ರಾಜ್ಯ

ಕೆಲವೇ ದಿನಗಳಲ್ಲಿ ಜೆಡಿಎಸ್‌ನ ಜಿಟಿಡಿ ಕಾಂಗ್ರೆಸ್‌ ಸೇರಲಿದ್ದಾರೆ: ಮಧು ಬಂಗಾರಪ್ಪ

ಬೆಂಗಳೂರು : ಮುಂಬರುವ ದಿನಗಳಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್‌ ಶಾಸಕ ಜಿ.ಟಿ ದೇವೇಗೌಡ ಕಾಂಗ್ರೆಸ್‌ ಪಕ್ಷ ಸೇರಿಕೊಳ್ಳಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ನಡೆದ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾದಿದ ಸಚಿವರು, ಹಲವಾರು ಜನರು ಈಗಾಗಲೇ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಜಿ.ಟಿ ದೇವೇಗೌಡರು ನಮಗೆ ತುಂಬಾ ಹಳಬರು, ಸ್ವಲ್ಪ ದಿನ ನಮ್ಮಿಂದ ದೂರವಾಗಿದ್ದರು. ಈಗ ಮತ್ತೆ ಕೆಲವೇ ದಿನಗಲಲ್ಲಿ ಕಾಂಗ್ರೆಸ್‌ ಪಕ್ಷ ಸೇರಿಕೊಳ್ಳಲಿದ್ದಾರೆ. ಅವರನ್ನು ನಮ್ಮ ಹತ್ತಿರವೇ ಇರುವ ಹಾಗೆ ನೋಡಿಕೊಳ್ಳುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಈಗಾಗಲೇ ಶಾಸಕ ಚನ್ನಬಸಪ್ಪ ನಮ್ಮ ಹತ್ತಿರದಲ್ಲಿದ್ದಾರೆ ಎಂದೂ ಅವರು ಹೇಳಿದ್ದಾರೆ.

ಕಾಂಗ್ರೆಸ್‌ ಪಕ್ಷದಲ್ಲಿ ಒಳ ಜಗಳಗಳು ಹೆಚ್ಚಾಗಿದ್ದು,ಪಕ್ಷ ಬೀಳಲಿದೆ ಹಾಗಾಗಿ ಆಪರೇಷನ್‌ ಹಸ್ತ ಮಾಡುತ್ತಿದ್ದಾರೆ ಎಂದು ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ತೀವ್ರ ತರಾಟೆ ತೆಗೆದುಕೊಂಡ ಬೆನ್ನಲ್ಲೇ, ಬಿಜೆಪಿಯವರು ಹಣದ ಆಸೆ ತೋರಿಸಿ ಮತ್ತೆ ಆಪರೆಷನ್‌ ಕಮಲ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಲಾಗಿತ್ತು.
ಇದರ ನಡುವೆ ಹಳೇ ಮೈಸೂರು ಭಾಗದ ಪ್ರಭಾವಿ ನಾಯಕ ಜಿಟಿ ದೇವೇಗೌಡರು ಕಾಂಗ್ರೆಸ್‌ ಸೇರಲಿದ್ದಾರೆ ಎಂಬ ಹೇಳಿಕೆ ಹಲವಾರು ಚರ್ಚೆಗೆ ಗ್ರಾಸವಾಗಿದೆ.

andolanait

Recent Posts

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

21 mins ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

1 hour ago

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

6 hours ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

6 hours ago

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

6 hours ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

6 hours ago