ರಾಜ್ಯ

ಕೋವಿಡ್‌ ಸೋಂಕಿತರಿಗೆ ಮಾರ್ಗಸೂಚಿ ಕಡ್ಡಾಯ : ದಿನೇಶ್‌ ಗುಂಡುರಾವ್‌

ಬೆಂಗಳೂರು:  ರಾಜ್ಯದಲ್ಲಿ ಕೋವಿಡ್‌ ಆತಂಕ ಇರುವ ಹಿನ್ನೆಲೆ ಹೊಸ ವರ್ಷ ಆಚರಣೆಯಲ್ಲಿ ಅಧಿಕ ಜಾಗ್ರತೆ ವಹಿಸುವಂತೆ ಈಗಾಗಲೇ ಸಲಹೆ ಸೂಚನೆಗಳನ್ನು ನೀಡಲಾಗಿದೆ. ಜೊತೆಗೆ ಕೋವಿಡ್‌ ಸೋಂಕಿತ ವ್ಯಕ್ತಿಗಳಿಗೆ ಕೆಲವು ಮಾರ್ಗಸೂಚಿಗಳನ್ನು ಕಡ್ಡಾಯಗೊಳಿಸಲಾಗಿದೆ.

ಈ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೊರೊನಾ ಸೋಂಕಿತ ವ್ಯಕ್ತಿಗಳು ಕಡ್ಡಾಯವಾಗಿ 7 ದಿನ ಹೋಂ ಐಸೊಲೇಷನ್‌ ನಲ್ಲಿ ಇರುವಂತೆ, ಹಾಗೆ ಮಾಸ್ಕ್‌ ಬಳಕೆ ಸೇರಿದಂತೆ ಕೋವಿಡ್‌ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಿದ್ದಾರೆ.

ಕೋವಿಡ್‌ ಸಂಬಂಧಿತ ಸಭೆ ಬಳಿಕ ಮಾತನಾಡಿದ ಅವರು ಹೊಸ ವರ್ಷಕ್ಕೆ ಯಾವುದೇ ನಿರ್ಬಂಧ ಇಲ್ಲ ಆದರೆ ಜನರೇ ಹೆಚ್ಚು ದಟ್ಟಣೆ ಇರುವ ಜಾಗದಲ್ಲಿ ಸೇರದೇ ಇರುವಂತೆ ಜಾಗೃತೆ ವಹಿಸಿ.

ಕೆಮ್ಮು, ಜ್ವರ, ನೆಗಡಿ ಕಾಣಿಸಿಕೊಂಡರೆ ಮಕ್ಕಳನ್ನು ಶಾಲೆಗೆ ಕಳುಹಿಸಬೇಡಿ , ಉದ್ಯೋಗಿಗಳಿಗೂ ಕಡ್ಡಾಯ ರಜೆ ನೀಡಿ ಎಂದು ಸೂಚನೆ ನೀಡಿದ್ದಾರೆ.

ಹೊರಗಡೆ ಓಡಾಡುವಾಗ ಮಾಸ್ಕ್‌ ಧರಿಸಿ, ಶುಚಿತ್ವ ಕಾಪಾಡಿಕೊಳ್ಳಿ , ರೋಗ ಲಕ್ಷಣಗಳನ್ನು ಕಡೆಗಣಿಸಬೇಡಿ. ಜೆಎನ್‌.1 ಉಪತಳಿ ರಾಜ್ಯದಲ್ಲಿ ಹರಡುವ ಆತಂಕ ಹೆಚ್ಚಿದೆ.

ಈಗಾಗಲೇ ಟೆಸ್ಟಿಂಗ್‌ ಹೆಚ್ಚಿಸಿದ್ದು 436 ಪಾಸಿಟಿವ್‌ ಪ್ರಕರಣದಗಳು ರಾಜ್ಯದಲ್ಲಿ ಇದೆ. ಹೆಚ್ಚುವರಿ ಆಕ್ಸಿಜನ್‌ ಕಂಟೈನರ್‌ , ವ್ಯಾಕ್ಸಿನ್‌ ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ಸಚಿವರು ಈ ವೇಳೆ ಹೇಳಿದರು.

andolanait

Recent Posts

ಓದುಗರ ಪತ್ರ: ಓವೆಲ್ ಮೈದಾನದಲ್ಲಿ ಆಸನಗಳನ್ನು ದುರಸ್ತಿ ಮಾಡಿ

ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…

57 mins ago

ಓದುಗರ ಪತ್ರ: ಒಳಮೀಸಲಾತಿ; ಸಮಾನ ಅವಕಾಶ ಕಲ್ಪಿಸಿ

ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…

58 mins ago

ಓದುಗರ ಪತ್ರ: ನ್ಯಾಯಾಲಯದ ಬಳಿ ಸಿಗ್ನಲ್ ಲೈಟ್ ಅಳವಡಿಸಿ

ಮೈಸೂರಿನ ವಿವಿಧ ವೃತ್ತಗಳಲ್ಲಿ ಹೊಸದಾಗಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದಾರೆ. ಆದರೆ ಚಾಮರಾಜಪುರಂನ ನ್ಯಾಯಾಲಯದ ಬಳಿ ವಾಹನ ಸಂಚಾರ ಹೆಚ್ಚಾಗಿದ್ದು, ನ್ಯಾಯಾಲಯದ…

60 mins ago

ಓದುಗರ ಪತ್ರ: ನಂದಿ ಭವನ ಮುಂಭಾಗದ ಮೋರಿ ಶುಚಿಗೊಳಿಸಿ

ಚಾಮರಾಜನಗರ ಪಟ್ಟಣದಲ್ಲಿರುವ ನಂದಿ ಭವನದಲ್ಲಿ ಮದುವೆ ಮತ್ತು ಇತರ ಸಮಾರಂಭಗಳು ನಡೆಯುತ್ತವೆ. ಕಾರ್ಯಕ್ರಮಗಳು ಮುಗಿದ ಮೇಲೆ ಉಳಿದ ಆಹಾರ ಪದಾರ್ಥಗಳನ್ನು…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ವಾಟ್ಸಾಪ್ ಹೇಳಿಕೆ, ಡೀಪ್ ಫೇಕ್ ಹಾವಳಿ, ಪಾಪರಾಜಿಗಳ ನಿಯಂತ್ರಣದತ್ತ

ನಕಲಿ ವಿಡಿಯೋಗಳ ಹಾವಳಿ, ಕೃತಕ ಬುದ್ಧಿಮತ್ತೆ ಬಳಸಿ ಡೀಪ್‌ಫೇಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ಏನು ಬೇಕಾದರೂ ಮಾಡಬಹುದು ಎನ್ನುವುದನ್ನು ತಡೆಯುವ…

1 hour ago

ಮಹದೇಶ್ವರ ಬೆಟ್ಟದ ಮಾರ್ಗದಲ್ಲಿ ಚಿರತೆ ಹಾವಳಿ

ಮಹಾದೇಶ್ ಎಂ.ಗೌಡ ನಿರಂತರವಾಗಿ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಸಾರ್ವಜನಿಕರಲ್ಲಿ ಭೀತಿ ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ…

1 hour ago