ರಾಜ್ಯ

ಜನರಿಗೆ ಗ್ಯಾರಂಟಿ ಯೋಜನೆಗಳು ನೇರವಾಗಿ ತಲುಪುತ್ತಿವೆ: ಸಿಎಂ ಸಿದ್ದರಾಮಯ್ಯ ಸಂತಸ

ಬೆಂಗಳೂರು: ಬಿಜೆಪಿ ಎಷ್ಟೇ ಅಪಪ್ರಚಾರ ಮಾಡಿದರೂ ಜನರಿಗೆ ಗ್ಯಾರಂಟಿ ಯೋಜನೆಗಳು ನೇರವಾಗಿ ತಲುಪುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಸುಳ್ಳು ಆಪಾದನೆ ಮಾಡಿದ್ದಾರೆ. ಜನ ಇದನ್ನು ನಂಬಿಲ್ಲ. ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಗಳನ್ನು ಗೆಲ್ಲಿಸಿದ್ದಾರೆ ಎಂದರು.

ಈ ವೇಳೆ ಮಾತನಾಡಿದ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು, ಈ ಹಿಂದೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಯಾವುದೇ ಗ್ಯಾರಂಟಿ ನೀಡದೇ ನಾವು 18 ಉಪಚುನಾವಣೆಗಳನ್ನು ಗೆದ್ದಿದ್ದೆವು ಎಂದು ತಿರುಗೇಟು ನೀಡಿದರು.

ಈ ವೇಳೆ ಆಪರೇಷನ್ ಕಮಲ ಮಾಡಿ 18 ಚುನಾವಣೆಗಳನ್ನು ಗೆಲ್ಲಲಾಯಿತು ಎಂದು ಸಚಿವ ಜಮೀರ್ ಅಹಮದ್ ಖಾನ್ ಲೇವಡಿ ಮಾಡಿದರು. ಬಿಜೆಪಿ ಯಾವ ಅವಧಿಯಲ್ಲೂ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬಂದಿಲ್ಲ ಎಂದಾಗ ಬಿ.ವೈ.ವಿಜಯೇಂದ್ರ, ನಿಮಗೆ ಗ್ಯಾರಂಟಿಗಳ ಮೇಲೆ ಅಷ್ಟು ವಿಶ್ವಾಸವಿದ್ದರೆ ಶಿಗ್ಗಾವಿ ಉಪಚುನಾವಣೆಯಲ್ಲಿ ನಮ್ಮ ಸಮುದಾಯದವರು ಮುಖ್ಯಮಂತ್ರಿಯಾಗಿ ಮುಂದುವರೆಯಬೇಕಾದರೆ ಕಾಂಗ್ರೆಸ್ ಅನ್ನು ಗೆಲ್ಲಿಸಿ ಎಂದು ಮತಭಿಕ್ಷೆ ಬೇಡಿದ್ದೇಕೆ? ಎಂದು ಪ್ರಶ್ನಿಸಿದರು.

ಈ ವೇಳೆ ಆಡಳಿತ ಪಕ್ಷ ಹಾಗೂ ವಿಪಕ್ಷ ನಾಯಕರ ನಡುವೆ ತೀವ್ರ ಕೋಲಾಹಲ ಸೃಷ್ಟಿಯಾದ ಘಟನೆ ನಡೆಯಿತು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

26 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

3 hours ago

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

15 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

16 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

18 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

18 hours ago