ರಾಜ್ಯ

ರಾಜ್ಯ ಸ್ರಕಾರ ತಂದಿರುವ ಗ್ಯಾರೆಂಟಿಗಳು ತಾತ್ಕಾಲಿಕ : ಹೆಚ್‌ಡಿಡಿ

ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿಗಳನ್ನು ʼಸೋ ಕಾಲ್ಡ್‌ ಗ್ಯಾರಂಟಿಗಳುʼ ಎಂದು ಕಟುವಾಗಿ ಟೀಕಿಸಿದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು; ತಾತ್ಕಾಲಿಕ ರಾಜಕೀಯ ಲಾಭಕ್ಕಾಗಿ ಇಂಥ ಕಾರ್ಯಕ್ರಮಗಳನ್ನು ಜಾರಿ ಮಾಡುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.

ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅನಗತ್ಯ ವೆಚ್ಚದ ಅನುತ್ಪಾದಕ, ಅಲ್ಪಾವಧಿ ಲಾಭದ ಗ್ಯಾರಂಟಿಗಳು ಇವಾಗಿವೆ ಎಂದು ಕಾಂಗ್ರೆಸ್‌ ಸರಕಾರದ ಪಂಚ ಗ್ಯಾರಂಟಿಗಳ ಬಗ್ಗೆ ದೇಶದ ಜನರ ಗಮನ ಸೆಳೆದರು.

ಕಾಂಗ್ರೆಸ್‌ ಪಕ್ಷದ ಸದಸ್ಯರ ಆಕ್ಷೇಪಣೆ, ಗದ್ದಲದ ನಡುವೆಯೂ ತಮ್ಮ ಮಾತುಗಳನ್ನು ಮುಂದುವರಿಸಿದ ಅವರು; ಜಂತರ್‌ಮಂತರ್‌ನಲ್ಲಿ ಕಾಂಗ್ರೆಸ್‌ನವರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಅವರು ನನ್ನನ್ನೂ ಸೇರಿ ಎಲ್ಲರನ್ನೂ ಬರುವಂತೆ ಕರೆದಿದ್ದಾರೆ. ಈ ದೇಶದ ರಾಜಕೀಯ ಪರಿಸ್ಥಿತಿ ಹೇಗಾಗಿದೆ ಎಂದರೆ, ರಾಜಕೀಯ ಲಾಭಕ್ಕಾಗಿ ಅನಗತ್ಯ ವೆಚ್ಚದ ಅನುತ್ಪಾದಕ ವೆಚ್ಚಗಳನ್ನು ಯಥೇಚ್ಛವಾಗಿ ಮಾಡಲಾಗುತ್ತಿದೆ. ನಾನೆಂದೂ ಇಂಥದ್ದನ್ನು ಮಾಡಿಲ್ಲ ಎಂದರು.

andolanait

Recent Posts

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

46 mins ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

3 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

9 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

15 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

15 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

15 hours ago