ರಾಜ್ಯ

ಗ್ಯಾರಂಟಿ ಯೋಜನೆಗಳು ನಿಲ್ಲದೆ ನಿರಂತರವಾಗಿ ಮುಂದುವರೆಯುತ್ತವೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ಶಕ್ತಿ ಕೊಡುವವರೆಗೂ, ಮುಂದೆ ಜನ ನಮಗೆ ಅಧಿಕಾರ ಕೊಡುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲದೆ ನಿರಂತರವಾಗಿ ಮುಂದುವರೆಯುತ್ತವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು, ಎಷ್ಟೇ ಟೀಕೆ ಮಾಡಲಿ, ಜನ ಖುಷಿಯಾಗಿದ್ದಾರೆ. ಮಹಿಳಾ ಪ್ರಯಾಣಿಕರು ತಮಗೆ ಶೇಂಗಾ ಹೋಳಿಗೆ ಮತ್ತು ರೊಟ್ಟಿ ನೀಡಿ ತಮ ಸಂತಸ ಹಂಚಿಕೊಂಡಿದ್ದಾರೆ. ಟೀಕೆಗಳು ಸಾಯುತ್ತವೆ, ಕಾರ್ಯಕ್ರಮಗಳು ಉಳಿಯುತ್ತವೆ ಎಂದರು.

ಇಡೀ ದೇಶಕ್ಕೆ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಮಾದರಿಯಾಗಿವೆ. ಮಹಿಳೆಯರಿಗೆ ಉಚಿತ ಪ್ರಯಾಣದಿಂದ ಹಣ ಉಳಿತಾಯವಾಗುತ್ತಿದೆ. ದೇವಸ್ಥಾನಗಳಿಗೆ, ಸಂಬಂಧಿಕರ ಮನೆಗೆ, ಕೆಲಸಕ್ಕೆ ಹೋಗುವ ಮಹಿಳೆಯರಿಗೆ ಹಣ ಉಳಿತಾಯವಾಗುತ್ತಿರುವುದಂತೂ ನಿಜ. ಇದರಿಂದಾಗಿ ಅವರು ಸಂತಸದಿಂದಿದ್ದಾರೆ. ವರ್ಗ, ಜಾತಿರಹಿತವಾಗಿ ಈ ಯೋಜನೆಯನ್ನು ಸಚಿವ ರಾಮಲಿಂಗಾರೆಡ್ಡಿಯವರ ನೇತೃತ್ವದಲ್ಲಿ ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಕೊಟ್ಟ ಮಾತನ್ನು ಉಳಿಸಿಕೊಂಡ ಸಮಾಧಾನ ನಮಗಿದೆ. ಜನ ನಮಗೆ ಎಲ್ಲಿಯವರೆಗೂ ಅಧಿಕಾರ ಕೊಡುತ್ತಾರೋ, ಅಲ್ಲಿಯವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯುತ್ತವೆ ಎಂದರು.

ರಾಜ್ಯ ಸರ್ಕಾರ ಈ ಹಿಂದೆ ವೃದ್ಧಾಪ್ಯ ವೇತನ, ವಿಧವಾ ವೇತನ, ಬ್ಯಾಂಕ್ ರಾಷ್ಟ್ರೀಕರಣ, ಸ್ತ್ರೀಶಕ್ತಿ ಸಂಘಟನೆಗಳ ರಚನೆ, ಯಾವುದೇ ಕಾರ್ಯಕ್ರಮಗಳಾಗಿದ್ದರೂ ಜನರ ಹೃದಯ ಮತ್ತು ಬದುಕಿಗೆ ಹತ್ತಿರವಾಗಿವೆ. ಅವುಗಳನ್ನು ಬಿಜೆಪಿ ಸೇರಿದಂತೆ ಯಾವುದೇ ಸರ್ಕಾರಗಳು ಅಧಿಕಾರಕ್ಕೆ ಬಂದರೂ ಬದಲಾಯಿಸಲಾಗಿಲ್ಲ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

1 hour ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

17 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

18 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

19 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

20 hours ago