ಬೆಂಗಳೂರು: ಬಿಜೆಪಿ ಎಷ್ಟೇ ಅಪಪ್ರಚಾರ ಮಾಡಿದರೂ ಜನರಿಗೆ ಗ್ಯಾರಂಟಿ ಯೋಜನೆಗಳು ನೇರವಾಗಿ ತಲುಪುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಸುಳ್ಳು ಆಪಾದನೆ ಮಾಡಿದ್ದಾರೆ. ಜನ ಇದನ್ನು ನಂಬಿಲ್ಲ. ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಗಳನ್ನು ಗೆಲ್ಲಿಸಿದ್ದಾರೆ ಎಂದರು.
ಈ ವೇಳೆ ಮಾತನಾಡಿದ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು, ಈ ಹಿಂದೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಯಾವುದೇ ಗ್ಯಾರಂಟಿ ನೀಡದೇ ನಾವು 18 ಉಪಚುನಾವಣೆಗಳನ್ನು ಗೆದ್ದಿದ್ದೆವು ಎಂದು ತಿರುಗೇಟು ನೀಡಿದರು.
ಈ ವೇಳೆ ಆಪರೇಷನ್ ಕಮಲ ಮಾಡಿ 18 ಚುನಾವಣೆಗಳನ್ನು ಗೆಲ್ಲಲಾಯಿತು ಎಂದು ಸಚಿವ ಜಮೀರ್ ಅಹಮದ್ ಖಾನ್ ಲೇವಡಿ ಮಾಡಿದರು. ಬಿಜೆಪಿ ಯಾವ ಅವಧಿಯಲ್ಲೂ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬಂದಿಲ್ಲ ಎಂದಾಗ ಬಿ.ವೈ.ವಿಜಯೇಂದ್ರ, ನಿಮಗೆ ಗ್ಯಾರಂಟಿಗಳ ಮೇಲೆ ಅಷ್ಟು ವಿಶ್ವಾಸವಿದ್ದರೆ ಶಿಗ್ಗಾವಿ ಉಪಚುನಾವಣೆಯಲ್ಲಿ ನಮ್ಮ ಸಮುದಾಯದವರು ಮುಖ್ಯಮಂತ್ರಿಯಾಗಿ ಮುಂದುವರೆಯಬೇಕಾದರೆ ಕಾಂಗ್ರೆಸ್ ಅನ್ನು ಗೆಲ್ಲಿಸಿ ಎಂದು ಮತಭಿಕ್ಷೆ ಬೇಡಿದ್ದೇಕೆ? ಎಂದು ಪ್ರಶ್ನಿಸಿದರು.
ಈ ವೇಳೆ ಆಡಳಿತ ಪಕ್ಷ ಹಾಗೂ ವಿಪಕ್ಷ ನಾಯಕರ ನಡುವೆ ತೀವ್ರ ಕೋಲಾಹಲ ಸೃಷ್ಟಿಯಾದ ಘಟನೆ ನಡೆಯಿತು.
ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…
ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…
ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್ ನ್ಯೂಸ್ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…
ಕಲಬುರ್ಗಿ: ಟಾರ್ಚ್ ಹಿಡಿದು ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…
ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…
ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…