ರಾಜ್ಯ

ಬಿಜೆಪಿ ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಗ್ಯಾರೆಂಟಿಗಳು ರದ್ದು: ಡಿಕೆ ಶಿವಕುಮಾರ್‌

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ತಂದಿರುವ ಪಂಚ ಗ್ಯಾರೆಂಟಿ ಯೋಜನೆಗಳನ್ನು ಬಿಜೆಪಿ-ಕೆಡಿಎಸ್‌ ಪಕ್ಷಗಳು ವಿರೋಧಿಸುತ್ತಿವೆ. ಲೋಕಸಭಾ ಚುನಾವಣೆಯಲ್ಲಿ ಬಜಿಪಿ-ಜೆಡಿಎಸ್‌ ಮಿತ್ರ ಪಕ್ಷ ಜಯಿಸಿದರೆ ರಾಜ್ಯದಲ್ಲಿ ಜಾರಿಯಲ್ಲಿರವ ಕಾಂಗ್ರೆಸ್‌ ಗ್ಯಾರೆಂಟಿ ಯೋಜನೆಗಳನ್ನು ರುದ್ದು ಮಾಡಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಪ್ರಿಪಕ್ಷಗಳ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್‌ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಪಕ್ಷಗಳು ಗ್ಯಾರೆಂಟಿ ಯೋಜನೆಗಳನ್ನು ವಿರೋಧಿಸುತ್ತಲೇ ಬರುತ್ತಿವೆ. ಅವರು ಅಧಿಕಾರಕ್ಕೆ ಬಂದರೆ ಕಾಂಗ್ರೆಸ್‌ ಗ್ಯಾರೆಂಟಿ ಯೋಜನೆ ರದ್ದುಗೊಳಿಸುವ ಕಾಯ್ದೆಗೆ ಅನುಮೋದನೆ ನೀಡಬಹುದು. ಈ ಎಲ್ಲಾ ವಿಚಾರಗಳನ್ನು ಮುತದಾರರ ಬಳಿಗೆ ಕೊಂಡೊಯ್ಯಬೇಕು ಮತ್ತು ಇಂತಹ ವಿಚಾರಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

ಯಾವುದೇ ಕಾರಣಕ್ಕೂ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಪುನರುಚ್ಚರಿಸಿದ ಡಿಸಿಎಂ, ಪ್ರಧಾನಿ ಮೋದಿಯವರು ಕಾಂಗ್ರೆಸ್‌ ಪರಿಕಲ್ಪನೆಯನ್ನು ಎರವಲು ಪಡೆಯುವ ಮೂಲಕ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಗ್ಯಾರಂಟಿ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಶಿವಕುಮಾರ್, ಬಿಜೆಪಿ ಯಾರನ್ನಾದರೂ ತಮ್ಮ ಪಕ್ಷದ ಅಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕನನ್ನಾಗಿ ಮಾಡಲಿ. ನಾವು ಅದರ ಬಗ್ಗೆ ಚಿಂತಿಸುವುದಿಲ್ಲ. ನಮಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ” ಎಂದರು. ಕಾಂಗ್ರೆಸ್ ಜಿಲ್ಲಾ ಮತ್ತು ಬ್ಲಾಕ್ ಮಟ್ಟದ ನಾಯಕರು ಗ್ಯಾರಂಟಿ ಯೋಜನೆಗಳನ್ನು ಪಡೆದುಕೊಳ್ಳುವಲ್ಲಿ ಜನರು ಎದುರಿಸುತ್ತಿರುವ ಅನಾನುಕೂಲತೆಗಳ ಬಗ್ಗೆ ಪಕ್ಷದ ನಾಯಕತ್ವಕ್ಕೆ ತಿಳಿಸಬೇಕು ಎಂದು ಅವರು ಹೇಳಿದರು.

andolanait

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

3 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

16 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

16 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

16 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

16 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

16 hours ago