ಹುಬ್ಬಳ್ಳಿ: ದಸರಾ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ಅವರು ನೀಡಿರುವ ಹೇಳಿಕೆ ಜೆಡಿಎಸ್ ಪಕ್ಷದ ಆಂತರಿಕ ವಿಚಾರವಾಗಿದೆ, ಅದನ್ನು ಸರಿ ಮಾಡಿಕೊಳ್ಳುವ ಶಕ್ತಿ ಕುಮಾರಸ್ವಾಮಿಗಿದೆ, ಹೀಗಾಗಿ ಅದರ ಬಗ್ಗೆ ನಾನು ಮಾತನಾಡಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಿ.ಡಿ.ದೇವೇಗೌಡ ಅವರು ನೀಡಿರುವ ಹೇಳಿಕೆಯನ್ನು ಸರಿ ಪಡಿಸಿಕೊಳ್ಳುವ ಶಕ್ತಿ ಜೆಡಿಎಸ್ ಪಕ್ಷದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗಿದೆ. ಆ ಕಾರಣಕ್ಕಾಗಿ ನಾನು ಆ ಬಗ್ಗೆ ಟೀಕೆ ಮಾಡಲು ಸಾಧ್ಯವಿಲ್ಲ. ಮೈಸೂರು ಚಲೋ ಪಾದಯಾತ್ರೆ ಮಾಡಬೇಕಾದರೆ ಜಿ.ಟಿ.ದೇವೇಗೌಡರನ್ನು ಕೇಳಿ ಪಾದಯಾತ್ರೆ ಮಾಡಿರಲಿಲ್ಲ. ಮುಡಾ ಹಗರಣದ ಅಕ್ರಮ ವಿರುದ್ಧ ಹೋರಾಟ ಮಾಡುವುದು ವಿರೋಧ ಪಕ್ಷದ ಜವಾಬ್ದಾರಿಯಾಗಿತ್ತು. ಹೀಗಾಗಿ ಭ್ರಷ್ಟ ಮುಖ್ಯಮಂತ್ರಿಯಾಗಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ನಾವೆಲ್ಲರೂ ಹೋರಾಟವನ್ನು ಮಾಡಿದ್ದೇವೆ ಎಂದು ತಿರುಗೇಟು ನೀಡಿದರು.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಅಧಿವೇಶನ ನಡೆಯುವಾಗ ಮುಡಾ ಹಗರಣದಲ್ಲಿ ಕೇವಲ 14 ನಿವೇಶನಗಳು ಮಾತ್ರ ಹಗರಣ ನಡೆದಿಲ್ಲ. ಅದರ ಬದಲಾಗಿ ಮುಡಾದಲ್ಲಿ ಸಾವಿರಾರು ಕೋಟಿ ರೂ.ಗಳಷ್ಟು ಹಗರಣ ನಡೆದಿದೆ ಎಂಬ ವಿಚಾರ ಕುರಿತು ಚರ್ಚೆಯಾಗಿತ್ತು. ಆಗ ಸಿಎಂ ಸಿದ್ದರಾಮಯ್ಯ ಅವರು ಮುಡಾದಲ್ಲಿ ಹಗರಣವೇ ಆಗಿಲ್ಲ. ಈ ಬಗ್ಗೆ ಚರ್ಚೆ ನಡೆಸುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದರು. ಅಲ್ಲದೇ ಇದರಲ್ಲಿ ಮಂತ್ರಿ ಮಂಡಲ ಸಹ ಯಾವುದೇ ತಪ್ಪು ಮಾಡಿಲ್ಲ ಎಂದಿದ್ದರು. ಆದರೆ, ಇದೀಗ ಆರ್ಟಿಇ ಕಾರ್ಯಕರ್ತನ ದೂರಿನ ಆಧಾರದ ಮೇಲೆ ಸಿದ್ದರಾಮಯ್ಯ ಅವರ ವಿರುದ್ಧ ಎಫ್ಐಆರ್ ದಾಖಲಾಗಿರುವುದಲ್ಲದೇ, ತನಿಖೆ ನಡೆಸುವಂತೆ ಕೋರ್ಟ್ನಿಂದ ಆದೇಶ ಮಾಡುವಂತೆ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದರು.
ಇನ್ನು ಸಿದ್ದರಾಮಯ್ಯ ಅವರು ತಾನು ತಪ್ಪೇ ಮಾಡಿಲ್ಲವೆಂದು ವಾದಿಸಿ, ನಿವೇಶನಗಳನ್ನು ವಾಪಾಸ್ಸು ಪಡೆಯಲು ಮುಡಾದಿಂದ ನಮಗೆ 64 ಕೋಟಿ ರೂ.ಗಳಷ್ಟು ಹಣ ನೀಡಿದರೆ ಮಾತ್ರ ನಿವೇಶನಗಳನ್ನು ವಾಪಾಸ್ಸು ಮಾಡುವುದಾಗಿದೆ ಹೇಳಿಕೊಂಡಿದ್ದರು. ಆದರೆ, ಇ.ಡಿ.ತನಿಖೆ ನಡೆಸುವ ಸಂದರ್ಭದಲ್ಲಿ ಯಾವುದೇ ಹಣಕ್ಕೆ ಬೇಡಿಕೆ ಇಡದೇ ನಿವೇಶನಗಳನ್ನು ವಾಪಾಸು ಕೊಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಹುಶಃ 14 ನಿವೇಶನಗಳು ತಮ್ಮಗೆ ಕುತ್ತು ತರುತ್ತವೆ ಎಂದು ಜ್ಞಾನೋದಯವಾಗಿ ಆ ನಿವೇಶನಗಳನ್ನು ವಾಪಾಸ್ ಕೊಟ್ಟಿರಬೇಕು ಎಂದು ವಾಗ್ದಾಳಿ ನಡೆಸಿದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…