ್‌ ಇಲಾಖೆಯ ಸಹಕಾರದೊಂದಿಗೆ ಆಗಿರುವ ಕೆಲವೊಂದು ತಾಂತ್ರಿಕ ನೂನ್ಯತೆಗಳನ್ನು ಪರಿಪಡಿಸಬೇಕು. ಅಂಗನವಾಡಿ ಕಾರ್ಯಕರ್ತೆಯರ ಸಹಕಾರದೊಂದಿಗೆ ಮನೆ ಮನೆಗೆ ತೆರಳಿ ನೋಂದಣಿಯಲ್ಲಿ ಆಗಿರುವ ಸಮಸ್ಯೆಗಳನ್ನು ಇತ್ಯರ್ಥಪಡಿಸಬೇಕೆಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅಧಿಕಾರಿಗಳಿಗೆ ಸೂಚಿಸಿದರು.

ಆಗಸ್ಟ್‌ ತಿಂಗಳಿನಲ್ಲಿ ಶೇಕಡ 88 ರಷ್ಟು ಮಂದಿಗೆ ಹಣ ಸಂದಾಯವಾಗಿದ್ದು, ಸೆಪ್ಟೆಂಬರ್‌ ತಿಂಗಳ ಹಣ ಹಂತ ಹಂತವಾಗಿ ಸಂದಾಯವಾಗುತ್ತಿದೆ. ಅಕ್ಟೋಬರ್‌ ತಿಂಗಳ ಹಣ ಶೇಕಡ 100ರಷ್ಟು ಫಲಾನುಭವಿಗಳಿಗೆ ಸಂದಾಯವಾಗುವಂತೆ ಮಾಡಬೇಕು ಎಂದು ಸಚಿವರು ಹೇಳಿದರು.

ಈ ವೇಳೆ ಇಲಾಖೆ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್‌, ನಿರ್ದೇಶಕಿ ಎಂ.ಎಸ್.ಅರ್ಚನಾ, ಸಚಿವರ ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್‌ ಸೇರಿದಂತೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು

andolanait

Recent Posts

ಮಿರ್ಜಾಪುರದಲ್ಲಿ ಸರಣಿ ಅಪಘಾತ: 11 ಮಂದಿ ಸಾವು

ಮಿರ್ಜಾಪುರ (ಉತ್ತರ ಪ್ರದೇಶ): ಬಹು ವಾಹನಗಳು ಡಿಕ್ಕಿಯಾಗಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಮಕ್ಕಳು ಸೇರಿದಂತೆ 11 ಮಂದಿ ಸಾವನ್ನಪ್ಪಿರುವ…

59 mins ago

ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯ ಚಿಂತನೆ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ: ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆಯ ಚಿಂತನೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಪೆಟ್ರೋಲ್‌ ಮತ್ತು…

1 hour ago

ಮಂಡ್ಯದಲ್ಲಿ ಸಿಇಟಿ ಗದ್ದಲ: ವಿದ್ಯಾರ್ಥಿನಿಯರ ಓಲೆ ಬಿಚ್ಚಿಸಿದ ಪರಿವೀಕ್ಷಕರು

ಮಂಡ್ಯ: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಇಂದು ಸಿಇಟಿ ಪರೀಕ್ಷೆ ಹಿನ್ನೆಲೆ ರಾಜ್ಯ ಸರ್ಕಾರದ ವಸ್ತ್ರ ಸಂಹಿತೆ ಕಡ್ಡಾಯವಾಗಿ ಜಾರಿಗೊಂಡಿದೆ. ಪರೀಕ್ಷೆಗೆ…

2 hours ago

ಮೈಸೂರಿನಲ್ಲಿ ಮೀನು ಮಾರಾಟ ಮಳಿಗೆಗೆ ಬೆಂಕಿ: ಅಂಗಡಿ ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಕರಕಲು

ಮೈಸೂರು: ಮೈಸೂರಿನಲ್ಲಿ ಮೀನು ಮಾರಾಟ ಮಳಿಗೆಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಂಗಡಿ ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ…

2 hours ago

ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ | ನಾಳೆ ವಿಶೇಷ ಸಂಪುಟ ಸಭೆ

ಬೆಂಗಳೂರು : ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸುವ ಉದ್ದೇಶಕ್ಕಾಗಿ ನಾಳೆ(ಏ.24)ವಿಶೇಷ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಕುಟ್ಟ ಖಾಸಗಿ ಹೋಂಸ್ಟೇ ಪರವಾನಗಿ ರದ್ದು

ಪೊನ್ನಂಪೇಟೆ: ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ವಿದೇಶಿ ಮಹಿಳೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟ್ಟ ಖಾಸಗಿ…

3 hours ago