ರಾಜ್ಯ

ಜಿಎಸ್‌ಟಿ, ಐಟಿ ಪಾವತಿದಾರರು ‘ಗ್ರಹಲಕ್ಷ್ಮಿʼಗೆ ಅರ್ಹರಲ್ಲ : ಸಚಿವೆ ಲಕ್ಷ್ಮಿ

ಬೆಂಗಳೂರು : ಆದಾಯ ತೆರಿಗೆ ಪಾವತಿಸುವವರು ಹಾಗೂ ಜಿಎಸ್‌ಟಿ ವ್ಯಾಪ್ತಿಗೆ ಒಳಪಡುವವರು ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ವ್ಯಾಪ್ತಿಗೆ ಅರ್ಹತೆ ಪಡೆಯುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.

ರಾಜ್ಯಪಾಲರ ವಂದನ ನಿರ್ಣಯದ ಮೇಲೆ ಬಿಜೆಪಿ ಸದಸ್ಯ ಟಿ.ಹೆಚ್.ಪೂಜಾರ್ ಅವರು ಮಾತನಾಡುತ್ತಿದ್ದ ವೇಳೆ ಬಾಗಲಕೋಟೆ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆ ಅಡಿ ಕೆಲವು ಫಲಾನುಭವಿಗಳಿಗೆ ಹಣವು ಬಂದಿಲ್ಲ .ಅಲ್ಲದೆ ಅವರನ್ನು ಈ ಯೋಜನೆ ವ್ಯಾಪ್ತಿಯಿಂದ ಕೈ ಬಿಟ್ಟಿದ್ದಾರೆ ಎಂದು ಆರೋಪಿಸಿದರು.

ಈ ವೇಳೆ ಮಧ್ಯ ಪ್ರವೇಶಿಸಿ ಮಾತನಾಡಿದ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಯೋಜನೆ ಅಡಿ ರಾಜ್ಯದಲ್ಲಿ ಒಟ್ಟು 1ಕೋಟಿ 26 ಲಕ್ಷ ಮಹಿಳಾ ಫಲಾನುಭವಿಗಳಿಗೆ ಪ್ರತಿ ತಿಂಗಳು ಅವರ ಖಾತೆಗೆ ನೇರವಾಗಿ ಎರಡು ಸಾವಿರ ರೂಪಾಯಿ ಆರ್ಥಿಕ ನೆರವು ನೀಡುತ್ತಿದ್ದೇವೆ. ಕೆಲವು ಕಾರಣಗಳಿಂದ 52,000 ಮಹಿಳಾ ಫಲಾನುಭವಿಗಳನ್ನು ಯೋಜನೆಯಿಂದ ತೆಗೆದುಹಾಕಲಾಗಿದೆ. ಆದಾಯ ತೆರಿಗೆ ಹಾಗೂ ಜಿಎಸ್‌ಟಿ ವ್ಯಾಪ್ತಿಗೆ ಬರುವವರು ಈ ಯೋಜನೆ ವ್ಯಾಪ್ತಿಗೆ ಬರುವುದಿಲ್ಲ ಎಂದು ತಿಳಿಸಿದರು.

ಈ ಯೋಜನಾ ಉದ್ದೇಶವೇ ಬಡ ಮಹಿಳೆಯರ ಆರ್ಥಿಕ ಸಬಲೀಕರಣವಾಗಿದೆ. ಎಪಿಎಲ್, ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿ ಹೊಂದಿದ್ದರೆ ಅಂತವರು ಮಾತ್ರ ಫಲಾನುಭವಿಗಳು ಆರ್ಹತೆ ಪಡೆಯುತ್ತಾರೆ. ಜಿಎಸ್‌ಟಿ ಮತು ಆದಾಯ ತೆರಿಗೆ ಪಾವತಿದಾರರು ಯೋಜನೆ ವ್ಯಾಪ್ತಿಗೆ ಬರುವುದಿಲ್ಲ. ಅಂತವರನ್ನು ಲಾಗಿನ್ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ಸಂಬಂಧ ಈ ನಾವು ಹಲವಾರು ಬಾರಿ ಐಟಿ ಅಧಿಕಾರಿಗಳು ಮತ್ತು ಜಿಎಸ್‌ಟಿ ಕೌನ್ಸಿಲಿಂಗ್ ಸಭೆಯಲ್ಲಿ ಪ್ರಸ್ತಾಪಿಸಿ ವಿಷಯವನ್ನು ಗಮನಕ್ಕೆ ತಂದಿದ್ದೇವೆ. ಆದರೆ ನಿಯಮಗಳ ಪ್ರಕಾರ ಆದಾಯ ತೆರಿಗೆ ಪಾವತಿ ಮಾಡುವವರು ಬಡತನ ರೇಖೆ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಆದರೂ ಪತ್ರ ವ್ಯವಹಾರ ಮುಂದುವರಿದಿದೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

3 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

3 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

3 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

3 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

3 hours ago