ರಾಜ್ಯ

ಗ್ಯಾರಂಟಿ ಯೋಜನೆ ನಿಲ್ಲಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಗ್ಯಾರಂಟಿ ಯೋಜನೆಗಳ ಬಗ್ಗೆ ಕೆಲ ಊಹಾಪೋಹಗಳು ಹುಟ್ಟಿಕೊಂಡಿವೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಇಂದು(ಜೂ.14) ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಗ್ಯಾರಂಟಿ ಯೋಜನೆಗಳು ಪುನರ್‌ ಪರಿಶೀಲನೆಯೂ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾವು ಮತಕ್ಕಾಗಿ ಗ್ಯಾರಂಟಿ ಯೋಜನೆ ಜಾರಿಗೆ ತಂದಿಲ್ಲ. ಬಡವರಿಗಾಗಿ ಪಂಚ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ ಎಂದು ಪುನರುಚ್ಚರಿಸಿದರು.

ನಮಗೆ ಲೋಕಸಭಾ ಚುನಾವಣೆಯ ಸ್ಥಾನಗಳಿಗೆಯಲ್ಲಿ ಹಿನ್ನಡೆಯಾಗಿರಬಹುದು. ಆದರೆ ಮತಗಳಿಕೆ ವಿಚಾರದಲ್ಲಿ ಶೇಕಡ 13 ರಷ್ಟು ಹೆಚ್ಚಾಗಿದೆ. ಹೈಕಮಾಂಡ್‌ಗೆ ಸೋಲಿನ ಬಗ್ಗೆ ಕಾರಣ ಹೇಳುತ್ತೇವೆ. ಮೈಸೂರು ಸೋತಿದ್ದು, ಚಾಮರಾಜನಗರ ಗೆದ್ದಿದ್ದೇವೆ. ರಾಜ್ಯದಲ್ಲಿ ಲೋಕಸಭಾ ಸ್ಥಾನಗಳಿಗೆಯಲ್ಲಿ 1 ರಿಂದ 9 ಸ್ಥಾನ ಗೆದ್ದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 

 

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

8 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

8 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

9 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

9 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

9 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

10 hours ago