ಬೆಳಗಾವಿ: ಇನ್ನೂ ಕೇವಲ ಎಂಟು ದಿನಗಳಲ್ಲಿ ಗೃಹಲಕ್ಷ್ಮೀ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಏನಾದರೂ ಅಪಪ್ರಚಾರ ಮಾಡಲಿ. ನಾವು ಈಗಾಗಲೇ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದೇವೆ. ತಾಲ್ಲೂಕು ಪಂಚಾಯಿತಿ ಮುಖಾಂತರ ಬಿಡುಗಡೆ ಮಾಡಬೇಕು ಎಂದು ಹೇಳಿರುವುದರಿಂದ ಸ್ವಲ್ಪ ತಡವಾಗಿದೆ ಎಂದರು.
ಇನ್ನು ಯಾವುದೇ ಕಾರಣಕ್ಕೂ ಗೃಹಲಕ್ಷ್ಮೀ ಹಣ ನಿಲ್ಲೋದಿಲ್ಲ. ಇನ್ನು 8-10 ದಿನಗಳಲ್ಲಿ ಹಣ ಖಾತೆಗೆ ಜಮೆ ಆಗುತ್ತದೆ. 2 ದಿನ ಕಳೆದಿದೆ. ಇನ್ನು 8 ದಿನಗಳಲ್ಲಿ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡೇ ಮಾಡುತ್ತೇವೆ. ಯಾರೂ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಭರವಸೆ ನೀಡಿದರು.
ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆ ಕುರಿತು ಮಾತನಾಡಿದ ಅವರು, ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಘಟನೆ ನಡೆದ ಐದೇ ನಿಮಿಷಕ್ಕೆ ಕಮೀಷನರ್ ಜೊತೆ ನಾನು ಮಾತನಾಡಿದ್ದೆ. ಯಾರು ತಪ್ಪಿತಸ್ಥರು ಅವರ ಮೇಲೆ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಹೇಳಿದ್ದೇನೆ. ನಾಲ್ಕೈದು ಪುಂಡರು ಬಂದು ಭಾಷಾ ವಿವಾದ ಎಳೆದು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಇದನ್ನು ಖಂಡಿಸುತ್ತೇವೆ ಎಂದು ಕಿಡಿಕಾರಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…