ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತಂದಿರುವ ಪಂಚ ಗ್ಯಾರೆಂಟಿ ಯೋಜನೆಗಳನ್ನು ಬಿಜೆಪಿ-ಕೆಡಿಎಸ್ ಪಕ್ಷಗಳು ವಿರೋಧಿಸುತ್ತಿವೆ. ಲೋಕಸಭಾ ಚುನಾವಣೆಯಲ್ಲಿ ಬಜಿಪಿ-ಜೆಡಿಎಸ್ ಮಿತ್ರ ಪಕ್ಷ ಜಯಿಸಿದರೆ ರಾಜ್ಯದಲ್ಲಿ ಜಾರಿಯಲ್ಲಿರವ ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳನ್ನು ರುದ್ದು ಮಾಡಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಿಪಕ್ಷಗಳ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಪಕ್ಷಗಳು ಗ್ಯಾರೆಂಟಿ ಯೋಜನೆಗಳನ್ನು ವಿರೋಧಿಸುತ್ತಲೇ ಬರುತ್ತಿವೆ. ಅವರು ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಗ್ಯಾರೆಂಟಿ ಯೋಜನೆ ರದ್ದುಗೊಳಿಸುವ ಕಾಯ್ದೆಗೆ ಅನುಮೋದನೆ ನೀಡಬಹುದು. ಈ ಎಲ್ಲಾ ವಿಚಾರಗಳನ್ನು ಮುತದಾರರ ಬಳಿಗೆ ಕೊಂಡೊಯ್ಯಬೇಕು ಮತ್ತು ಇಂತಹ ವಿಚಾರಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.
ಯಾವುದೇ ಕಾರಣಕ್ಕೂ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಪುನರುಚ್ಚರಿಸಿದ ಡಿಸಿಎಂ, ಪ್ರಧಾನಿ ಮೋದಿಯವರು ಕಾಂಗ್ರೆಸ್ ಪರಿಕಲ್ಪನೆಯನ್ನು ಎರವಲು ಪಡೆಯುವ ಮೂಲಕ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಗ್ಯಾರಂಟಿ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಶಿವಕುಮಾರ್, ಬಿಜೆಪಿ ಯಾರನ್ನಾದರೂ ತಮ್ಮ ಪಕ್ಷದ ಅಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕನನ್ನಾಗಿ ಮಾಡಲಿ. ನಾವು ಅದರ ಬಗ್ಗೆ ಚಿಂತಿಸುವುದಿಲ್ಲ. ನಮಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ” ಎಂದರು. ಕಾಂಗ್ರೆಸ್ ಜಿಲ್ಲಾ ಮತ್ತು ಬ್ಲಾಕ್ ಮಟ್ಟದ ನಾಯಕರು ಗ್ಯಾರಂಟಿ ಯೋಜನೆಗಳನ್ನು ಪಡೆದುಕೊಳ್ಳುವಲ್ಲಿ ಜನರು ಎದುರಿಸುತ್ತಿರುವ ಅನಾನುಕೂಲತೆಗಳ ಬಗ್ಗೆ ಪಕ್ಷದ ನಾಯಕತ್ವಕ್ಕೆ ತಿಳಿಸಬೇಕು ಎಂದು ಅವರು ಹೇಳಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…