ಬಳ್ಳಾರಿ: ರಾಜ್ಯದ ಜನರ ಏಳ್ಗೆಗಾಗಿಯೇ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಅವುಗಳನ್ನು ನಿಲ್ಲಿಸುವುದಿಲ್ಲ ಮುಂದುವರಿಸುತ್ತೇವೆ ಎಂದು ಕಾನೂನು ಸಚಿವ ಹೆಚ್ಕೆ ಪಾಟೀಲ್ ತಿಳಿಸದರು.
ಇಂದು (ಫೆ.24) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾವತಿಯಾಗದ ಗೃಹಲಕ್ಷ್ಮೀ ಹಣ ಬಿಡುಗಡೆಗೆ ಸರ್ಕಾರ ಕ್ರಮ ಕೈಗೊಂಡಿದೆ. ಗ್ಯಾರಂಟಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದರು.
ಈಗ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳು ಅದೇ ರೀತಿಯಲ್ಲಿ ಮುಂದುವರಿಯುತ್ತವೆ. ಇದರಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದರು.
ಗ್ಯಾರಂಟಿ ಯೋಜನೆಗಳಿಗೆ 58 ಸಾವಿರ ಕೋಟಿ ಮೊತ್ತ ಖರ್ಚಾಗುತ್ತಿದೆ. ಇದು ಸಣ್ಣ ಮೊತ್ತ ಅಲ್ಲ. ರಾಜ್ಯದ ಜನರಿಗಾಗಿಯೇ ಈ ಯೋಜನೆಗಳನ್ನು ಪ್ರಾರಂಭ ಮಾಡಿದ್ದೇವೆ. ನಮಗೆ ಬದ್ಧತೆ ಇದೆ, ಮುಂದುವರಿಸುತ್ತೇವೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳಿಗೆ ನಮ್ಮ ಪಕ್ಷದ ಶಾಸಕರೂ ಯಾರು ತಕರಾರು ತೆಗೆದಿಲ್ಲ. ಇವುಗಳ ವಿರುದ್ಧವು ಇಲ್ಲ ಎಂದರು.
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…
ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…
ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…