ಬೆಂಗಳೂರು: ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮೀ ಹಣ ವಿಳಂಬವಾಗಿರುವುದಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರಣ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಗೆ ಮಂಡ್ಯದಲ್ಲಿ ಡಿಪಿಟಿಗೆ ಫುಷ್ ಮಾಡಿ ಮೂರು ದಿನಗಳಾಗಿವೆ. ಇನ್ನೂ ನಾಲ್ಕೈದು ಜಿಲ್ಲೆಗಳಿಗೆ ಯೋಜನೆಯ ಹಣ ದೊರಕಬೇಕಿದೆ. ಬ್ಯಾಂಕ್ಗಳಿಗೆ ಹಣ ಕಳುಹಿಸಿರುತ್ತೇವೆ. ದೊಡ್ಡ ಮೊತ್ತದ ಹಣ ಆಗಿರುವ ಹಿನ್ನೆಲೆಯಲ್ಲಿ ಸ್ವಲ್ಪ ವಿಳಂಬ ಆಗುತ್ತಿರುತ್ತದೆ ಎಂದು ಸ್ಪಷ್ಟಪಡಿಸಿದರು.
ಜೂನ್ ತಿಂಗಳ ಹಣ ಈಗಾಗಲೇ ವರ್ಗಾವಣೆಯಾಗಿದೆ. ಜುಲೈ ತಿಂಗಳ ಹಣ ಇನ್ನೆರಡು ದಿನಗಳಲ್ಲಿ ವರ್ಗಾವಣೆಯಾಗಲಿದೆ ಎಂದು ಸ್ಪಷ್ಟನೆ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಆಗಸ್ಟ್ ತಿಂಗಳ ಹಣ ಕೂಡ ಖಾತೆಗೆ ವರ್ಗಾವಣೆ ಮಾಡುತ್ತೇವೆ. ವಿಳಂಬ ಮಾಡಬಾರದು ಎಂಬುದೇ ನಮ್ಮ ಉದ್ದೇಶ. ಆದರೂ ತಾಂತ್ರಿಕ ದೋಷದಿಂದ ಖಾತೆಗೆ ವರ್ಗಾವಣೆಯಾಗಲು ಸ್ವಲ್ಪ ವಿಳಂಬವಾಗುತ್ತಿದೆ ಎಂದರು.
ಹಣ ವರ್ಗಾವಣೆ ವಿಳಂಬವಾಗದಿರಲು ನಮ್ಮ ತಂಡ ಹಗಲು ರಾತ್ರಿ ಎನ್ನದೇ ಕೆಲಸ ಮಾಡುತ್ತಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಎಲ್ಲಾ ಯಜಮಾನಿಯರಿಗೂ ಗೃಹಲಕ್ಷ್ಮೀ ಹಣ ಬಂದೇ ಬರುತ್ತದೆ. ವದಂತಿಗಳಿಗೆ ಯಾರೂ ಕೂಡ ಕಿವಿಗೊಡಬೇಡಿ ಎಂದು ಮನವಿ ಮಾಡಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…