ಬೆಂಗಳೂರು : ಆದಾಯ ತೆರಿಗೆ ಪಾವತಿಸುವವರು ಹಾಗೂ ಜಿಎಸ್ಟಿ ವ್ಯಾಪ್ತಿಗೆ ಒಳಪಡುವವರು ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ವ್ಯಾಪ್ತಿಗೆ ಅರ್ಹತೆ ಪಡೆಯುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.
ರಾಜ್ಯಪಾಲರ ವಂದನ ನಿರ್ಣಯದ ಮೇಲೆ ಬಿಜೆಪಿ ಸದಸ್ಯ ಟಿ.ಹೆಚ್.ಪೂಜಾರ್ ಅವರು ಮಾತನಾಡುತ್ತಿದ್ದ ವೇಳೆ ಬಾಗಲಕೋಟೆ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆ ಅಡಿ ಕೆಲವು ಫಲಾನುಭವಿಗಳಿಗೆ ಹಣವು ಬಂದಿಲ್ಲ .ಅಲ್ಲದೆ ಅವರನ್ನು ಈ ಯೋಜನೆ ವ್ಯಾಪ್ತಿಯಿಂದ ಕೈ ಬಿಟ್ಟಿದ್ದಾರೆ ಎಂದು ಆರೋಪಿಸಿದರು.
ಈ ವೇಳೆ ಮಧ್ಯ ಪ್ರವೇಶಿಸಿ ಮಾತನಾಡಿದ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಯೋಜನೆ ಅಡಿ ರಾಜ್ಯದಲ್ಲಿ ಒಟ್ಟು 1ಕೋಟಿ 26 ಲಕ್ಷ ಮಹಿಳಾ ಫಲಾನುಭವಿಗಳಿಗೆ ಪ್ರತಿ ತಿಂಗಳು ಅವರ ಖಾತೆಗೆ ನೇರವಾಗಿ ಎರಡು ಸಾವಿರ ರೂಪಾಯಿ ಆರ್ಥಿಕ ನೆರವು ನೀಡುತ್ತಿದ್ದೇವೆ. ಕೆಲವು ಕಾರಣಗಳಿಂದ 52,000 ಮಹಿಳಾ ಫಲಾನುಭವಿಗಳನ್ನು ಯೋಜನೆಯಿಂದ ತೆಗೆದುಹಾಕಲಾಗಿದೆ. ಆದಾಯ ತೆರಿಗೆ ಹಾಗೂ ಜಿಎಸ್ಟಿ ವ್ಯಾಪ್ತಿಗೆ ಬರುವವರು ಈ ಯೋಜನೆ ವ್ಯಾಪ್ತಿಗೆ ಬರುವುದಿಲ್ಲ ಎಂದು ತಿಳಿಸಿದರು.
ಈ ಯೋಜನಾ ಉದ್ದೇಶವೇ ಬಡ ಮಹಿಳೆಯರ ಆರ್ಥಿಕ ಸಬಲೀಕರಣವಾಗಿದೆ. ಎಪಿಎಲ್, ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿ ಹೊಂದಿದ್ದರೆ ಅಂತವರು ಮಾತ್ರ ಫಲಾನುಭವಿಗಳು ಆರ್ಹತೆ ಪಡೆಯುತ್ತಾರೆ. ಜಿಎಸ್ಟಿ ಮತು ಆದಾಯ ತೆರಿಗೆ ಪಾವತಿದಾರರು ಯೋಜನೆ ವ್ಯಾಪ್ತಿಗೆ ಬರುವುದಿಲ್ಲ. ಅಂತವರನ್ನು ಲಾಗಿನ್ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
ಸಂಬಂಧ ಈ ನಾವು ಹಲವಾರು ಬಾರಿ ಐಟಿ ಅಧಿಕಾರಿಗಳು ಮತ್ತು ಜಿಎಸ್ಟಿ ಕೌನ್ಸಿಲಿಂಗ್ ಸಭೆಯಲ್ಲಿ ಪ್ರಸ್ತಾಪಿಸಿ ವಿಷಯವನ್ನು ಗಮನಕ್ಕೆ ತಂದಿದ್ದೇವೆ. ಆದರೆ ನಿಯಮಗಳ ಪ್ರಕಾರ ಆದಾಯ ತೆರಿಗೆ ಪಾವತಿ ಮಾಡುವವರು ಬಡತನ ರೇಖೆ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಆದರೂ ಪತ್ರ ವ್ಯವಹಾರ ಮುಂದುವರಿದಿದೆ ಎಂದು ಹೇಳಿದರು.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…