ರಾಜ್ಯ

ಜಿ.ಟಿ.ದೇವೇಗೌಡ ಅವರ ಹೇಳಿಕೆ ಜೆಡಿಎಸ್‌ ಪಕ್ಷದ ಆಂತರಿಕ ವಿಚಾರ: ಬಿ.ವೈ.ವಿಜಯೇಂದ್ರ

ಹುಬ್ಬಳ್ಳಿ: ದಸರಾ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ಅವರು ನೀಡಿರುವ ಹೇಳಿಕೆ ಜೆಡಿಎಸ್‌ ಪಕ್ಷದ ಆಂತರಿಕ ವಿಚಾರವಾಗಿದೆ, ಅದನ್ನು ಸರಿ ಮಾಡಿಕೊಳ್ಳುವ ಶಕ್ತಿ ಕುಮಾರಸ್ವಾಮಿಗಿದೆ, ಹೀಗಾಗಿ ಅದರ ಬಗ್ಗೆ ನಾನು ಮಾತನಾಡಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಿ.ಡಿ.ದೇವೇಗೌಡ ಅವರು ನೀಡಿರುವ ಹೇಳಿಕೆಯನ್ನು ಸರಿ ಪಡಿಸಿಕೊಳ್ಳುವ ಶಕ್ತಿ ಜೆಡಿಎಸ್‌ ಪಕ್ಷದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗಿದೆ. ಆ ಕಾರಣಕ್ಕಾಗಿ ನಾನು ಆ ಬಗ್ಗೆ ಟೀಕೆ ಮಾಡಲು ಸಾಧ್ಯವಿಲ್ಲ. ಮೈಸೂರು ಚಲೋ ಪಾದಯಾತ್ರೆ ಮಾಡಬೇಕಾದರೆ ಜಿ.ಟಿ.ದೇವೇಗೌಡರನ್ನು ಕೇಳಿ ಪಾದಯಾತ್ರೆ ಮಾಡಿರಲಿಲ್ಲ. ಮುಡಾ ಹಗರಣದ ಅಕ್ರಮ ವಿರುದ್ಧ ಹೋರಾಟ ಮಾಡುವುದು ವಿರೋಧ ಪಕ್ಷದ ಜವಾಬ್ದಾರಿಯಾಗಿತ್ತು. ಹೀಗಾಗಿ ಭ್ರಷ್ಟ ಮುಖ್ಯಮಂತ್ರಿಯಾಗಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ನಾವೆಲ್ಲರೂ ಹೋರಾಟವನ್ನು ಮಾಡಿದ್ದೇವೆ ಎಂದು ತಿರುಗೇಟು ನೀಡಿದರು.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಅಧಿವೇಶನ ನಡೆಯುವಾಗ ಮುಡಾ ಹಗರಣದಲ್ಲಿ ಕೇವಲ 14 ನಿವೇಶನಗಳು ಮಾತ್ರ ಹಗರಣ ನಡೆದಿಲ್ಲ. ಅದರ ಬದಲಾಗಿ ಮುಡಾದಲ್ಲಿ ಸಾವಿರಾರು ಕೋಟಿ ರೂ.ಗಳಷ್ಟು ಹಗರಣ ನಡೆದಿದೆ ಎಂಬ ವಿಚಾರ ಕುರಿತು ಚರ್ಚೆಯಾಗಿತ್ತು. ಆಗ ಸಿಎಂ ಸಿದ್ದರಾಮಯ್ಯ ಅವರು ಮುಡಾದಲ್ಲಿ ಹಗರಣವೇ ಆಗಿಲ್ಲ. ಈ ಬಗ್ಗೆ ಚರ್ಚೆ ನಡೆಸುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದರು. ಅಲ್ಲದೇ ಇದರಲ್ಲಿ ಮಂತ್ರಿ ಮಂಡಲ ಸಹ ಯಾವುದೇ ತಪ್ಪು ಮಾಡಿಲ್ಲ ಎಂದಿದ್ದರು. ಆದರೆ, ಇದೀಗ ಆರ್‌ಟಿಇ ಕಾರ್ಯಕರ್ತನ ದೂರಿನ ಆಧಾರದ ಮೇಲೆ ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿರುವುದಲ್ಲದೇ, ತನಿಖೆ ನಡೆಸುವಂತೆ ಕೋರ್ಟ್‌ನಿಂದ ಆದೇಶ ಮಾಡುವಂತೆ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದರು.

ಇನ್ನು ಸಿದ್ದರಾಮಯ್ಯ ಅವರು ತಾನು ತಪ್ಪೇ ಮಾಡಿಲ್ಲವೆಂದು ವಾದಿಸಿ, ನಿವೇಶನಗಳನ್ನು ವಾಪಾಸ್ಸು ಪಡೆಯಲು ಮುಡಾದಿಂದ ನಮಗೆ 64 ಕೋಟಿ ರೂ.ಗಳಷ್ಟು ಹಣ ನೀಡಿದರೆ ಮಾತ್ರ ನಿವೇಶನಗಳನ್ನು ವಾಪಾಸ್ಸು ಮಾಡುವುದಾಗಿದೆ ಹೇಳಿಕೊಂಡಿದ್ದರು. ಆದರೆ, ಇ.ಡಿ.ತನಿಖೆ ನಡೆಸುವ ಸಂದರ್ಭದಲ್ಲಿ ಯಾವುದೇ ಹಣಕ್ಕೆ ಬೇಡಿಕೆ ಇಡದೇ ನಿವೇಶನಗಳನ್ನು ವಾಪಾಸು ಕೊಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಹುಶಃ 14 ನಿವೇಶನಗಳು ತಮ್ಮಗೆ ಕುತ್ತು ತರುತ್ತವೆ ಎಂದು ಜ್ಞಾನೋದಯವಾಗಿ ಆ ನಿವೇಶನಗಳನ್ನು ವಾಪಾಸ್‌ ಕೊಟ್ಟಿರಬೇಕು ಎಂದು ವಾಗ್ದಾಳಿ ನಡೆಸಿದರು.

 

ಅರ್ಚನ ಎಸ್‌ ಎಸ್

Recent Posts

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

1 hour ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

2 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

5 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

5 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

5 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

5 hours ago