ರಾಜ್ಯ

ಗೃಹಜ್ಯೋತಿ | ಮನೆ-ಮನೆ ಸಮೀಕ್ಷೆ ಅವಧಿ ಸೆಪ್ಟೆಂಬರ್‌ 30ರವರೆಗೆ ವಿಸ್ತರಣೆ

ಬೆಂಗಳೂರು : ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್‌ 30ರವರೆಗೆ ವಿಸ್ತರಿಸಿದೆ.

2023ರ ಜುಲೈ ತಿಂಗಳಲ್ಲಿ ಜಾರಿಗೊಂಡಿದ್ದ ಗೃಹ ಜ್ಯೋತಿ ಯೋಜನೆಯ ಪುನರ್‌ ಪರಿಶೀಲನಾ ಕಾರ್ಯ ನಡೆಯಲಿದ್ದು, ಜುಲೈ 1, 2026 ರಿಂದ ಗೃಹ ಜ್ಯೋತಿ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಆಗಸ್ಟ್‌ 31ರವರೆಗೆ ಸರ್ಕಾರ ಅವಧಿ ನಿಗದಿ ಮಾಡಿತ್ತು. ಇದೀಗ ಒಂದು ತಿಂಗಳ ಕಾಲ ಅವಧಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ ಮೇ 2026ರ ಅಂತ್ಯಕ್ಕೆ 68,86,860 ಗೃಹ ಜ್ಯೋತಿ ಫಲಾನುಭವಿಗಳಿದ್ದು, ಆಗಸ್ಟ್‌ 31ರವರೆಗೆ 46,70,588 ಫಲಾನುಭವಿಗಳ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. ಶೇಕಡಾ 70ರಷ್ಟು ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ. ಬೆಸ್ಕಾಂ ಮೀಟರ್‌ ರೀಡರ್‌ ಗಳು ಸೆಪ್ಟಂಬರ್‌ 1ರಿಂದ ವಿದ್ಯುತ್‌ ಸ್ಥಾವರಗಳ ಮೀಟರ್‌ ರೀಡಿಂಗ್‌ ಗೆ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಸಮೀಕ್ಷೆಗೆ ಬಾಕಿ ಉಳಿದಿರುವ ಫಲಾನುಭವಿಗಳು ದಾಖಲೆಗಳನ್ನು ನೀಡಿ ಸಹಕರಿಸುವಂತೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್.‌ ಶಿವಶಂಕರ ಮನವಿ ಮಾಡಿದ್ದಾರೆ.

ಡೋರ್‌ ಲಾಕ್‌ (Door Lock) ಆಗಿರುವ ಮನೆಗಳಿಗೆ ಸಿಬ್ಬಂದಿಯವರು ಆಯಾ ಸ್ಥಾವರದ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ DL ಎಂದು ನಮೂದಿಸಬೇಕು. ಪ್ರತಿಯೊಂದು ಡೋರ್‌ ಲಾಕ್‌ ಮನೆಗಳಿಗೆ ಸಿಬ್ಬಂದಿ ಬೇರೆ ಬೇರೆ ಸಮಯದಲ್ಲಿ ಮೂರು ಬಾರಿ ಭೇಟಿ ನೀಡಬೇಕು. ಪ್ರತಿ ಬಾರಿಯೂ ಆಕ್ಷಾಂಶ (Latitude) ಹಾಗೂ ರೇಖಾಂಶ (Longitude) ನಮೂದಿಸಿಕೊಳ್ಳಲು ಸಿಬ್ಬಂದಿಗಳಿಗೆ ಸೂಚಿಸಲಾಗಿದೆ. ಡೋರ್‌ ಲಾಕ್‌ ಆಗಿರುವ ಗ್ರಾಹಕರ ವಿವರಗಳನ್ನು ಆಪ್‌ ನಲ್ಲಿ ನಮೂದಿಸಿದ ತಕ್ಷಣ ಫಲಾನುಭವಿಗಳ ಮೊಬೈಲ್‌ಗೆ ಮೀಟರ್‌ ರೀಡರ್‌ ಹೆಸರು ಹಾಗೂ ಮೊಬೈಲ್‌ ಸಂಖ್ಯೆಯ ಸಹಿತ ಮೂರು ಬಾರಿ ಸಂದೇಶ ರವಾನೆಯಾಗುತ್ತದೆ. ಹೀಗಾಗಿ ಡೋರ್‌ ಲಾಕ್‌ ಇರುವ ಮನೆಗಳ ಫಲಾನುಭವಿಗಳು ಮೀಟರ್‌ ರೀಡರ್‌ ನ್ನು ಸಂಪರ್ಕಿಸಿ ನೋಂದಣಿ ಮಾಡಿಕೊಳ್ಳಲು ಬೆಸ್ಕಾಂ ವಿನಂತಿಸಿದೆ ಅದೇ ರೀತಿ ಖಾಲಿ (VACANT) ಎಂದು ಗುರುತಿಸಬೇಕಾದ ಸ್ಥಾವರಗಳಿಗೆ ಸಂಬಂಧಿಸಿದಂತೆ, ಸಿಬ್ಬಂದಿಯವರು ಆಯಾ ಸ್ಥಾವರದ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ, ಅಕ್ಷಾಂಶ ಮತ್ತು ರೇಖಾಂಶ ಗುರುತು ಮಾಡಿಕೊಂಡ ನಂತರವೇ ಆಪ್‌ ನಲ್ಲಿ ಖಾಲಿ (VACANT) ಎಂದು ಆಪ್‌ನಲ್ಲಿ ನಮೂದಿಸಲು ಸೂಚಿಸಲಾಗಿದೆ.

ಸಮೀಕ್ಷೆ ಕುರಿತು ಮಾಹಿತಿ ಪಡೆಯಲು ಬೆಸ್ಕಾಂ ನಿಗಮ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದ್ದು, 9480816111, 9480816112, 9480816113 ಮತ್ತು 9480816114 ಗೆ ಸಂಪರ್ಕಿಸಲು ಕೋರಲಾಗಿದೆ.

ಆಂದೋಲನ ಡೆಸ್ಕ್

Recent Posts

ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್‌ ನಿರ್ಮಾಣ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : 26,000 ಕೋಟಿ ಸಾಲ ಪಡೆದು ಸಂಚಾರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣವಾಗುತ್ತಿದೆ ಎಂದು…

12 mins ago

ಮೈಸೂರು ದಸರಾ | ಸೆ.28 ರಿಂದ ಅ.5ರವರೆಗೆ ಯುವ ಸಂಭ್ರಮ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮಕ್ಕೂ ಮುನ್ನ ಸ್ಥಳೀಯ ಕಾಲೇಜು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡಲು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ…

2 hours ago

ಕಾವೇರಿ ಜಲವಿವಾದ: ಸೆ.15ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಸೆಪ್ಟೆಂಬರ್‌ 15ಕ್ಕೆ ಮುಂದೂಡಿದೆ. ಬಾಕಿ ಇರುವ 17 ಟಿಎಂಸಿ ನೀರನ್ನು…

7 hours ago

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಪ್ರವಾಹದ ರಭಸಕ್ಕೆ…

8 hours ago

ಎಚ್.ಡಿ.ಕೋಟೆ: ಸಾರ್ವಜನಿಕರಿಗೆ ಆತಂಕ ಮೂಡಿಸಿದ್ದ ಹುಲಿ ಸೆರೆ

ಎಚ್.ಡಿ. ಕೋಟೆ: ತಾಲೂಕಿನ ಹೊಸ ಹುಳಲು ಗ್ರಾಮದಲ್ಲಿ ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ.…

8 hours ago

ರಾಜಕೀಯ ಮೇಲಾಟ ನಿಲ್ಲಲಿ; ಸಾಮಾನ್ಯರ ವಿಷಯ ಚರ್ಚೆಯಾಗಲಿ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಕೇಂದ್ರ ಬಿಂದುವಾಗಿದ್ದು,…

14 hours ago