ಬಳ್ಳಾರಿ: ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಮೇಲೆ ಆಸಕ್ತಿ ವಹಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಈ ಆರೋಪಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.
ಕಳೆದ ಎರಡು ಮೂರು ತಿಂಗಳ ಗೃಹಲಕ್ಷ್ಮೀ ಹಣ ಫಲಾನುಭವಿಗಳಿಗೆ ತಲುಪಿಲ್ಲ ಎಂಬುದಾಗಿ ಪ್ರಶ್ನಿಸಿದ್ದಕ್ಕೆ ಗರಂ ಆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಅದೆಲ್ಲಾ ಸುಳ್ಳು ಆರೋಪ. ಮೇ ತಿಂಗಳ ಕಂತಿನ ಹಣವನ್ನು ಮೇ.೫ರಂದೇ ಜಮಾ ಮಾಡಿದ್ದೇವೆ. ಆದರೆ ಜೂನ್ ಹಾಗೂ ಜುಲೈ ತಿಂಗಳ ಕಂತುಗಳು ಇನ್ನೂ ಜಮಾ ಆಗಿಲ್ಲ. ಇನ್ನೆರಡು ಮೂರು ದಿನಗಳಲ್ಲಿ ಅವೂ ಕೂಡ ಮಹಿಳೆಯರ ಖಾತೆಗೆ ಜಮಾ ಆಗಲಿವೆ ಎಂದರು.
ಪರಿಶಿಷ್ಟ ಜಾತಿ ಮತ್ತು ಪಂಗಡದ ಮಹಿಳೆಯರಿಗೆ ಈಗಾಗಲೇ ಗೃಹಲಕ್ಷ್ಮೀ ಹಣ ಬಂದಿದೆ. ಉಳಿದವರಿಗೂ ಇನ್ನೆರಡು ದಿನಗಳಲ್ಲಿ ಬಾಕಿ ಹಣವನ್ನು ಡಿಟಿಬಿ ಮಾಡುತ್ತೇವೆ. ಮೊದಲು ಜೂನ್ ತಿಂಗಳ ಬಾಕಿ ತಲುಪಿಸುತ್ತೇವೆ. ಜುಲೈ.೧೫ನೇ ತಾರೀಖಿನ ನಂತರ ಜುಲೈ ತಿಂಗಳ ಕಂತನ್ನು ಹಾಕುತ್ತೇವೆ ಎಂದು ಮಾಹಿತಿ ನೀಡಿದರು.
ಇನ್ನೂ ಎಸ್ಸಿ, ಎಸ್ಟಿ ಹಣವನ್ನು ಕೂಡ ಗ್ಯಾರಂಟಿಗೆ ಬಳಕೆ ಮಾಡಿಕೊಂಡಿದ್ದೇವೆ. ಅದರಲ್ಲೂ ಎಸ್ಸಿ, ಎಸ್ಟಿ ಜನಾಂಗಕ್ಕೆ ಮೊದಲ ಆದ್ಯತೆ ನೀಡಿದ್ದೇವೆ. ಹಿಂದುಳಿದ ವರ್ಗಗಳಿಗೆ ಮೊದಲ ಆದ್ಯತೆ ಕೊಟ್ಟಿದ್ದೇ ಕಾಂಗ್ರೆಸ್ ಸರ್ಕಾರ ಎಂದು ಬಿಜೆಪಿಗರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್ ಕೊಟ್ಟರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…