ರಾಜ್ಯ

ಗ್ಯಾರಂಟಿ ಯೋಜನೆ ನಿಲ್ಲಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಗ್ಯಾರಂಟಿ ಯೋಜನೆಗಳ ಬಗ್ಗೆ ಕೆಲ ಊಹಾಪೋಹಗಳು ಹುಟ್ಟಿಕೊಂಡಿವೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಇಂದು(ಜೂ.14) ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಗ್ಯಾರಂಟಿ ಯೋಜನೆಗಳು ಪುನರ್‌ ಪರಿಶೀಲನೆಯೂ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾವು ಮತಕ್ಕಾಗಿ ಗ್ಯಾರಂಟಿ ಯೋಜನೆ ಜಾರಿಗೆ ತಂದಿಲ್ಲ. ಬಡವರಿಗಾಗಿ ಪಂಚ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ ಎಂದು ಪುನರುಚ್ಚರಿಸಿದರು.

ನಮಗೆ ಲೋಕಸಭಾ ಚುನಾವಣೆಯ ಸ್ಥಾನಗಳಿಗೆಯಲ್ಲಿ ಹಿನ್ನಡೆಯಾಗಿರಬಹುದು. ಆದರೆ ಮತಗಳಿಕೆ ವಿಚಾರದಲ್ಲಿ ಶೇಕಡ 13 ರಷ್ಟು ಹೆಚ್ಚಾಗಿದೆ. ಹೈಕಮಾಂಡ್‌ಗೆ ಸೋಲಿನ ಬಗ್ಗೆ ಕಾರಣ ಹೇಳುತ್ತೇವೆ. ಮೈಸೂರು ಸೋತಿದ್ದು, ಚಾಮರಾಜನಗರ ಗೆದ್ದಿದ್ದೇವೆ. ರಾಜ್ಯದಲ್ಲಿ ಲೋಕಸಭಾ ಸ್ಥಾನಗಳಿಗೆಯಲ್ಲಿ 1 ರಿಂದ 9 ಸ್ಥಾನ ಗೆದ್ದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 

 

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಾಪಮಾನ ಏರಿಕೆ ಬೆನ್ನಲ್ಲೇ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ…

25 mins ago

ಓದುಗರ ಪತ್ರ: ವಿಶ್ವ ಶಾಂತಿಗೆ ಪೋಪ್ ಕರೆ ಸ್ವಾಗತಾರ್ಹ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…

1 hour ago

ಓದುಗರ ಪತ್ರ: ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಮೊತ್ತ ಹೆಚ್ಚಿಸಿ

ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್‌ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ…

1 hour ago

ಓದುಗರ ಪತ್ರ: ದಿಕ್ಕು ತಪ್ಪುತ್ತಿರುವ ಕೊಲ್ಲಿ ಸಮರ

ಕೊಲ್ಲಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿದ್ದ ಯುದ್ಧದ ನಿಲುಗಡೆಗಾಗಿ ಕರೆಯಲಾಗಿದ್ದ ಪಾಕಿಸ್ತಾನ ನೇತೃತ್ವದ ಸಂಧಾನ ಸಭೆ ವಿಫಲವಾಗುವುದರೊಂದಿಗೆ ಕೊಲ್ಲಿಯಲ್ಲಿ…

1 hour ago

ಓದುಗರ ಪತ್ರ: ರಸ್ತೆ ದುರಸ್ತಿಗೊಳಿಸಿ

ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…

4 hours ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಕಸ ತೆರವುಗೊಳಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್‌ಗಳನ್ನು…

4 hours ago