ಬೆಂಗಳೂರು: ಮಹಿಳಾ ಸಬಲೀಕರಣ ಗುರಿಯಾಗಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷ ಫಿಲೆಮಾನ್ ಯಾಂಗ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇಂದು (ಫೆ.7) ನಗರಕ್ಕೆ ಭೇಟಿ ನೀಡಿದ ಅವರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಜೊತೆ ಮಾತುಕತೆ ನಡೆಸಿದರು. ಈ ವೇಳೆ ಶಾಲಿನಿ ರಜನೀಶ್ ʼಒಂದು ರಾಜ್ಯ, ಹಲವು ಜಗತ್ತುʼ ಕುರಿತಾದ ಪುಸ್ತಕವನ್ನು ಫಿಲೆಮನ್ ಅವರಿಗೆ ಉಡುಗೊರೆಯಾಗಿ ನೀಡಿದರು.
ರಾಜ್ಯ ಮಹಿಳೆಯರ ಸಬಲೀಕರಣದಲ್ಲಿ ಈ ಗ್ಯಾರಂಟಿ ಯೋಜನೆಗಳು ಹೇಗೆ ನೆರವಾಗುತ್ತಿವೆ ಎಂಬುದರ ಬಗ್ಗೆ ಶಾಲಿನಿ ರಜನೀಶ್ ಅವರು ವಿವರಿಸಿದರು.
ಇದೇ ವೇಳೆ ಮಾಹಿತಿ ತಂತ್ರಜ್ಞಾನ, ತಂತ್ರಾಂಶ ಅಭಿವೃದ್ದಿ, ಕೃತಕ ಬುದ್ಧಿಮತ್ತೆ ಅಭಿವೃದ್ಧಿ ಕಾರ್ಯಗಳ ಉತ್ತೇಜನಕ್ಕೆ ರಾಜ್ಯ ಸರ್ಕಾರದ ಕ್ರಮಗಳ ಬಗ್ಗೆ ಅವರು ಮಾಹಿತಿ ಪಡೆದುಕೊಂಡರು ಎಂದು ತಿಳಿಸಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…