ರಾಜ್ಯ

ಕೋವಿಡ್‌ ಸೋಂಕಿತರಿಗೆ ಮಾರ್ಗಸೂಚಿ ಕಡ್ಡಾಯ : ದಿನೇಶ್‌ ಗುಂಡುರಾವ್‌

ಬೆಂಗಳೂರು:  ರಾಜ್ಯದಲ್ಲಿ ಕೋವಿಡ್‌ ಆತಂಕ ಇರುವ ಹಿನ್ನೆಲೆ ಹೊಸ ವರ್ಷ ಆಚರಣೆಯಲ್ಲಿ ಅಧಿಕ ಜಾಗ್ರತೆ ವಹಿಸುವಂತೆ ಈಗಾಗಲೇ ಸಲಹೆ ಸೂಚನೆಗಳನ್ನು ನೀಡಲಾಗಿದೆ. ಜೊತೆಗೆ ಕೋವಿಡ್‌ ಸೋಂಕಿತ ವ್ಯಕ್ತಿಗಳಿಗೆ ಕೆಲವು ಮಾರ್ಗಸೂಚಿಗಳನ್ನು ಕಡ್ಡಾಯಗೊಳಿಸಲಾಗಿದೆ.

ಈ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೊರೊನಾ ಸೋಂಕಿತ ವ್ಯಕ್ತಿಗಳು ಕಡ್ಡಾಯವಾಗಿ 7 ದಿನ ಹೋಂ ಐಸೊಲೇಷನ್‌ ನಲ್ಲಿ ಇರುವಂತೆ, ಹಾಗೆ ಮಾಸ್ಕ್‌ ಬಳಕೆ ಸೇರಿದಂತೆ ಕೋವಿಡ್‌ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಿದ್ದಾರೆ.

ಕೋವಿಡ್‌ ಸಂಬಂಧಿತ ಸಭೆ ಬಳಿಕ ಮಾತನಾಡಿದ ಅವರು ಹೊಸ ವರ್ಷಕ್ಕೆ ಯಾವುದೇ ನಿರ್ಬಂಧ ಇಲ್ಲ ಆದರೆ ಜನರೇ ಹೆಚ್ಚು ದಟ್ಟಣೆ ಇರುವ ಜಾಗದಲ್ಲಿ ಸೇರದೇ ಇರುವಂತೆ ಜಾಗೃತೆ ವಹಿಸಿ.

ಕೆಮ್ಮು, ಜ್ವರ, ನೆಗಡಿ ಕಾಣಿಸಿಕೊಂಡರೆ ಮಕ್ಕಳನ್ನು ಶಾಲೆಗೆ ಕಳುಹಿಸಬೇಡಿ , ಉದ್ಯೋಗಿಗಳಿಗೂ ಕಡ್ಡಾಯ ರಜೆ ನೀಡಿ ಎಂದು ಸೂಚನೆ ನೀಡಿದ್ದಾರೆ.

ಹೊರಗಡೆ ಓಡಾಡುವಾಗ ಮಾಸ್ಕ್‌ ಧರಿಸಿ, ಶುಚಿತ್ವ ಕಾಪಾಡಿಕೊಳ್ಳಿ , ರೋಗ ಲಕ್ಷಣಗಳನ್ನು ಕಡೆಗಣಿಸಬೇಡಿ. ಜೆಎನ್‌.1 ಉಪತಳಿ ರಾಜ್ಯದಲ್ಲಿ ಹರಡುವ ಆತಂಕ ಹೆಚ್ಚಿದೆ.

ಈಗಾಗಲೇ ಟೆಸ್ಟಿಂಗ್‌ ಹೆಚ್ಚಿಸಿದ್ದು 436 ಪಾಸಿಟಿವ್‌ ಪ್ರಕರಣದಗಳು ರಾಜ್ಯದಲ್ಲಿ ಇದೆ. ಹೆಚ್ಚುವರಿ ಆಕ್ಸಿಜನ್‌ ಕಂಟೈನರ್‌ , ವ್ಯಾಕ್ಸಿನ್‌ ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ಸಚಿವರು ಈ ವೇಳೆ ಹೇಳಿದರು.

andolanait

Recent Posts

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

2 mins ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

21 mins ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

30 mins ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

43 mins ago

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

1 hour ago

ವಾಚ್‌ ವಿಚಾರವಾಗಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…

1 hour ago