Guarantee schemes will continue DCM D K Shivakumar
ಬೆಂಗಳೂರು: ದೇವರು ಶಕ್ತಿ ಕೊಡುವವರೆಗೂ, ಮುಂದೆ ಜನ ನಮಗೆ ಅಧಿಕಾರ ಕೊಡುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲದೆ ನಿರಂತರವಾಗಿ ಮುಂದುವರೆಯುತ್ತವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು, ಎಷ್ಟೇ ಟೀಕೆ ಮಾಡಲಿ, ಜನ ಖುಷಿಯಾಗಿದ್ದಾರೆ. ಮಹಿಳಾ ಪ್ರಯಾಣಿಕರು ತಮಗೆ ಶೇಂಗಾ ಹೋಳಿಗೆ ಮತ್ತು ರೊಟ್ಟಿ ನೀಡಿ ತಮ ಸಂತಸ ಹಂಚಿಕೊಂಡಿದ್ದಾರೆ. ಟೀಕೆಗಳು ಸಾಯುತ್ತವೆ, ಕಾರ್ಯಕ್ರಮಗಳು ಉಳಿಯುತ್ತವೆ ಎಂದರು.
ಇಡೀ ದೇಶಕ್ಕೆ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಮಾದರಿಯಾಗಿವೆ. ಮಹಿಳೆಯರಿಗೆ ಉಚಿತ ಪ್ರಯಾಣದಿಂದ ಹಣ ಉಳಿತಾಯವಾಗುತ್ತಿದೆ. ದೇವಸ್ಥಾನಗಳಿಗೆ, ಸಂಬಂಧಿಕರ ಮನೆಗೆ, ಕೆಲಸಕ್ಕೆ ಹೋಗುವ ಮಹಿಳೆಯರಿಗೆ ಹಣ ಉಳಿತಾಯವಾಗುತ್ತಿರುವುದಂತೂ ನಿಜ. ಇದರಿಂದಾಗಿ ಅವರು ಸಂತಸದಿಂದಿದ್ದಾರೆ. ವರ್ಗ, ಜಾತಿರಹಿತವಾಗಿ ಈ ಯೋಜನೆಯನ್ನು ಸಚಿವ ರಾಮಲಿಂಗಾರೆಡ್ಡಿಯವರ ನೇತೃತ್ವದಲ್ಲಿ ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
ಕೊಟ್ಟ ಮಾತನ್ನು ಉಳಿಸಿಕೊಂಡ ಸಮಾಧಾನ ನಮಗಿದೆ. ಜನ ನಮಗೆ ಎಲ್ಲಿಯವರೆಗೂ ಅಧಿಕಾರ ಕೊಡುತ್ತಾರೋ, ಅಲ್ಲಿಯವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯುತ್ತವೆ ಎಂದರು.
ರಾಜ್ಯ ಸರ್ಕಾರ ಈ ಹಿಂದೆ ವೃದ್ಧಾಪ್ಯ ವೇತನ, ವಿಧವಾ ವೇತನ, ಬ್ಯಾಂಕ್ ರಾಷ್ಟ್ರೀಕರಣ, ಸ್ತ್ರೀಶಕ್ತಿ ಸಂಘಟನೆಗಳ ರಚನೆ, ಯಾವುದೇ ಕಾರ್ಯಕ್ರಮಗಳಾಗಿದ್ದರೂ ಜನರ ಹೃದಯ ಮತ್ತು ಬದುಕಿಗೆ ಹತ್ತಿರವಾಗಿವೆ. ಅವುಗಳನ್ನು ಬಿಜೆಪಿ ಸೇರಿದಂತೆ ಯಾವುದೇ ಸರ್ಕಾರಗಳು ಅಧಿಕಾರಕ್ಕೆ ಬಂದರೂ ಬದಲಾಯಿಸಲಾಗಿಲ್ಲ ಎಂದು ಹೇಳಿದರು.
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…