ರಾಜ್ಯ

ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಹಣ ಬಂದಿಲ್ಲ ಎಂದ ಸಂಸದ ಗೋವಿಂದ ಜಾರಕೋಳ

ಬೆಳಗಾವಿ: ಇಂದು ಚುನಾವಣೆ ನಡೆದರೆ ಕಾಂಗ್ರೆಸ್‌ಗೆ ಕೇವಲ 20 ಸೀಟು ಬರುತ್ತದೆ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದಿದ್ದಾರೆ.

ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಬಂದು ಎರಡು ವರ್ಷವಾಗಿದೆ. ಭಂಡತನದಿಂದ ಐದು ಗ್ಯಾರಂಟಿ ಕೊಡುತ್ತೇವೆ ಎಂದಿದ್ದರು. ಆದರೆ ಈಗ ಗ್ಯಾರಂಟಿ ಹಣವನ್ನೂ ಕೊಡುತ್ತಿಲ್ಲ. ಗೃಹಲಕ್ಷ್ಮೀ ಹಣ ಮೂರು ತಿಂಗಳಿನಿಂದ ಖಾತೆಗೆ ಜಮೆ ಆಗಿಲ್ಲ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ದಿನನಿತ್ಯ ಕೊಲೆ ಸುಲಿಗೆ ಆಗುತ್ತಿವೆ. ಬೇರೆ ರಾಜ್ಯದವರು ಬಂದು ಕಳ್ಳತನ ಮಾಡ್ತಿದ್ದಾರೆ. ಜನರಿಗೆ, ಹೆಣ್ಣು ಮಕ್ಕಳಿಗೆ ರಕ್ಷಣೆಯಿಲ್ಲ. ಪುಂಡರ ಹಾವಳಿ ಜಾಸ್ತಿ ಆಗಿದೆ. ಸರ್ಕಾರದ ಹಿಡಿತ ತಪ್ಪಿ ಹೋಗಿದ್ದು, ಸಿದ್ದರಾಮಯ್ಯ ಎಲ್ಲದರಲ್ಲೂ ವಿಫಲರಾಗಿದ್ದಾರೆ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕರ್ನಾಟಕದಲ್ಲಿ ದಲಿತ ಸಿಎಂ ಮಾಡಲು ಅವಕಾಶ ಇದೆ. ಖರ್ಗೆ ಅವರು ಯಾರನ್ನಾದರೂ ಮಾಡಲಿ. ದಲಿತ ಸಿಎಂ ಮಾಡುತ್ತೇವೆ ಎಂದು ಘೋಷಣೆ ಮಾಡಲಿ. ಪರಮೇಶ್ವರ್‌, ಮುನಿಯಪ್ಪ ಅವರನ್ನು ಮಾಡಬೇಕು. ಇಲ್ಲವಾದರೆ ಖರ್ಗೆ ಅವರೇ ದಲಿತ ಸಿಎಂ ಆಗಲಿ ಎಂದು ಅಭಿಪ್ರಾಯಪಟ್ಟರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

2 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

2 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

2 hours ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

2 hours ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

2 hours ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

2 hours ago