ರಾಜ್ಯ

ಜಿಎಸ್‌ಟಿ ಪರಿಷ್ಕರಣೆ | ದೇಶೀಯ ಉದ್ಯಮದಲ್ಲಿ ಭಾರಿ ಬದಲಾವಣೆ

ಬೆಂಗಳೂರು : ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಸರಕು ಸೇವಾ ತೆರಿಗೆ (ಜಿಎಸ್‌ಟಿ) ಪರಿಷ್ಕರಣೆಯಿಂದ ದೇಶಿಯ ಉದ್ಯಮ ವಲಯದಲ್ಲಿ ಭಾರಿ ಬದಲಾವಣೆಯಾಗಲಿದ್ದು. ದೇಶದ ಆರ್ಥಿಕ ಬೆಳವಣಿಗೆಗೆ ಹೊಸ ಭಾಷ್ಯ ಬರೆಯಲಿದೆ ಎಂದು ನಿರೀಕ್ಷಿಸಲಾಗಿದೆ.

ಸೆಪ್ಟೆಂಬರ್ ೨೨ ರಿಂದ ದೇಶಾದ್ಯಂತ ಜಿಎಸ್‌ಟಿ ಪರಿಷ್ಕರಣೆಯಾಗಿದ್ದು ತೆರಿಗೆ ವ್ಯವಸ್ಥೆಯಲ್ಲಿ ಹಲವಾರು ಬದಲಾವಣೆಯನ್ನು ತಂದಿರುವುದು ಹೊಸ ಆರ್ಥಿಕ ಚೇತರಿಕೆಗೆ ಮುನ್ನುಡಿ ಬರೆಯಲಿದೆ ಎಂದು ವಿಶ್ಲೇಷಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಕೂಸಾದ ಸಬ್‌ಕಾ ಸಾಥ್, ಸಬ್‌ಕಾ ವಿಕಾಸ್, ಸಬ್‌ಕಾ ವಿಶ್ವಾಸ್ ಮತ್ತು ಸಬ್‌ಕಾ ಪ್ರಯಾಸ್‘ ಎಂಬ ಬದ್ಧತೆಯನ್ನು ಪೂರೈಸುವ ಪ್ರಮುಖ ಹೆಜ್ಜೆಯಾಗಿದೆ ಎಂಬ ವಿಶ್ಲೇಷಣೆಗಳು ಆರಂಭವಾಗಿವೆ.

ಹೊಸ ಜಿಎಸ್‌ಟಿ ಸುಧಾರಣೆಯು ತೆರಿಗೆ ವ್ಯವಸ್ಥೆಯನ್ನು ಸರಳಗೊಳಿಸುವುದಲ್ಲದೆ, ಸಾಂಪ್ರದಾಯಿಕ ಕೈಗಾರಿಕೆಗಳು, ಕರಕುಶಲ ವಸ್ತುಗಳು, ಕೃಷಿ ಮತ್ತು ಸಂಸ್ಕರಿಸಿದ ಆಹಾರ ವಲಯಗಳಿಗೆ ನೇರವಾಗಿ ಪ್ರಯೋಜನವನ್ನು ನೀಡುವ ವಿಶಾಲ ಆರ್ಥಿಕ ಕ್ರಮವಾಗಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಹಿಂದಿನ ಸಂಕೀರ್ಣ ಸ್ಲ್ಯಾಬ್ ರಚನೆಯು ಸಣ್ಣ ವ್ಯಾಪಾರಿಗಳು ಮತ್ತು ಕೈಗಾರಿಕೋದ್ಯಮಿಗಳಿಗೆ ಹೊರೆಯಾಗಿ ಪರಿಣಮಿಸಿತ್ತು. ಕೇಂದ್ರ ಸರ್ಕಾರವು ಅದನ್ನು ವ್ಯಾಪಾರ ಸ್ನೇಹಿ ರೀತಿಯಲ್ಲಿ ಸರಳೀಕರಿಸಿದೆ. ಇದು ಸಾಮಾನ್ಯ ಜನರ ಜೀವನದಲ್ಲಿ ವ್ಯಾಪಾರ ವಹಿವಾಟಗೆ ಅನುಕೂಲತೆಯನ್ನು ತರಲಿದೆ.

ಕರ್ನಾಟಕದ ಸಣ್ಣ ಪ್ರಮಾಣದ ಕೈಗಾರಿಕೆಗಳು ಜಿಎಸ್‌ಟಿ ಕಡಿತದಿಂದ ಪ್ರಯೋಜನ ಪಡೆಯಲಿವೆ. ಮೈಸೂರು ರೇಷ್ಮೆ, ಇಳಕಲ್, ಮೊಳಕಾಲ್ಮೂರು ರೇಷ್ಮೆಗಳು ಶೇ.೫ ಸ್ಲ್ಯಾಬ್‌ನಲ್ಲಿರುತ್ತವೆ. ವಿಶ್ವಪ್ರಸಿದ್ಧ ಚನ್ನಪಟ್ಟಣ ಮತ್ತು ಕಿನ್ನಾಳ ಗೊಂಬೆ ಆಟಿಕೆಗಳು ಶೇ.೧೨ ರಿಂದ ಶೇ.೫ ಸ್ಲ್ಯಾಬ್‌ಗೆ ಇಳಿಕೆಯಾಗಿವೆ.

ಮೈಸೂರು ಪಾಕ್ ಮತ್ತು ಧಾರವಾಡ ಪೇಡಾದಂತಹ ಸಿಹಿತಿಂಡಿಗಳು ಮೊದಲಿಗಿಂತ ಸಿಹಿಯಾಗಿರುತ್ತವೆ. ಇದಲ್ಲದೆ, ಪ್ಲಾಂಟರ್‌ಗಳು ಮತ್ತು ರೈತರ ಮುಖಗಳಲ್ಲಿ ಮಂದಹಾಸ ಮೂಡಿಸಿವೆ. ಏಕೆಂದರೆ, ಏಲಕ್ಕಿ, ಕರಿಮೆಣಸು, ಕಾಫಿ, ಕಿತ್ತಳೆ, ದಾಳಿಂಬೆ, ನಂಜನಗೂಡು ರಸಬಾಳೆ, ಕಮಲಪುರುಷ ಕೆಂಪು ಬಾಳೆಹಣ್ಣು, ಇಂಡಿ ನಿಂಬೆ ಈಗ ಮೊದಲಿಗಿಂತಲೂ ಅಗ್ಗದ ದರದಲ್ಲಿ ಸಿಗಲಿವೆ.

ಆಂದೋಲನ ಡೆಸ್ಕ್

Recent Posts

ಇದು ಯುವಶಕ್ತಿ ಬಜೆಟ್‌: ನಿರ್ಮಲಾ ಸೀತಾರಾಮನ್‌

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. 9ನೇ ಬಾರಿಗೆ ಬಜೆಟ್‌…

7 mins ago

ಬಜೆಟ್‌ ಮಂಡಿಸಲು ಕಾಂಜೀವರಂ ಸೀರೆ ಆಯ್ಕೆ ಮಾಡಿಕೊಂಡ ನಿರ್ಮಲಾ ಸೀತಾರಾಮನ್‌

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು 2026-27ನೇ ಸಾಲಿನ ಬಜೆಟ್‌ ಮಂಡನೆ ಮಾಡಲಿದ್ದು, ಇದು ಅವರ…

45 mins ago

ಕೆಂಪು ಬಹಿ-ಖಾತಾ ಶೈಲಿಯ ಚೀಲದಲ್ಲಿ ಟ್ಯಾಬ್ಲೆಟ್‌ ಹಿಡಿದ ನಿರ್ಮಲಾ ಸೀತಾರಾಮನ್‌

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಸಂಸತ್ತಿನಲ್ಲಿ 2026-27ನೇ ಸಾಲಿನ ಕೇಂದ್ರ ಬಜೆಟ್‌ಅನ್ನು ಮಂಡಿಸಲಿದ್ದಾರೆ. ಸಾಂಪ್ರದಾಯಿಕ…

1 hour ago

75 ವರ್ಷದ ಸಂಪ್ರದಾಯ ಮುರಿಯಲಿರುವ ನಿರ್ಮಲಾ ಸೀತಾರಾಮನ್‌

ನವದೆಹಲಿ: ಕೇಂದ್ರ ಬಜೆಟ್‌ ಮಂಡನೆಗೆ ಕ್ಷಣಗಣನೆ ಶುರುವಾಗಿದ್ದು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು 9ನೇ ಬಜೆಟ್‌ ಮಂಡನೆ…

2 hours ago

ರೀಲ್ ಹುಚ್ಚಿಗೆ ಬಲಿಯಾದ ಒಂದು ಅಮಾಯಕ ಜೀವ

ಸೂರ್ಯ ಪುತ್ರ ಆತನ ಹೆಸರು ದೀಪಕ್. ಮಲ್ಟಿ ನ್ಯಾಷನಲ್ ಕಂಪೆನಿ ಉದ್ಯೋಗಿ. ಕೇರಳದ ಕಣ್ಣೂರಿನ ರೈಲ್ವೇ ಸ್ಟೇಷನ್ ಪಕ್ಕದಿಂದ ಜನ…

5 hours ago

ಕಣಗಾಲ್ ಪುಟ್ಟಣ್ಣನವರ ಕರುಣಾಜನಕ ಮನೆ

ಸಿರಿ ಮೈಸೂರು ಬೆಳ್ಳಿಮೋಡ, ಗೆಜ್ಜೆಪೂಜೆ, ಎಡಕಲ್ಲು ಗುಡ್ಡದ ಮೇಲೆ, ಬಿಳಿ ಹೆಂಡ್ತಿ, ನಾಗರ ಹಾವು, ರಂಗನಾಯಕಿ, ಮಸಣದ ಹೂವು, ಶರಪಂಜರ...…

5 hours ago