ಹುಬ್ಬಳ್ಳಿ: ದಸರಾ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ಅವರು ನೀಡಿರುವ ಹೇಳಿಕೆ ಜೆಡಿಎಸ್ ಪಕ್ಷದ ಆಂತರಿಕ ವಿಚಾರವಾಗಿದೆ, ಅದನ್ನು ಸರಿ ಮಾಡಿಕೊಳ್ಳುವ ಶಕ್ತಿ ಕುಮಾರಸ್ವಾಮಿಗಿದೆ, ಹೀಗಾಗಿ ಅದರ ಬಗ್ಗೆ ನಾನು ಮಾತನಾಡಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಿ.ಡಿ.ದೇವೇಗೌಡ ಅವರು ನೀಡಿರುವ ಹೇಳಿಕೆಯನ್ನು ಸರಿ ಪಡಿಸಿಕೊಳ್ಳುವ ಶಕ್ತಿ ಜೆಡಿಎಸ್ ಪಕ್ಷದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗಿದೆ. ಆ ಕಾರಣಕ್ಕಾಗಿ ನಾನು ಆ ಬಗ್ಗೆ ಟೀಕೆ ಮಾಡಲು ಸಾಧ್ಯವಿಲ್ಲ. ಮೈಸೂರು ಚಲೋ ಪಾದಯಾತ್ರೆ ಮಾಡಬೇಕಾದರೆ ಜಿ.ಟಿ.ದೇವೇಗೌಡರನ್ನು ಕೇಳಿ ಪಾದಯಾತ್ರೆ ಮಾಡಿರಲಿಲ್ಲ. ಮುಡಾ ಹಗರಣದ ಅಕ್ರಮ ವಿರುದ್ಧ ಹೋರಾಟ ಮಾಡುವುದು ವಿರೋಧ ಪಕ್ಷದ ಜವಾಬ್ದಾರಿಯಾಗಿತ್ತು. ಹೀಗಾಗಿ ಭ್ರಷ್ಟ ಮುಖ್ಯಮಂತ್ರಿಯಾಗಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ನಾವೆಲ್ಲರೂ ಹೋರಾಟವನ್ನು ಮಾಡಿದ್ದೇವೆ ಎಂದು ತಿರುಗೇಟು ನೀಡಿದರು.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಅಧಿವೇಶನ ನಡೆಯುವಾಗ ಮುಡಾ ಹಗರಣದಲ್ಲಿ ಕೇವಲ 14 ನಿವೇಶನಗಳು ಮಾತ್ರ ಹಗರಣ ನಡೆದಿಲ್ಲ. ಅದರ ಬದಲಾಗಿ ಮುಡಾದಲ್ಲಿ ಸಾವಿರಾರು ಕೋಟಿ ರೂ.ಗಳಷ್ಟು ಹಗರಣ ನಡೆದಿದೆ ಎಂಬ ವಿಚಾರ ಕುರಿತು ಚರ್ಚೆಯಾಗಿತ್ತು. ಆಗ ಸಿಎಂ ಸಿದ್ದರಾಮಯ್ಯ ಅವರು ಮುಡಾದಲ್ಲಿ ಹಗರಣವೇ ಆಗಿಲ್ಲ. ಈ ಬಗ್ಗೆ ಚರ್ಚೆ ನಡೆಸುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದರು. ಅಲ್ಲದೇ ಇದರಲ್ಲಿ ಮಂತ್ರಿ ಮಂಡಲ ಸಹ ಯಾವುದೇ ತಪ್ಪು ಮಾಡಿಲ್ಲ ಎಂದಿದ್ದರು. ಆದರೆ, ಇದೀಗ ಆರ್ಟಿಇ ಕಾರ್ಯಕರ್ತನ ದೂರಿನ ಆಧಾರದ ಮೇಲೆ ಸಿದ್ದರಾಮಯ್ಯ ಅವರ ವಿರುದ್ಧ ಎಫ್ಐಆರ್ ದಾಖಲಾಗಿರುವುದಲ್ಲದೇ, ತನಿಖೆ ನಡೆಸುವಂತೆ ಕೋರ್ಟ್ನಿಂದ ಆದೇಶ ಮಾಡುವಂತೆ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದರು.
ಇನ್ನು ಸಿದ್ದರಾಮಯ್ಯ ಅವರು ತಾನು ತಪ್ಪೇ ಮಾಡಿಲ್ಲವೆಂದು ವಾದಿಸಿ, ನಿವೇಶನಗಳನ್ನು ವಾಪಾಸ್ಸು ಪಡೆಯಲು ಮುಡಾದಿಂದ ನಮಗೆ 64 ಕೋಟಿ ರೂ.ಗಳಷ್ಟು ಹಣ ನೀಡಿದರೆ ಮಾತ್ರ ನಿವೇಶನಗಳನ್ನು ವಾಪಾಸ್ಸು ಮಾಡುವುದಾಗಿದೆ ಹೇಳಿಕೊಂಡಿದ್ದರು. ಆದರೆ, ಇ.ಡಿ.ತನಿಖೆ ನಡೆಸುವ ಸಂದರ್ಭದಲ್ಲಿ ಯಾವುದೇ ಹಣಕ್ಕೆ ಬೇಡಿಕೆ ಇಡದೇ ನಿವೇಶನಗಳನ್ನು ವಾಪಾಸು ಕೊಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಹುಶಃ 14 ನಿವೇಶನಗಳು ತಮ್ಮಗೆ ಕುತ್ತು ತರುತ್ತವೆ ಎಂದು ಜ್ಞಾನೋದಯವಾಗಿ ಆ ನಿವೇಶನಗಳನ್ನು ವಾಪಾಸ್ ಕೊಟ್ಟಿರಬೇಕು ಎಂದು ವಾಗ್ದಾಳಿ ನಡೆಸಿದರು.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…