ರಾಜ್ಯ

ಜೂನ್-ಜುಲೈ ತಿಂಗಳ ಗೃಹಲಕ್ಷ್ಮೀ ಹಣ ಯಾವಾಗ ಜಮಾ ಆಗುತ್ತೆ ಗೊತ್ತಾ.?

ಬಳ್ಳಾರಿ: ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ಯೋಜನೆಗಳ ಮೇಲೆ ಆಸಕ್ತಿ ವಹಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಈ ಆರೋಪಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸ್ಪಷ್ಟನೆ ನೀಡಿದ್ದಾರೆ.

ಕಳೆದ ಎರಡು ಮೂರು ತಿಂಗಳ ಗೃಹಲಕ್ಷ್ಮೀ ಹಣ ಫಲಾನುಭವಿಗಳಿಗೆ ತಲುಪಿಲ್ಲ ಎಂಬುದಾಗಿ ಪ್ರಶ್ನಿಸಿದ್ದಕ್ಕೆ ಗರಂ ಆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು, ಅದೆಲ್ಲಾ ಸುಳ್ಳು ಆರೋಪ. ಮೇ ತಿಂಗಳ ಕಂತಿನ ಹಣವನ್ನು ಮೇ.೫ರಂದೇ ಜಮಾ ಮಾಡಿದ್ದೇವೆ. ಆದರೆ ಜೂನ್‌ ಹಾಗೂ ಜುಲೈ ತಿಂಗಳ ಕಂತುಗಳು ಇನ್ನೂ ಜಮಾ ಆಗಿಲ್ಲ. ಇನ್ನೆರಡು ಮೂರು ದಿನಗಳಲ್ಲಿ ಅವೂ ಕೂಡ ಮಹಿಳೆಯರ ಖಾತೆಗೆ ಜಮಾ ಆಗಲಿವೆ ಎಂದರು.

ಪರಿಶಿಷ್ಟ ಜಾತಿ ಮತ್ತು ಪಂಗಡದ ಮಹಿಳೆಯರಿಗೆ ಈಗಾಗಲೇ ಗೃಹಲಕ್ಷ್ಮೀ ಹಣ ಬಂದಿದೆ. ಉಳಿದವರಿಗೂ ಇನ್ನೆರಡು ದಿನಗಳಲ್ಲಿ ಬಾಕಿ ಹಣವನ್ನು ಡಿಟಿಬಿ ಮಾಡುತ್ತೇವೆ. ಮೊದಲು ಜೂನ್‌ ತಿಂಗಳ ಬಾಕಿ ತಲುಪಿಸುತ್ತೇವೆ. ಜುಲೈ.೧೫ನೇ ತಾರೀಖಿನ ನಂತರ ಜುಲೈ ತಿಂಗಳ ಕಂತನ್ನು ಹಾಕುತ್ತೇವೆ ಎಂದು ಮಾಹಿತಿ ನೀಡಿದರು.

ಇನ್ನೂ ಎಸ್‌ಸಿ, ಎಸ್‌ಟಿ ಹಣವನ್ನು ಕೂಡ ಗ್ಯಾರಂಟಿಗೆ ಬಳಕೆ ಮಾಡಿಕೊಂಡಿದ್ದೇವೆ. ಅದರಲ್ಲೂ ಎಸ್‌ಸಿ, ಎಸ್‌ಟಿ ಜನಾಂಗಕ್ಕೆ ಮೊದಲ ಆದ್ಯತೆ ನೀಡಿದ್ದೇವೆ. ಹಿಂದುಳಿದ ವರ್ಗಗಳಿಗೆ ಮೊದಲ ಆದ್ಯತೆ ಕೊಟ್ಟಿದ್ದೇ ಕಾಂಗ್ರೆಸ್‌ ಸರ್ಕಾರ ಎಂದು ಬಿಜೆಪಿಗರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಟಾಂಗ್‌ ಕೊಟ್ಟರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

6 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

8 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

8 hours ago