ಬೆಳಗಾವಿ: ಇಂದು ಚುನಾವಣೆ ನಡೆದರೆ ಕಾಂಗ್ರೆಸ್ಗೆ ಕೇವಲ 20 ಸೀಟು ಬರುತ್ತದೆ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಬಂದು ಎರಡು ವರ್ಷವಾಗಿದೆ. ಭಂಡತನದಿಂದ ಐದು ಗ್ಯಾರಂಟಿ ಕೊಡುತ್ತೇವೆ ಎಂದಿದ್ದರು. ಆದರೆ ಈಗ ಗ್ಯಾರಂಟಿ ಹಣವನ್ನೂ ಕೊಡುತ್ತಿಲ್ಲ. ಗೃಹಲಕ್ಷ್ಮೀ ಹಣ ಮೂರು ತಿಂಗಳಿನಿಂದ ಖಾತೆಗೆ ಜಮೆ ಆಗಿಲ್ಲ ಎಂದು ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ದಿನನಿತ್ಯ ಕೊಲೆ ಸುಲಿಗೆ ಆಗುತ್ತಿವೆ. ಬೇರೆ ರಾಜ್ಯದವರು ಬಂದು ಕಳ್ಳತನ ಮಾಡ್ತಿದ್ದಾರೆ. ಜನರಿಗೆ, ಹೆಣ್ಣು ಮಕ್ಕಳಿಗೆ ರಕ್ಷಣೆಯಿಲ್ಲ. ಪುಂಡರ ಹಾವಳಿ ಜಾಸ್ತಿ ಆಗಿದೆ. ಸರ್ಕಾರದ ಹಿಡಿತ ತಪ್ಪಿ ಹೋಗಿದ್ದು, ಸಿದ್ದರಾಮಯ್ಯ ಎಲ್ಲದರಲ್ಲೂ ವಿಫಲರಾಗಿದ್ದಾರೆ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕರ್ನಾಟಕದಲ್ಲಿ ದಲಿತ ಸಿಎಂ ಮಾಡಲು ಅವಕಾಶ ಇದೆ. ಖರ್ಗೆ ಅವರು ಯಾರನ್ನಾದರೂ ಮಾಡಲಿ. ದಲಿತ ಸಿಎಂ ಮಾಡುತ್ತೇವೆ ಎಂದು ಘೋಷಣೆ ಮಾಡಲಿ. ಪರಮೇಶ್ವರ್, ಮುನಿಯಪ್ಪ ಅವರನ್ನು ಮಾಡಬೇಕು. ಇಲ್ಲವಾದರೆ ಖರ್ಗೆ ಅವರೇ ದಲಿತ ಸಿಎಂ ಆಗಲಿ ಎಂದು ಅಭಿಪ್ರಾಯಪಟ್ಟರು.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…